<p><strong>ಮರಕಲ್</strong>(ಜನವಾಡ): ಬೀದರ್ ತಾಲ್ಲೂಕಿನ ಮರಕಲ್ ಗ್ರಾಮದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರಿಗೆ ಕೇಂದ್ರದ ವಿಮೆ ಯೋಜನೆಗಳ ಕುರಿತು ಸೋಮವಾರ ಜಾಗೃತಿ ಮೂಡಿಸಲಾಯಿತು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುನಿತಾ ಬನ್ನೇರ್ ಹಾಗೂ ವಿಮಾ ಏಜೆನ್ಸಿ ಪ್ರತಿನಿಧಿಗಳು ಯೋಜನೆಗಳ ಸಮಗ್ರ ಮಾಹಿತಿ ನೀಡಿದರು.</p>.<p>‘18 ರಿಂದ 50 ವರ್ಷದ ಒಳಗಿನ ಕಾರ್ಮಿಕರು ವರ್ಷಕ್ಕೆ ಕೇವಲ ₹436 ಕಂತು ಪಾವತಿಸಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆಯಡಿ ವಿಮೆ ಮಾಡಿಸಬಹುದು. ವಿಮೆ ಮಾಡಿಸಿದವರು ಯಾವುದೇ ಕಾರಣದಿಂದ ಮೃತಪಟ್ಟರೆ ₹2 ಲಕ್ಷ ವಿಮೆ ಪರಿಹಾರ ಸಿಗಲಿದೆ’ ಎಂದು ಹೇಳಿದರು.</p>.<p>‘ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ 18 ರಿಂದ 70 ವರ್ಷದ ಒಳಗಿನ ಕಾರ್ಮಿಕರು ವಾರ್ಷಿಕ ₹20 ಕಂತು ಪಾವತಿಸಿ ವಿಮೆ ಮಾಡಿಸಬಹುದು. ಅಪಘಾತದಲ್ಲಿ ಮರಣ ಹೊಂದಿದರೆ ಅಥವಾ ಅಂಗವಿಕಲರಾದರೆ ₹2 ಲಕ್ಷ ಹಾಗೂ ಭಾಗಶಃ ಅಂಗವಿಕಲರಾದರೆ ₹1 ಲಕ್ಷ ಪರಿಹಾರ ದೊರೆಯಲಿದೆ’ ಎಂದು ತಿಳಿಸಿದರು.</p>.<p>ಬ್ಯಾಂಕ್ ಖಾತೆ ಹೊಂದಿದ ಅನೇಕ ನರೇಗಾ ಕಾರ್ಮಿಕರು ಸ್ಥಳದಲ್ಲೇ ವಿಮೆ ಮಾಡಿಸಿದರು.</p>.<p>ಲೀಡ್ ಬ್ಯಾಂಕ್ ಸಂಯೋಜಕ ರಾಜೇಂದ್ರ ಜಾಧವ್, ಸುಧಾಕರ, ಸತ್ಯ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-33-1154203556</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಕಲ್</strong>(ಜನವಾಡ): ಬೀದರ್ ತಾಲ್ಲೂಕಿನ ಮರಕಲ್ ಗ್ರಾಮದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರಿಗೆ ಕೇಂದ್ರದ ವಿಮೆ ಯೋಜನೆಗಳ ಕುರಿತು ಸೋಮವಾರ ಜಾಗೃತಿ ಮೂಡಿಸಲಾಯಿತು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುನಿತಾ ಬನ್ನೇರ್ ಹಾಗೂ ವಿಮಾ ಏಜೆನ್ಸಿ ಪ್ರತಿನಿಧಿಗಳು ಯೋಜನೆಗಳ ಸಮಗ್ರ ಮಾಹಿತಿ ನೀಡಿದರು.</p>.<p>‘18 ರಿಂದ 50 ವರ್ಷದ ಒಳಗಿನ ಕಾರ್ಮಿಕರು ವರ್ಷಕ್ಕೆ ಕೇವಲ ₹436 ಕಂತು ಪಾವತಿಸಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆಯಡಿ ವಿಮೆ ಮಾಡಿಸಬಹುದು. ವಿಮೆ ಮಾಡಿಸಿದವರು ಯಾವುದೇ ಕಾರಣದಿಂದ ಮೃತಪಟ್ಟರೆ ₹2 ಲಕ್ಷ ವಿಮೆ ಪರಿಹಾರ ಸಿಗಲಿದೆ’ ಎಂದು ಹೇಳಿದರು.</p>.<p>‘ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ 18 ರಿಂದ 70 ವರ್ಷದ ಒಳಗಿನ ಕಾರ್ಮಿಕರು ವಾರ್ಷಿಕ ₹20 ಕಂತು ಪಾವತಿಸಿ ವಿಮೆ ಮಾಡಿಸಬಹುದು. ಅಪಘಾತದಲ್ಲಿ ಮರಣ ಹೊಂದಿದರೆ ಅಥವಾ ಅಂಗವಿಕಲರಾದರೆ ₹2 ಲಕ್ಷ ಹಾಗೂ ಭಾಗಶಃ ಅಂಗವಿಕಲರಾದರೆ ₹1 ಲಕ್ಷ ಪರಿಹಾರ ದೊರೆಯಲಿದೆ’ ಎಂದು ತಿಳಿಸಿದರು.</p>.<p>ಬ್ಯಾಂಕ್ ಖಾತೆ ಹೊಂದಿದ ಅನೇಕ ನರೇಗಾ ಕಾರ್ಮಿಕರು ಸ್ಥಳದಲ್ಲೇ ವಿಮೆ ಮಾಡಿಸಿದರು.</p>.<p>ಲೀಡ್ ಬ್ಯಾಂಕ್ ಸಂಯೋಜಕ ರಾಜೇಂದ್ರ ಜಾಧವ್, ಸುಧಾಕರ, ಸತ್ಯ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-33-1154203556</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>