<p>ಬೀದರ್: ‘ಭಾರತ ಸ್ಕೌಟ್ಸ್ ಮತ್ತು ಗೈಡ್ನಿಂದ ಪರಿಶ್ರಮ ಹಾಗೂ ಸೇವಾ ಮನೋಭಾವ ಗಟ್ಟಿಯಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.</p>.<p>ಇಲ್ಲಿನ ಶಿವನಗರದಲ್ಲಿ ನೂತನವಾಗಿ ನಿರ್ಮಿಸಲಾದ ಸಿದ್ದಾರಡ್ಡಿ ಸ್ಕೌಟ್ಸ್ ಭವನದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಯುವಕರು ಡಿಜೆ ಸೌಂಡ್ಗೆ ಹೆಜ್ಜೆ ಹಾಕುತ್ತಿದೆ. ದುಶ್ಚಟಗಳಿಗೆ ದಾಸರಾಗಿ ಅಮೂಲ್ಯ ಜೀವನ ನಾಶಮಾಡಿಕೊಳ್ಳುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದ ಅವರು, ‘ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯಲ್ಲಿನ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಶಿಸ್ತು, ನಾಯಕತ್ವ ಗುಣ, ದೇಶಭಕ್ತಿ, ಆತ್ಮಸ್ಥೈರ್ಯ, ಧೈರ್ಯ ಹಾಗೂ ಸೇವಾಮನೋಭಾವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.</p>.<p>ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯಸಿಂಗ್ ಅವರು ಸಿದ್ದಾರಡ್ಡಿ ಸ್ಕೌಟ್ಸ್ ಭವನ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ‘ಕೆಕೆಆರ್ಡಿಬಿ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಅಕ್ಷರ ಅವಿಷ್ಕಾರ ಯೋಜನೆ ಅಡಿ ಸುಮಾರು ಮಾದರಿ 294 ಶಾಲೆಗಳನ್ನು ತೆರೆಯಲಾಗಿದೆ. ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ಬೀದರ್ ಸ್ಕೌಟ್ಸ್ ಭವನಗಳಿಗೆ ₹8 ಕೋಟಿ ಒದಗಿಸಲಾಗಿದ್ದು, ಬೀದರ್ ಸಿದ್ದಾರಡ್ಡಿ ಸ್ಕೌಟ್ಸ್ ಭವನಕ್ಕೆ ಈಗಾಗಲೇ ₹2 ಕೋಟಿ ಒದಗಿಸಲಾಗಿದೆ. ಮೇಲಂತಸ್ತಿನ ಕಟ್ಟಡಕ್ಕೂ ಅನುದಾನ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಭಾರತ ಸ್ಕೌಟ್ಸ್ ಮತ್ತು ಗೈಡ್ನ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಮಾತನಾಡಿ, ‘ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯನ್ನು ಲಾರ್ಡ್ ಬ್ಯಾಡೆನ್ ಪೊವೆಲ್ ಅವರು ಇಂಗ್ಲೆಂಡ್ನಲ್ಲಿ 1907ರಲ್ಲಿ ಪ್ರಾರಂಭಿಸಿದರು. ಭಾರತದಲ್ಲಿ ಇದನ್ನು 1909ರಲ್ಲಿ ಪ್ರಾರಂಭಿಸಲಾಯಿತು. ಮೈಸೂರು ಅರಸರು ಇದಕ್ಕೆ ರಾಜಾಶ್ರಯ ನೀಡಿದರು. ವಿದ್ಯಾರ್ಥಿಗಳಲ್ಲಿ ಶಿಸ್ತು, ಜ್ಞಾನ, ಕೌಶಲ, ಸೇವಾ ಮನೋಭಾವ ವೃದ್ಧಿಸುವಲ್ಲಿ ಜಗತ್ತಿನ 214 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ’ ಎಂದರು.</p>.<p>ಗೈಡ್ ವಿಭಾಗದ ರಾಜ್ಯ ಮುಖ್ಯ ಆಯುಕ್ತೆ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ನ ಜಿಲ್ಲಾ ಮುಖ್ಯ ಆಯುಕ್ತೆಗುರಮ್ಮ ಸಿದ್ದಾರೆಡ್ಡಿ ಮಾತನಾಡಿ, ‘25 ವರ್ಷ ಸುದೀರ್ಘ ಸೇವೆ ಸಲ್ಲಿಸಿದ್ದ ಸಿದ್ದಾರಡ್ಡಿ ಅವರ ಕನಸಿನಂತೆ ಅವರ ಇಬ್ಬರು ಮಕ್ಕಳಾದ ಡಾ.ವಿಕ್ರಮ ಹಾಗೂ ಡಾ.ರಾಜಶ್ರೀ ತಲಾ ₹65 ಲಕ್ಷ ವೆಚ್ಚದಲ್ಲಿ 40X60 ಅಳತೆಯ ಎರಡು ನಿವೇಶನ ಒದಗಿಸಿ ಜಿಲ್ಲೆಯ ಸ್ಕೌಟ್ಸ್, ಗೈಡ್, ರೋವರ್, ರೆಂಜರ್ಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಇದಕ್ಕೆ ₹2 ಕೋಟಿ ಅನುದಾನ ಒದಗಿಸಿದ ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಅಭಿನಂದಿಸುತ್ತೇನೆ. ಇಲ್ಲಿಯ ವಿದ್ಯಾರ್ಥಿನಿಯರಿಗಾಗಿ ನಾನು ನಿವೇಶನ ಖರೀದಿಸಿ ಕೊಡುತ್ತೇನೆ. ಕೆಕೆಆರ್ಡಿಬಿಯಿಂದ ಅನುದಾನ ಒದಗಿಸಿ ಮಹಿಳಾ ಹಾಸ್ಟೆಲ್ ಕಟ್ಟಲು ಅನುದಾನ ಒದಗಿಸಬೇಕು’ ಎಂದು ಕೋರಿದರು.</p>.<p>ಡಾ.ಎಚ್.ಬಿ.ಭರಶೆಟ್ಟಿ, ಎಸ್.ಎಸ್ ಹಿರೇಮಠ ಪ್ರಾಸ್ತಾವಿಕ ಮಾತನಾಡಿದರು.</p>.<p>ವಿಧಾನ ಪರಿಷತ್ ಸದಸ್ಯ ಎಂ.ಜಿ ಮುಳೆ, ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಸ್ಕೌಟ್ಸ್ ರಾಜ್ಯ ಸಹಾಯಕ ಆಯುಕ್ತ ಸಿ.ಬಿ ಪಾಟೀಲ ಒಕಳಿ, ಡಾ.ಎಸ್.ಎಸ್ ಸಿದ್ದಾರಡ್ಡಿ ಫೌಂಡೇಷನ್ ಅಧ್ಯಕ್ಷ ಡಾ.ವಿಕ್ರಮ ಸಿದ್ದಾರಡ್ಡಿ, ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಉಪಾಧ್ಯಕ್ಷ ಪ್ರೊ.ಲೀಲಾವತಿ ಚಾಕೋತೆ ಹಾಗೂ ಡಾ.ಅಬ್ದುಲ್ ಖದೀರ್ ಇದ್ದರು.</p>.<p>ಡಾ.ರಾಜಶ್ರೀ ರೆಡ್ಡಿ ಹೊರತಂದ ದೃಷ್ಟಿ ಆರೈಕೆ ಜೀವನದ ಬೆಳಕು ಎಂಬ ಪುಸ್ತಕ ಬಿಡುಗಡೆ ಮಾಡಲಾಯಿತು.</p>.<p>ವಿಶ್ವ ಗೈಡ್ ಸಂಸ್ಥೆ ವತಿಯಿಂದ ಎಸಿಯಾ ಪೆಸಿಫಿಕ್ ಅಪ್ಪುಶಿಯೇಶನ್ಷನ್ ಅವಾರ್ಡ್ಗೆ ಭಾಜನರಾದಗುರಮ್ಮ ಸಿದ್ದಾರೆಡ್ಡಿ ಅವರನ್ನು ಸನ್ಮಾನಿಸಲಾಯಿತು. ಸಿದ್ದಾರೆಡ್ಡಿ ಸ್ಕೌಟ್ಸ್ ಭವನದ ಭೂದಾನಿಗಳಾದ ಡಾ.ವಿಕ್ರಮ ಸಿದ್ದಾರೆಡ್ಡಿ, ಡಾ.ರಾಜಶ್ರೀ.ವಿ.ರೆಡ್ಡಿ ಅವರನ್ನು ಗೌರವಿಸಲಾಯಿತು.</p>.<p>ಸಂಸ್ಥೆಯ ಕಾರ್ಯದರ್ಶಿ ರಮೇಶ ತಿಪಶೆಟ್ಟಿ ಸ್ವಾಗತಿಸಿದರು. ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಮಲ್ಲೇಶ್ವರಿ ಜೂಜಾರೆ ನಿರೂಪಿಸಿ, ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-33-1239424811</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ‘ಭಾರತ ಸ್ಕೌಟ್ಸ್ ಮತ್ತು ಗೈಡ್ನಿಂದ ಪರಿಶ್ರಮ ಹಾಗೂ ಸೇವಾ ಮನೋಭಾವ ಗಟ್ಟಿಯಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.</p>.<p>ಇಲ್ಲಿನ ಶಿವನಗರದಲ್ಲಿ ನೂತನವಾಗಿ ನಿರ್ಮಿಸಲಾದ ಸಿದ್ದಾರಡ್ಡಿ ಸ್ಕೌಟ್ಸ್ ಭವನದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಯುವಕರು ಡಿಜೆ ಸೌಂಡ್ಗೆ ಹೆಜ್ಜೆ ಹಾಕುತ್ತಿದೆ. ದುಶ್ಚಟಗಳಿಗೆ ದಾಸರಾಗಿ ಅಮೂಲ್ಯ ಜೀವನ ನಾಶಮಾಡಿಕೊಳ್ಳುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದ ಅವರು, ‘ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯಲ್ಲಿನ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಶಿಸ್ತು, ನಾಯಕತ್ವ ಗುಣ, ದೇಶಭಕ್ತಿ, ಆತ್ಮಸ್ಥೈರ್ಯ, ಧೈರ್ಯ ಹಾಗೂ ಸೇವಾಮನೋಭಾವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.</p>.<p>ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯಸಿಂಗ್ ಅವರು ಸಿದ್ದಾರಡ್ಡಿ ಸ್ಕೌಟ್ಸ್ ಭವನ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ‘ಕೆಕೆಆರ್ಡಿಬಿ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಅಕ್ಷರ ಅವಿಷ್ಕಾರ ಯೋಜನೆ ಅಡಿ ಸುಮಾರು ಮಾದರಿ 294 ಶಾಲೆಗಳನ್ನು ತೆರೆಯಲಾಗಿದೆ. ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ಬೀದರ್ ಸ್ಕೌಟ್ಸ್ ಭವನಗಳಿಗೆ ₹8 ಕೋಟಿ ಒದಗಿಸಲಾಗಿದ್ದು, ಬೀದರ್ ಸಿದ್ದಾರಡ್ಡಿ ಸ್ಕೌಟ್ಸ್ ಭವನಕ್ಕೆ ಈಗಾಗಲೇ ₹2 ಕೋಟಿ ಒದಗಿಸಲಾಗಿದೆ. ಮೇಲಂತಸ್ತಿನ ಕಟ್ಟಡಕ್ಕೂ ಅನುದಾನ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಭಾರತ ಸ್ಕೌಟ್ಸ್ ಮತ್ತು ಗೈಡ್ನ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಮಾತನಾಡಿ, ‘ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯನ್ನು ಲಾರ್ಡ್ ಬ್ಯಾಡೆನ್ ಪೊವೆಲ್ ಅವರು ಇಂಗ್ಲೆಂಡ್ನಲ್ಲಿ 1907ರಲ್ಲಿ ಪ್ರಾರಂಭಿಸಿದರು. ಭಾರತದಲ್ಲಿ ಇದನ್ನು 1909ರಲ್ಲಿ ಪ್ರಾರಂಭಿಸಲಾಯಿತು. ಮೈಸೂರು ಅರಸರು ಇದಕ್ಕೆ ರಾಜಾಶ್ರಯ ನೀಡಿದರು. ವಿದ್ಯಾರ್ಥಿಗಳಲ್ಲಿ ಶಿಸ್ತು, ಜ್ಞಾನ, ಕೌಶಲ, ಸೇವಾ ಮನೋಭಾವ ವೃದ್ಧಿಸುವಲ್ಲಿ ಜಗತ್ತಿನ 214 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ’ ಎಂದರು.</p>.<p>ಗೈಡ್ ವಿಭಾಗದ ರಾಜ್ಯ ಮುಖ್ಯ ಆಯುಕ್ತೆ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ನ ಜಿಲ್ಲಾ ಮುಖ್ಯ ಆಯುಕ್ತೆಗುರಮ್ಮ ಸಿದ್ದಾರೆಡ್ಡಿ ಮಾತನಾಡಿ, ‘25 ವರ್ಷ ಸುದೀರ್ಘ ಸೇವೆ ಸಲ್ಲಿಸಿದ್ದ ಸಿದ್ದಾರಡ್ಡಿ ಅವರ ಕನಸಿನಂತೆ ಅವರ ಇಬ್ಬರು ಮಕ್ಕಳಾದ ಡಾ.ವಿಕ್ರಮ ಹಾಗೂ ಡಾ.ರಾಜಶ್ರೀ ತಲಾ ₹65 ಲಕ್ಷ ವೆಚ್ಚದಲ್ಲಿ 40X60 ಅಳತೆಯ ಎರಡು ನಿವೇಶನ ಒದಗಿಸಿ ಜಿಲ್ಲೆಯ ಸ್ಕೌಟ್ಸ್, ಗೈಡ್, ರೋವರ್, ರೆಂಜರ್ಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಇದಕ್ಕೆ ₹2 ಕೋಟಿ ಅನುದಾನ ಒದಗಿಸಿದ ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಅಭಿನಂದಿಸುತ್ತೇನೆ. ಇಲ್ಲಿಯ ವಿದ್ಯಾರ್ಥಿನಿಯರಿಗಾಗಿ ನಾನು ನಿವೇಶನ ಖರೀದಿಸಿ ಕೊಡುತ್ತೇನೆ. ಕೆಕೆಆರ್ಡಿಬಿಯಿಂದ ಅನುದಾನ ಒದಗಿಸಿ ಮಹಿಳಾ ಹಾಸ್ಟೆಲ್ ಕಟ್ಟಲು ಅನುದಾನ ಒದಗಿಸಬೇಕು’ ಎಂದು ಕೋರಿದರು.</p>.<p>ಡಾ.ಎಚ್.ಬಿ.ಭರಶೆಟ್ಟಿ, ಎಸ್.ಎಸ್ ಹಿರೇಮಠ ಪ್ರಾಸ್ತಾವಿಕ ಮಾತನಾಡಿದರು.</p>.<p>ವಿಧಾನ ಪರಿಷತ್ ಸದಸ್ಯ ಎಂ.ಜಿ ಮುಳೆ, ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಸ್ಕೌಟ್ಸ್ ರಾಜ್ಯ ಸಹಾಯಕ ಆಯುಕ್ತ ಸಿ.ಬಿ ಪಾಟೀಲ ಒಕಳಿ, ಡಾ.ಎಸ್.ಎಸ್ ಸಿದ್ದಾರಡ್ಡಿ ಫೌಂಡೇಷನ್ ಅಧ್ಯಕ್ಷ ಡಾ.ವಿಕ್ರಮ ಸಿದ್ದಾರಡ್ಡಿ, ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಉಪಾಧ್ಯಕ್ಷ ಪ್ರೊ.ಲೀಲಾವತಿ ಚಾಕೋತೆ ಹಾಗೂ ಡಾ.ಅಬ್ದುಲ್ ಖದೀರ್ ಇದ್ದರು.</p>.<p>ಡಾ.ರಾಜಶ್ರೀ ರೆಡ್ಡಿ ಹೊರತಂದ ದೃಷ್ಟಿ ಆರೈಕೆ ಜೀವನದ ಬೆಳಕು ಎಂಬ ಪುಸ್ತಕ ಬಿಡುಗಡೆ ಮಾಡಲಾಯಿತು.</p>.<p>ವಿಶ್ವ ಗೈಡ್ ಸಂಸ್ಥೆ ವತಿಯಿಂದ ಎಸಿಯಾ ಪೆಸಿಫಿಕ್ ಅಪ್ಪುಶಿಯೇಶನ್ಷನ್ ಅವಾರ್ಡ್ಗೆ ಭಾಜನರಾದಗುರಮ್ಮ ಸಿದ್ದಾರೆಡ್ಡಿ ಅವರನ್ನು ಸನ್ಮಾನಿಸಲಾಯಿತು. ಸಿದ್ದಾರೆಡ್ಡಿ ಸ್ಕೌಟ್ಸ್ ಭವನದ ಭೂದಾನಿಗಳಾದ ಡಾ.ವಿಕ್ರಮ ಸಿದ್ದಾರೆಡ್ಡಿ, ಡಾ.ರಾಜಶ್ರೀ.ವಿ.ರೆಡ್ಡಿ ಅವರನ್ನು ಗೌರವಿಸಲಾಯಿತು.</p>.<p>ಸಂಸ್ಥೆಯ ಕಾರ್ಯದರ್ಶಿ ರಮೇಶ ತಿಪಶೆಟ್ಟಿ ಸ್ವಾಗತಿಸಿದರು. ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಮಲ್ಲೇಶ್ವರಿ ಜೂಜಾರೆ ನಿರೂಪಿಸಿ, ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-33-1239424811</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>