<p><strong>ಬೀದರ್:</strong> ಖಾಸಗಿ ಶಾಲಾ ವಾಹನ ಡಿಕ್ಕಿ ಹೊಡೆದು ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ತಾಲ್ಲೂಕಿನ ಜನವಾಡದಲ್ಲಿ ಮಂಗಳವಾರ ನಡೆದಿದೆ.</p><p>ಜನವಾಡದ ಪೊಲೀಸ್ ಕ್ವಾಟರ್ಸ್ನಲ್ಲಿ ವಾಸವಾಗಿರುವ ಔರಾದ್ ತಾಲ್ಲೂಕಿನ ಗಡಿಕುಶನೂರ ಗ್ರಾಮದ ಸುನೀಲಕುಮಾರ ಅವರ ಪುತ್ರಿ, 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಋತ್ವಿಕಾ (9) ಮೃತಪಟ್ಟವರು.</p><p>ಗ್ರಾಮದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಶಾಲೆಯ ಚಾಲಕ ವಾಹನದಲ್ಲಿ ಪೊಲೀಸ್ ಕ್ವಾಟರ್ಸ್ ಸಮೀಪ ತಂದು ಇಳಿಸಿದ್ದರು. ಬಳಿಕ ಚಾಲಕನ ನಿಷ್ಕಾಳಜಿಯಿಂದ ಬಸ್ ಮುಂಭಾಗದಲ್ಲಿದ್ದ ವಿದ್ಯಾರ್ಥಿನಿಗೆ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಜನವಾಡ ಠಾಣೆ ಪಿಎಸ್ಐ ಬಾಷಾಮಿಯ ತಿಳಿಸಿದ್ದಾರೆ.</p><p>ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ವಾಹನದಲ್ಲಿ ಬೀದರ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.</p><p>ಋತ್ವಿಕಾ ಅವರ ತಾಯಿ ರೇಣುಕಾ ಪೊಲೀಸ್ ಕಾನ್ಸ್ಟೇಬಲ್ ಆಗಿದ್ದಾರೆ. ಜನವಾಡದ ಪೊಲೀಸ್ ಕ್ವಾಟರ್ಸ್ನಲ್ಲಿ ಕುಟುಂಬದ ಜತೆ ವಾಸವಾಗಿದ್ದಾರೆ. </p><p>ಡಿ.ವೈ.ಎಸ್.ಪಿ. ಸನದಿ, ಬೀದರ್ ಗ್ರಾಮೀಣ ಸಿ.ಪಿ.ಐ. ಜಿ.ಎಸ್. ಬಿರಾದಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜನವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಖಾಸಗಿ ಶಾಲಾ ವಾಹನ ಡಿಕ್ಕಿ ಹೊಡೆದು ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ತಾಲ್ಲೂಕಿನ ಜನವಾಡದಲ್ಲಿ ಮಂಗಳವಾರ ನಡೆದಿದೆ.</p><p>ಜನವಾಡದ ಪೊಲೀಸ್ ಕ್ವಾಟರ್ಸ್ನಲ್ಲಿ ವಾಸವಾಗಿರುವ ಔರಾದ್ ತಾಲ್ಲೂಕಿನ ಗಡಿಕುಶನೂರ ಗ್ರಾಮದ ಸುನೀಲಕುಮಾರ ಅವರ ಪುತ್ರಿ, 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಋತ್ವಿಕಾ (9) ಮೃತಪಟ್ಟವರು.</p><p>ಗ್ರಾಮದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಶಾಲೆಯ ಚಾಲಕ ವಾಹನದಲ್ಲಿ ಪೊಲೀಸ್ ಕ್ವಾಟರ್ಸ್ ಸಮೀಪ ತಂದು ಇಳಿಸಿದ್ದರು. ಬಳಿಕ ಚಾಲಕನ ನಿಷ್ಕಾಳಜಿಯಿಂದ ಬಸ್ ಮುಂಭಾಗದಲ್ಲಿದ್ದ ವಿದ್ಯಾರ್ಥಿನಿಗೆ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಜನವಾಡ ಠಾಣೆ ಪಿಎಸ್ಐ ಬಾಷಾಮಿಯ ತಿಳಿಸಿದ್ದಾರೆ.</p><p>ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ವಾಹನದಲ್ಲಿ ಬೀದರ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.</p><p>ಋತ್ವಿಕಾ ಅವರ ತಾಯಿ ರೇಣುಕಾ ಪೊಲೀಸ್ ಕಾನ್ಸ್ಟೇಬಲ್ ಆಗಿದ್ದಾರೆ. ಜನವಾಡದ ಪೊಲೀಸ್ ಕ್ವಾಟರ್ಸ್ನಲ್ಲಿ ಕುಟುಂಬದ ಜತೆ ವಾಸವಾಗಿದ್ದಾರೆ. </p><p>ಡಿ.ವೈ.ಎಸ್.ಪಿ. ಸನದಿ, ಬೀದರ್ ಗ್ರಾಮೀಣ ಸಿ.ಪಿ.ಐ. ಜಿ.ಎಸ್. ಬಿರಾದಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜನವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>