<p>ಹುಲಸೂರ: ಜಿಲ್ಲೆಯಾದ್ಯಂತ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದ್ದು, ಇದೇ ರೀತಿ ಮಳೆ ಮುಂದುವರಿದರೆ ಇಲ್ಲಿನ ತಾಲ್ಲೂಕು ಕೇಂದ್ರ ಸಮೀಪದ ಕೊಂಗಳಿ ಗ್ರಾಮವು (ಭಾಲ್ಕಿ ತಾಲ್ಲೂಕು) ರಸ್ತೆ ಸಂಪರ್ಕ ಕಡಿದುಕೊಳ್ಳುವ ಆತಂಕ ಎದುರಿಸುತ್ತಿದೆ.</p>.<p>ಕೊಂಗಳಿ ಗ್ರಾಮದಿಂದ ಹುಲಸೂರು ಸಂಪರ್ಕ ರಸ್ತೆಯಲ್ಲಿ ಚಿಕ್ಕದೊಂದು ಸೇತುವೆಯಿದೆ. ಈ ಸೇತುವೆಯು ಸಮೀಪದ ಮಾಂಜ್ರಾ ನದಿಯಲ್ಲಿ ಪ್ರವಾಹ ಬಂದರೆ ಮುಳುಗುತ್ತದೆ. ಅಲ್ಲದೇ ಸುತ್ತಲಿನ ಪ್ರದೇಶಗಳ ಕೃಷಿ ಭೂಮಿ ಜಲಾವೃತವಾಗುತ್ತದೆ. ಇದರಿಂದ ಕೊಂಗಳಿ ಸೇರಿ ವಿವಿಧ ಗ್ರಾಮಗಳಿಗೆ ಹೋಗಲು ಇರುವ ಏಕೈಕ ರಸ್ತೆ ಕಡಿತವಾಗುತ್ತದೆ.</p>.<p>ಕೊಂಗಳಿ ಗ್ರಾಮದಲ್ಲಿ 500ಕ್ಕು ಹೆಚ್ಚೂ ಮನೆಗಳಿವೆ. ಇಲ್ಲಿನ ಜನರು ಎಲ್ಲ ವಹಿವಾಟು, ದಿನಸಿ, ಆಸ್ಪತ್ರೆ, ಬಸ್ ನಿಲ್ದಾಣ ಎಲ್ಲದಕ್ಕೂ ಹುಲಸೂರನ್ನೇ ಅವಲಂಬಿಸಿದ್ದಾರೆ. ಪ್ರಸ್ತುತ ಮಳೆಗಾಲ ಸಮೀಪಿಸುತ್ತಿರುವುದರಿಂದ ಮತ್ತೆ ಗ್ರಾಮಸ್ಥರಿಗೆ ಸಂಪರ್ಕ ಕಡಿತದ ಭಯ ಅವರಿಸಿದೆ.</p>.<p>ಪ್ರವಾಹ ಇಳಿಯುವವರೆಗೂ ವಾರಗಟ್ಟಲೇ ರಸ್ತೆಯ ಮೇಲೆ ನಾಲೈದು ಅಡಿ ನೀರು ನಿಂತಿರುತ್ತದೆ. ಹೀಗಾಗಿ ತಗ್ಗಿನಲ್ಲಿರುವ ಈ ಸೇತುವೆಯನ್ನು ಪುನರ್ ನಿರ್ಮಾಣ ಮಾಡಬೇಕು ಹಾಗೂ ಎತ್ತರಿಸಬೇಕು ಎಂಬುದು ಇಲ್ಲಿನ ಜನರ ದಶಕಗಳ ಹಿಂದಿನ ಬೇಡಿಕೆಯಾಗಿ ಕನಸಾಗಿಯೇ ಉಳಿದಿದೆ.</p>.<p>ಗ್ರಾಮಸ್ಥರ ಒತ್ತಾಯದ ಮೇರೆಗೆ ಕಳೆದ ಒಂದು ವರ್ಷಗಳ ಹಿಂದೆ ಶಾಸಕರು ಹೊಸ ಸೇತುವೆ ನಿರ್ಮಿಸಲು ಸೇತುವೆ ಕಾಮಗಾರಿ ನಿರ್ಮಾಣಕ್ಕೆ ಸೂಚಿಸಿದ್ದರು. ಆದರೆ ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ. ಇದರಿಂದ ಮುಂಗಾರು ಹಂಗಾಮಿನ ಮೊದಲ ಮಳೆಗೆ ಸೇತುವೆ ಸಂಪೂರ್ಣ ಹಾಳಾಗಿದ್ದು, ಈ ಸೇತುವೆ ಮೂಲಕವೇ ಶಾಲಾ ವಾಹನ ಸವಾರರು ಜೀವಭಯದಲ್ಲಿ ಓಡಾಡುತ್ತಿದ್ದಾರೆ.</p>.<p>‘ಮಾಂಜ್ರಾ ನದಿಗೆ ನೆರೆ ಬಂದು ಸೇತುವೆ ಮುಳುಗಿದರೆ, ಜಮಖಂಡಿ, ಮೆಹಕರ, ವಾಂಝರಖೇಡ ಭಾಗದ ಸಾವಿರಾರು ಜನರಿಗೆ ರಸ್ತೆ ಸಂಪರ್ಕ ಕಡಿತ ಉಂಟಾಗಿ ಓಡಾಡಲು ತೊಂದರೆಯಾಗುತ್ತದೆ. ಶಾಲೆಗೆ ಹೋಗುವ ಮಕ್ಕಳು, ನಿತ್ಯ ಕೆಲಸಕ್ಕೆ ಹೋಗುವವರಿಗೆ ತುಂಬಾ ತೊಂದರೆಯಾಗುತ್ತದೆ’ ಈ ಸಮಸ್ಯೆ ಕುರಿತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆಗೆ ಸ್ಪಂದಿಸಿಲ್ಲ’ ಎಂದು ಸ್ಥಳೀಯರಾದ ಬ್ರಹ್ಮಾನಂದ ದೇಶಮುಖ ಅಳಲು ತೋಡಿಕೊಂಡರು.</p>.<p>ತಾಂತ್ರಿಕ ಕಾರಣದಿಂದ ಕೊಂಗಳಿ ಸೇತುವೆ ಕಾಮಗಾರಿ ಆರಂಭವಾಗಿಲ್ಲ. ಪ್ರಸ್ತುತ ಇರುವ ಸಮಸ್ಯೆಗಳು ಗಮನದಲ್ಲಿಟ್ಟು ಶೀಘ್ರದಲ್ಲಿ ಸೇತುವೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. </p><p>-ಅಲ್ತಾಫ್ ಮಿಯಾ ಎಇಇ ಲೋಕೋಪಯೋಗಿ ಇಲಾಖೆ </p>.<p>ಪ್ರವಾಹ ಬಂದರೆ ಮುಳುಗಡೆ ಆಗುವ ಗ್ರಾಮಕ್ಕೆ ಸಂಪರ್ಕ ಕಲಿಸುವ ಎರಡು ಸೇತುವೆಗಳು ಒಂದೆಡೆಯಾದರೆ ಅಪಘಾತಕ್ಕೆ ದಾರಿ ಮಾಡಿ ಕೊಡುವ ಕಿರಿದಾದ ರಸ್ತೆ ಮತ್ತೊಂದು ಕಡೆಯಾಗಿದೆ. ಮಾಂಜ್ರಾ ನದಿಯ ಪ್ರವಾಹಕ್ಕೆ ಇಲ್ಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. </p><p>-ಪಂಡಿತ್ ಶಿರೊಳೆ ಗ್ರಾಮಸ್ಥ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಲಸೂರ: ಜಿಲ್ಲೆಯಾದ್ಯಂತ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದ್ದು, ಇದೇ ರೀತಿ ಮಳೆ ಮುಂದುವರಿದರೆ ಇಲ್ಲಿನ ತಾಲ್ಲೂಕು ಕೇಂದ್ರ ಸಮೀಪದ ಕೊಂಗಳಿ ಗ್ರಾಮವು (ಭಾಲ್ಕಿ ತಾಲ್ಲೂಕು) ರಸ್ತೆ ಸಂಪರ್ಕ ಕಡಿದುಕೊಳ್ಳುವ ಆತಂಕ ಎದುರಿಸುತ್ತಿದೆ.</p>.<p>ಕೊಂಗಳಿ ಗ್ರಾಮದಿಂದ ಹುಲಸೂರು ಸಂಪರ್ಕ ರಸ್ತೆಯಲ್ಲಿ ಚಿಕ್ಕದೊಂದು ಸೇತುವೆಯಿದೆ. ಈ ಸೇತುವೆಯು ಸಮೀಪದ ಮಾಂಜ್ರಾ ನದಿಯಲ್ಲಿ ಪ್ರವಾಹ ಬಂದರೆ ಮುಳುಗುತ್ತದೆ. ಅಲ್ಲದೇ ಸುತ್ತಲಿನ ಪ್ರದೇಶಗಳ ಕೃಷಿ ಭೂಮಿ ಜಲಾವೃತವಾಗುತ್ತದೆ. ಇದರಿಂದ ಕೊಂಗಳಿ ಸೇರಿ ವಿವಿಧ ಗ್ರಾಮಗಳಿಗೆ ಹೋಗಲು ಇರುವ ಏಕೈಕ ರಸ್ತೆ ಕಡಿತವಾಗುತ್ತದೆ.</p>.<p>ಕೊಂಗಳಿ ಗ್ರಾಮದಲ್ಲಿ 500ಕ್ಕು ಹೆಚ್ಚೂ ಮನೆಗಳಿವೆ. ಇಲ್ಲಿನ ಜನರು ಎಲ್ಲ ವಹಿವಾಟು, ದಿನಸಿ, ಆಸ್ಪತ್ರೆ, ಬಸ್ ನಿಲ್ದಾಣ ಎಲ್ಲದಕ್ಕೂ ಹುಲಸೂರನ್ನೇ ಅವಲಂಬಿಸಿದ್ದಾರೆ. ಪ್ರಸ್ತುತ ಮಳೆಗಾಲ ಸಮೀಪಿಸುತ್ತಿರುವುದರಿಂದ ಮತ್ತೆ ಗ್ರಾಮಸ್ಥರಿಗೆ ಸಂಪರ್ಕ ಕಡಿತದ ಭಯ ಅವರಿಸಿದೆ.</p>.<p>ಪ್ರವಾಹ ಇಳಿಯುವವರೆಗೂ ವಾರಗಟ್ಟಲೇ ರಸ್ತೆಯ ಮೇಲೆ ನಾಲೈದು ಅಡಿ ನೀರು ನಿಂತಿರುತ್ತದೆ. ಹೀಗಾಗಿ ತಗ್ಗಿನಲ್ಲಿರುವ ಈ ಸೇತುವೆಯನ್ನು ಪುನರ್ ನಿರ್ಮಾಣ ಮಾಡಬೇಕು ಹಾಗೂ ಎತ್ತರಿಸಬೇಕು ಎಂಬುದು ಇಲ್ಲಿನ ಜನರ ದಶಕಗಳ ಹಿಂದಿನ ಬೇಡಿಕೆಯಾಗಿ ಕನಸಾಗಿಯೇ ಉಳಿದಿದೆ.</p>.<p>ಗ್ರಾಮಸ್ಥರ ಒತ್ತಾಯದ ಮೇರೆಗೆ ಕಳೆದ ಒಂದು ವರ್ಷಗಳ ಹಿಂದೆ ಶಾಸಕರು ಹೊಸ ಸೇತುವೆ ನಿರ್ಮಿಸಲು ಸೇತುವೆ ಕಾಮಗಾರಿ ನಿರ್ಮಾಣಕ್ಕೆ ಸೂಚಿಸಿದ್ದರು. ಆದರೆ ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ. ಇದರಿಂದ ಮುಂಗಾರು ಹಂಗಾಮಿನ ಮೊದಲ ಮಳೆಗೆ ಸೇತುವೆ ಸಂಪೂರ್ಣ ಹಾಳಾಗಿದ್ದು, ಈ ಸೇತುವೆ ಮೂಲಕವೇ ಶಾಲಾ ವಾಹನ ಸವಾರರು ಜೀವಭಯದಲ್ಲಿ ಓಡಾಡುತ್ತಿದ್ದಾರೆ.</p>.<p>‘ಮಾಂಜ್ರಾ ನದಿಗೆ ನೆರೆ ಬಂದು ಸೇತುವೆ ಮುಳುಗಿದರೆ, ಜಮಖಂಡಿ, ಮೆಹಕರ, ವಾಂಝರಖೇಡ ಭಾಗದ ಸಾವಿರಾರು ಜನರಿಗೆ ರಸ್ತೆ ಸಂಪರ್ಕ ಕಡಿತ ಉಂಟಾಗಿ ಓಡಾಡಲು ತೊಂದರೆಯಾಗುತ್ತದೆ. ಶಾಲೆಗೆ ಹೋಗುವ ಮಕ್ಕಳು, ನಿತ್ಯ ಕೆಲಸಕ್ಕೆ ಹೋಗುವವರಿಗೆ ತುಂಬಾ ತೊಂದರೆಯಾಗುತ್ತದೆ’ ಈ ಸಮಸ್ಯೆ ಕುರಿತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆಗೆ ಸ್ಪಂದಿಸಿಲ್ಲ’ ಎಂದು ಸ್ಥಳೀಯರಾದ ಬ್ರಹ್ಮಾನಂದ ದೇಶಮುಖ ಅಳಲು ತೋಡಿಕೊಂಡರು.</p>.<p>ತಾಂತ್ರಿಕ ಕಾರಣದಿಂದ ಕೊಂಗಳಿ ಸೇತುವೆ ಕಾಮಗಾರಿ ಆರಂಭವಾಗಿಲ್ಲ. ಪ್ರಸ್ತುತ ಇರುವ ಸಮಸ್ಯೆಗಳು ಗಮನದಲ್ಲಿಟ್ಟು ಶೀಘ್ರದಲ್ಲಿ ಸೇತುವೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. </p><p>-ಅಲ್ತಾಫ್ ಮಿಯಾ ಎಇಇ ಲೋಕೋಪಯೋಗಿ ಇಲಾಖೆ </p>.<p>ಪ್ರವಾಹ ಬಂದರೆ ಮುಳುಗಡೆ ಆಗುವ ಗ್ರಾಮಕ್ಕೆ ಸಂಪರ್ಕ ಕಲಿಸುವ ಎರಡು ಸೇತುವೆಗಳು ಒಂದೆಡೆಯಾದರೆ ಅಪಘಾತಕ್ಕೆ ದಾರಿ ಮಾಡಿ ಕೊಡುವ ಕಿರಿದಾದ ರಸ್ತೆ ಮತ್ತೊಂದು ಕಡೆಯಾಗಿದೆ. ಮಾಂಜ್ರಾ ನದಿಯ ಪ್ರವಾಹಕ್ಕೆ ಇಲ್ಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. </p><p>-ಪಂಡಿತ್ ಶಿರೊಳೆ ಗ್ರಾಮಸ್ಥ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>