<p>ಬೀದರ್: ‘ಪೋಲಿಯೊ ನಿರ್ಮೂಲನೆ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳ ಮೂಲಕ ಸೇವೆ ಸಲ್ಲಿಸುತ್ತಿರುವ ರೋಟರಿ ಸಂಸ್ಥೆ ಇದೀಗ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುತ್ತಿರುವುದು ಶ್ಲಾಘನೀಯ’ ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದೇವರು ಹೇಳಿದರು.</p>.<p>ನಗರದ ಬಿ.ವಿ. ಭೂಮರೆಡ್ಡಿ ಕಾಲೇಜು ಆವರಣದಲ್ಲಿ ನಡೆದ ‘ರೈಸ್ ಕಲ್ಯಾಣ ಕರ್ನಾಟಕ ಯುವ ಸಮ್ಮೇಳನ’ದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಸಿಲ್ವರ್ ಸ್ಟಾರ್ ಅಧ್ಯಕ್ಷ ಆದಿಶ್ ವಾಲಿ ಮಾತನಾಡಿ, ‘ಕ್ರಿಕೆಟ್ ಪಂದ್ಯಾವಳಿ (ಆರ್ಸಿಪಿಎಲ್) ಆಯೋಜಿಸಿ ಸಂಗ್ರಹಿಸಿದ ನಿಧಿಯೊಂದಿಗೆ ಗುರುಕುಲ, ಶಾಹೀನ್, ಡೈಮಂಡ್ ಹಾಗೂ ಶಾರದಾ ಕಾಲೇಜುಗಳ ಸಹಯೋಗದಲ್ಲಿ ಸುಮಾರು ₹1 ಕೋಟಿ ಮೌಲ್ಯದ ಶಿಕ್ಷಣ ಸಹಾಯಧನವನ್ನು 50 ವಿದ್ಯಾರ್ಥಿಗಳಿಗೆ ಒದಗಿಸಲಾಗಿದೆ’ ಎಂದು ತಿಳಿಸಿದರು.</p>.<p>ರೋಟರಿ ಡಿಸ್ಟ್ರಿಕ್ಟ್ ಗವರ್ನರ್ ಎಂ.ಕೆ. ರವೀಂದ್ರ, ರೋಟರಿ 3160ರ ಭಾವಿ ಗವರ್ನರ್ ತ್ರಿವಿಕ್ರಮ್ ಜೋಶಿ ಮಾತನಾಡಿದರು.</p>.<p>ಈ ಸಂದರ್ಭದಲ್ಲಿ ರೋಟರಿ ಐಎಫ್ಆರ್ಸಿ ನೂತನ ಘಟಕದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಬಿ.ವಿ. ಭೂಮರೆಡ್ಡಿ ಕಾಲೇಜು ಹಾಗೂ ಕರ್ನಾಟಕ ಕಾಲೇಜಿನಲ್ಲಿ ಹೊಸ ರೊಟ್ರಾಕ್ಟ್ ಕ್ಲಬ್ಗಳ ಸ್ಥಾಪನೆಗೆ ಚಾಲನೆ ನೀಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಕೆ.ಆರ್.ಪಿ. ಸಾರಥಿ, ಕೇಶವ್ ಶ್ರೀನಿವಾಸ್ ಗೌಡ, ಡಾ. ರಜನೀಶ್ ವಾಲಿ, ಹಾವಶೆಟ್ಟಿ ಪಾಟೀಲ, ರಘು ಕೃಷ್ಣಮೂರ್ತಿ, ಆನಂದ ಕೋಟಾರ್ಕಿ, ಸಹನಾ ಪಾಟೀಲ, ನಿಹಾಲ್ ಸಿಂಗ್, ಭಾವೇಶ ಪಟೇಲ್, ಮನೀಶ್ ಸಿಂಧೋಲ, ನವೀನ್ ಗೋಯಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-33-1535177348</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ‘ಪೋಲಿಯೊ ನಿರ್ಮೂಲನೆ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳ ಮೂಲಕ ಸೇವೆ ಸಲ್ಲಿಸುತ್ತಿರುವ ರೋಟರಿ ಸಂಸ್ಥೆ ಇದೀಗ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುತ್ತಿರುವುದು ಶ್ಲಾಘನೀಯ’ ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದೇವರು ಹೇಳಿದರು.</p>.<p>ನಗರದ ಬಿ.ವಿ. ಭೂಮರೆಡ್ಡಿ ಕಾಲೇಜು ಆವರಣದಲ್ಲಿ ನಡೆದ ‘ರೈಸ್ ಕಲ್ಯಾಣ ಕರ್ನಾಟಕ ಯುವ ಸಮ್ಮೇಳನ’ದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಸಿಲ್ವರ್ ಸ್ಟಾರ್ ಅಧ್ಯಕ್ಷ ಆದಿಶ್ ವಾಲಿ ಮಾತನಾಡಿ, ‘ಕ್ರಿಕೆಟ್ ಪಂದ್ಯಾವಳಿ (ಆರ್ಸಿಪಿಎಲ್) ಆಯೋಜಿಸಿ ಸಂಗ್ರಹಿಸಿದ ನಿಧಿಯೊಂದಿಗೆ ಗುರುಕುಲ, ಶಾಹೀನ್, ಡೈಮಂಡ್ ಹಾಗೂ ಶಾರದಾ ಕಾಲೇಜುಗಳ ಸಹಯೋಗದಲ್ಲಿ ಸುಮಾರು ₹1 ಕೋಟಿ ಮೌಲ್ಯದ ಶಿಕ್ಷಣ ಸಹಾಯಧನವನ್ನು 50 ವಿದ್ಯಾರ್ಥಿಗಳಿಗೆ ಒದಗಿಸಲಾಗಿದೆ’ ಎಂದು ತಿಳಿಸಿದರು.</p>.<p>ರೋಟರಿ ಡಿಸ್ಟ್ರಿಕ್ಟ್ ಗವರ್ನರ್ ಎಂ.ಕೆ. ರವೀಂದ್ರ, ರೋಟರಿ 3160ರ ಭಾವಿ ಗವರ್ನರ್ ತ್ರಿವಿಕ್ರಮ್ ಜೋಶಿ ಮಾತನಾಡಿದರು.</p>.<p>ಈ ಸಂದರ್ಭದಲ್ಲಿ ರೋಟರಿ ಐಎಫ್ಆರ್ಸಿ ನೂತನ ಘಟಕದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಬಿ.ವಿ. ಭೂಮರೆಡ್ಡಿ ಕಾಲೇಜು ಹಾಗೂ ಕರ್ನಾಟಕ ಕಾಲೇಜಿನಲ್ಲಿ ಹೊಸ ರೊಟ್ರಾಕ್ಟ್ ಕ್ಲಬ್ಗಳ ಸ್ಥಾಪನೆಗೆ ಚಾಲನೆ ನೀಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಕೆ.ಆರ್.ಪಿ. ಸಾರಥಿ, ಕೇಶವ್ ಶ್ರೀನಿವಾಸ್ ಗೌಡ, ಡಾ. ರಜನೀಶ್ ವಾಲಿ, ಹಾವಶೆಟ್ಟಿ ಪಾಟೀಲ, ರಘು ಕೃಷ್ಣಮೂರ್ತಿ, ಆನಂದ ಕೋಟಾರ್ಕಿ, ಸಹನಾ ಪಾಟೀಲ, ನಿಹಾಲ್ ಸಿಂಗ್, ಭಾವೇಶ ಪಟೇಲ್, ಮನೀಶ್ ಸಿಂಧೋಲ, ನವೀನ್ ಗೋಯಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-33-1535177348</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>