<p>ರೇಕುಳಗಿ ಮೌಂಟ್(ಜನವಾಡ): ಬೀದರ್ ತಾಲ್ಲೂಕಿನ ರೇಕುಳಗಿ ಮೌಂಟ್ನ ಅನಾಥ ಪಿಂಡಕ ಬುದ್ಧ ವಿಹಾರದಲ್ಲಿ ಬುದ್ಧ ಪೂರ್ಣಿಮೆಯನ್ನು ಶುಕ್ರವಾರ ಶ್ರದ್ಧೆ, ಭಕ್ತಿಯಿಂದ ಆಚರಿಸಲಾಯಿತು.</p>.<p>ವಿಹಾರದಲ್ಲಿ ಬುದ್ಧ ವಂದನೆ, ಧಮ್ಮ ಧ್ವಜಾರೋಹಣ, ಸಾಮೂಹಿಕ ಬುದ್ಧ ಪೂಜೆ ಹಾಗೂ ಪ್ರವಚನ ಕಾರ್ಯಕ್ರಮಗಳು ನಡೆದವು.</p>.<p>‘ಗೌತಮ ಬುದ್ಧರ ಅಷ್ಟಾಂಗ ಮಾರ್ಗಗಳು ಎಂದಿಗೂ ಪ್ರಸ್ತುತವಾಗಿವೆ. ದುಃಖ ನಿವಾರಣೆಗೆ ಅಷ್ಟಾಂಗ ಮಾರ್ಗಗಳ ಮೊರೆ ಹೋಗಬೇಕು’ ಎಂದು ಪ್ರವಚನ ನೀಡಿದ ಭಂತೆ ರೇವತ ಹೇಳಿದರು.</p>.<p>‘ಬುದ್ಧ ತತ್ವಗಳ ಅನುಕರಣೆಯಿಂದ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ ಕಾಣಬಹುದು. ಇಂದು ವಿಶ್ವಕ್ಕೆ ಗೌತಮ ಬುದ್ಧರ ತತ್ವಗಳ ಅವಶ್ಯಕತೆ ಇದೆಯೇ ಹೊರತು ಯುದ್ಧವಲ್ಲ’ ಎಂದು ಭಂತೆ ಧರ್ಮಪಾಲ್ ಹೇಳಿದರು.</p>.<p>ಭಿಕ್ಕುಣಿ ಪ್ರಜಾಪತಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪುಂಡಲೀಕರಾವ್, ಶಿವಮೂರ್ತಿ, ಸಚಿನ್ ಕೌಠಾ, ಪ್ರೇಮಸಾಗರ್ ದಾಂಡೇಕರ್ ಮೊದಲಾದವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-33-1635961435</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರೇಕುಳಗಿ ಮೌಂಟ್(ಜನವಾಡ): ಬೀದರ್ ತಾಲ್ಲೂಕಿನ ರೇಕುಳಗಿ ಮೌಂಟ್ನ ಅನಾಥ ಪಿಂಡಕ ಬುದ್ಧ ವಿಹಾರದಲ್ಲಿ ಬುದ್ಧ ಪೂರ್ಣಿಮೆಯನ್ನು ಶುಕ್ರವಾರ ಶ್ರದ್ಧೆ, ಭಕ್ತಿಯಿಂದ ಆಚರಿಸಲಾಯಿತು.</p>.<p>ವಿಹಾರದಲ್ಲಿ ಬುದ್ಧ ವಂದನೆ, ಧಮ್ಮ ಧ್ವಜಾರೋಹಣ, ಸಾಮೂಹಿಕ ಬುದ್ಧ ಪೂಜೆ ಹಾಗೂ ಪ್ರವಚನ ಕಾರ್ಯಕ್ರಮಗಳು ನಡೆದವು.</p>.<p>‘ಗೌತಮ ಬುದ್ಧರ ಅಷ್ಟಾಂಗ ಮಾರ್ಗಗಳು ಎಂದಿಗೂ ಪ್ರಸ್ತುತವಾಗಿವೆ. ದುಃಖ ನಿವಾರಣೆಗೆ ಅಷ್ಟಾಂಗ ಮಾರ್ಗಗಳ ಮೊರೆ ಹೋಗಬೇಕು’ ಎಂದು ಪ್ರವಚನ ನೀಡಿದ ಭಂತೆ ರೇವತ ಹೇಳಿದರು.</p>.<p>‘ಬುದ್ಧ ತತ್ವಗಳ ಅನುಕರಣೆಯಿಂದ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ ಕಾಣಬಹುದು. ಇಂದು ವಿಶ್ವಕ್ಕೆ ಗೌತಮ ಬುದ್ಧರ ತತ್ವಗಳ ಅವಶ್ಯಕತೆ ಇದೆಯೇ ಹೊರತು ಯುದ್ಧವಲ್ಲ’ ಎಂದು ಭಂತೆ ಧರ್ಮಪಾಲ್ ಹೇಳಿದರು.</p>.<p>ಭಿಕ್ಕುಣಿ ಪ್ರಜಾಪತಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪುಂಡಲೀಕರಾವ್, ಶಿವಮೂರ್ತಿ, ಸಚಿನ್ ಕೌಠಾ, ಪ್ರೇಮಸಾಗರ್ ದಾಂಡೇಕರ್ ಮೊದಲಾದವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-33-1635961435</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>