ನಗರದ ರೋಟರಿ ವೃತ್ತ, ಹಳೆಯ ಬಸ್ ನಿಲ್ದಾಣ, ಅಶೋಕ ಹೋಟೇಲ್ನಿಂದ ಬೊಮ್ಮಗೊಂಡೇಶ್ವರ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಕೆಳಸೇತುವೆ, ಬಸವೇಶ್ವರ ವೃತ್ತ ಸಮೀಪದ ರೈಲ್ವೆ ಕೆಳಸೇತುವೆ, ಹಾರೂರಗೇರಿ ಕಮಾನ್, ಚಿದ್ರಿ ರಸ್ತೆ, ಜನವಾಡ ರಸ್ತೆ ಸೇರಿದಂತೆ ವಿವಿಧೆಡೆ ರಸ್ತೆಯಲ್ಲಿ ನೀರು ಸಂಗ್ರಹಗೊಂಡು ಸಂಚಾರಕ್ಕೆ ಅಡಚಣೆ ಉಂಟಾಯಿತು.