<p><strong>ಬೀದರ್: </strong>‘ಜಿಲ್ಲೆಯಲ್ಲಿನ ಯಾವುದೇ ಖಾಸಗಿ ಆಸ್ಪತ್ರೆಗಳು ಜಿಲ್ಲಾಡಳಿತ ಕೇಳುವ ಮಾಹಿತಿ ಒದಗಿಸದೇ ಇದ್ದರೆ ಅಂಥ ಆಸ್ಪತ್ರೆಗಳ ಮೇಲೆ ಕೆಪಿಎಂಎ ಕಾಯ್ದೆಯ ಪ್ರಕಾರ ಕ್ರಮ ಜರುಗಿಸಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಕೋವಿಡ್–19 ನಿಯಂತ್ರಣ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ವೈದ್ಯಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಜಿಲ್ಲಾಡಳಿತ ಕೇಳುವ ಮಾಹಿತಿಯನ್ನು ಸಂಬಂಧಿಸಿದ ವೆಬ್ಪೋರ್ಟ್ಲನಲ್ಲಿ ಆಯಾ ಆಸ್ಪತ್ರೆಗಳು ಪ್ರತಿ ದಿನ ಅಪ್ಲೋಡ್ ಮಾಡುವಂತೆ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ಆಸ್ಪತ್ರೆಗಳ ನೋಂದಣಿಯನ್ನು ರದ್ದುಪಡಿಸಲು ಕ್ರಮಕೈಗೊಳ್ಳಬೇಕು’ ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.</p>.<p>‘ಕಂಟೇನ್ಮೆಂಟ್ ಝೋನ್ದಲ್ಲಿ ಸಮೀಕ್ಷೆ ನಡೆಸಿ ಆ ಪ್ರದೇಶದಲ್ಲಿನ ಕೆಮ್ಮು, ನೆಗಡಿ ಮತ್ತು ಜ್ವರ ಮತ್ತು ಉಸಿರಾಟದ ತೊಂದರೆ ಇರುವ ಪ್ರಕರಣಗಳನ್ನು ಪತ್ತೆ ಮಾಡಬೇಕು. ಆ ಪ್ರದೇಶದಲ್ಲಿನ ಗರ್ಭಿಣಿಯರ, ವಯಸ್ಸಾದವರ, ಹೃದಯಕಾಯಿಲೆ, ಮಧುಮೇಹದಂಥ ರೋಗಪೀಡಿತರ ಗಂಟಲುದ್ರವ ಮಾದರಿ ಪರೀಕ್ಷೆ ಮಾಡಬೇಕು’ ಎಂದು ಹೇಳಿದರು.</p>.<p>‘ಕೋವಿಡ್–19 ನಿಯಂತ್ರಣದ ಜತೆಗೆ ಆರೋಗ್ಯ ಸೌಕರ್ಯ ಕಲ್ಪಿಸುವ ಕಾರ್ಯ ಕೂಡ ಜತೆಜತೆಗೆ ನಡೆಯುತ್ತಿರಬೇಕು. ಹೊಸ ಅಂಬುಲೆನ್ಸ್ ಖರೀದಿ ಸೇರಿದಂತೆ ಜಿಲ್ಲೆಗೆ ಬರಬೇಕಾದ ಅವಶ್ಯಕ ವೈದ್ಯಕೀಯ ಉಪಕರಣಗಳು ಹಾಗೂ ಇತರ ಆರೋಗ್ಯ ಸೌಕರ್ಯ ಪಡೆಯುವ ಬಾಕಿ ಕಾರ್ಯದ ಬಗ್ಗೆ ಗಮನ ಕೊಡಬೇಕು’ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬ್ರಿಮ್ಸ್ ನಿರ್ದೇಶಕ ಡಾ.ಶಿವಕುಮಾರ, ಡಿಎಸ್ಒ ಡಾ.ಕೃಷ್ಣಾ ರೆಡ್ಡಿ, ವೈದ್ಯಾಧಿಕಾರಿಗಳಾದ ಡಾ.ಇಂದುಮತಿ ಪಾಟೀಲ, ಡಾ.ದೀಪಾ ಖಂಡ್ರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>‘ಜಿಲ್ಲೆಯಲ್ಲಿನ ಯಾವುದೇ ಖಾಸಗಿ ಆಸ್ಪತ್ರೆಗಳು ಜಿಲ್ಲಾಡಳಿತ ಕೇಳುವ ಮಾಹಿತಿ ಒದಗಿಸದೇ ಇದ್ದರೆ ಅಂಥ ಆಸ್ಪತ್ರೆಗಳ ಮೇಲೆ ಕೆಪಿಎಂಎ ಕಾಯ್ದೆಯ ಪ್ರಕಾರ ಕ್ರಮ ಜರುಗಿಸಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಕೋವಿಡ್–19 ನಿಯಂತ್ರಣ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ವೈದ್ಯಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಜಿಲ್ಲಾಡಳಿತ ಕೇಳುವ ಮಾಹಿತಿಯನ್ನು ಸಂಬಂಧಿಸಿದ ವೆಬ್ಪೋರ್ಟ್ಲನಲ್ಲಿ ಆಯಾ ಆಸ್ಪತ್ರೆಗಳು ಪ್ರತಿ ದಿನ ಅಪ್ಲೋಡ್ ಮಾಡುವಂತೆ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ಆಸ್ಪತ್ರೆಗಳ ನೋಂದಣಿಯನ್ನು ರದ್ದುಪಡಿಸಲು ಕ್ರಮಕೈಗೊಳ್ಳಬೇಕು’ ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.</p>.<p>‘ಕಂಟೇನ್ಮೆಂಟ್ ಝೋನ್ದಲ್ಲಿ ಸಮೀಕ್ಷೆ ನಡೆಸಿ ಆ ಪ್ರದೇಶದಲ್ಲಿನ ಕೆಮ್ಮು, ನೆಗಡಿ ಮತ್ತು ಜ್ವರ ಮತ್ತು ಉಸಿರಾಟದ ತೊಂದರೆ ಇರುವ ಪ್ರಕರಣಗಳನ್ನು ಪತ್ತೆ ಮಾಡಬೇಕು. ಆ ಪ್ರದೇಶದಲ್ಲಿನ ಗರ್ಭಿಣಿಯರ, ವಯಸ್ಸಾದವರ, ಹೃದಯಕಾಯಿಲೆ, ಮಧುಮೇಹದಂಥ ರೋಗಪೀಡಿತರ ಗಂಟಲುದ್ರವ ಮಾದರಿ ಪರೀಕ್ಷೆ ಮಾಡಬೇಕು’ ಎಂದು ಹೇಳಿದರು.</p>.<p>‘ಕೋವಿಡ್–19 ನಿಯಂತ್ರಣದ ಜತೆಗೆ ಆರೋಗ್ಯ ಸೌಕರ್ಯ ಕಲ್ಪಿಸುವ ಕಾರ್ಯ ಕೂಡ ಜತೆಜತೆಗೆ ನಡೆಯುತ್ತಿರಬೇಕು. ಹೊಸ ಅಂಬುಲೆನ್ಸ್ ಖರೀದಿ ಸೇರಿದಂತೆ ಜಿಲ್ಲೆಗೆ ಬರಬೇಕಾದ ಅವಶ್ಯಕ ವೈದ್ಯಕೀಯ ಉಪಕರಣಗಳು ಹಾಗೂ ಇತರ ಆರೋಗ್ಯ ಸೌಕರ್ಯ ಪಡೆಯುವ ಬಾಕಿ ಕಾರ್ಯದ ಬಗ್ಗೆ ಗಮನ ಕೊಡಬೇಕು’ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬ್ರಿಮ್ಸ್ ನಿರ್ದೇಶಕ ಡಾ.ಶಿವಕುಮಾರ, ಡಿಎಸ್ಒ ಡಾ.ಕೃಷ್ಣಾ ರೆಡ್ಡಿ, ವೈದ್ಯಾಧಿಕಾರಿಗಳಾದ ಡಾ.ಇಂದುಮತಿ ಪಾಟೀಲ, ಡಾ.ದೀಪಾ ಖಂಡ್ರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>