<p><strong>ಜನವಾಡ: </strong>ಮುಂಗಾರು ಹಂಗಾಮಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆಗೆ ಶಾಸಕ ರಹೀಂಖಾನ್ ಬೀದರ್ ತಾಲ್ಲೂಕಿನ ಜನವಾಡದ ರೈತ ಸಂಪರ್ಕ ಕೇಂದ್ರದಲ್ಲಿ ಗುರುವಾರ ಚಾಲನೆ ನೀಡಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ರೈತರಿಗೆ ವಿತರಿಸಲು ಬೀದರ್ ವಿಧಾನಸಭಾ ಕ್ಷೇತ್ರದ ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದೆ’ ಎಂದರು.</p>.<p>‘ರೈತರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ದಾಖಲೆ ಸಲ್ಲಿಸಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪಡೆಯಬೇಕು. ಕೊರೊನಾ ಸೋಂಕಿನ ಕಾರಣ ರೈತ ಸಂಪರ್ಕ ಕೇಂದ್ರಗಳಿಗೆ ಹೋದಾಗ ರೈತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು’ ಎಂದು ಸಲಹೆ ಮಾಡಿದರು.</p>.<p>ಸಹಾಯಕ ಕೃಷಿ ನಿರ್ದೇಶಕ ಎಂ.ಎ.ಕೆ. ಅನ್ಸಾರಿ ಮಾತನಾಡಿ, ಬೀದರ್ ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 51 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈ ಪೈಕಿ ಉದ್ದು, ಹೆಸರು ತಲಾ ಐದು 5 ಸಾವಿರ ಹೆಕ್ಟೇರ್, ತೊಗರಿ 11 ಸಾವಿರ ಹೆಕ್ಟೇರ್, ಸೋಯಾ ಅವರೆ 20 ಸಾವಿರ ಹೆಕ್ಟೇರ್, ಹೈಬ್ರೀಡ್ ಜೋಳ 4,500 ಹೆಕ್ಟೇರ್, ಮೆಕ್ಕೆ ಜೋಳ 800 ಹೆಕ್ಟೇರ್ ಹಾಗೂ ಭತ್ತ 1,500 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗುವ ನಿರೀಕ್ಷೆ ಇದೆ’ ಎಂದರು.</p>.<p>ಆರು ರೈತ ಸಂಪರ್ಕ ಕೇಂದ್ರ ಹಾಗೂ 18 ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳಲ್ಲಿ ಈಗಾಗಲೇ ಬಿತ್ತನೆ ಬೀಜ ದಾಸ್ತಾನು ಮಾಡಿಕೊಳ್ಳಲಾಗಿದೆ. ಬೀದರ್, ಬೀದರ್ ದಕ್ಷಿಣ, ಕಮಠಾಣ, ಬಗದಲ್, ಮನ್ನಳ್ಳಿ, ಜನವಾಡ ರೈತ ಸಂಪರ್ಕ ಕೇಂದ್ರ, ಗಾದಗಿ, ಚಿಲ್ಲರ್ಗಿ, ಅಷ್ಟೂರ, ಚಾಂಬೋಳ, ಮಂದಕನಳ್ಳಿ, ಹೊಕ್ರಾಣ (ಬಿ) ಹಾಗೂ ಮರಕುಂದಾ ಹೆಚ್ಚುವರಿ ಕೇಂದ್ರಗಳಲ್ಲಿ ಬೀಜ ವಿತರಣೆ ಆರಂಭಿಸಲಾಗಿದೆ ಎಂದು ತಿಳಿಸಿದರು.</p>.<p>ಮಾಳೆಗಾಂವ, ಕಪಲಾಪುರ, ಯದಲಾಪುರ, ನವಲಸಪುರ, ಅಲಿಯಂಬರ್, ಯರನಳ್ಳಿ, ಕಾಶೆಂಪುರ(ಪಿ), ರಂಜೋಳಖೇಣಿ, ರೇಕುಳಗಿ ಕೇಂದ್ರಗಳಲ್ಲಿ ಮುಂದಿನ ವಾರದಿಂದ ಬೀಜ ವಿತರಣೆ ಶುರು ಮಾಡಲಾಗುವುದು ಎಂದು ಹೇಳಿದರು.</p>.<p>ತಾಂತ್ರಿಕ ಅಧಿಕಾರಿ ಆರತಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ., ಡಾ.ಆರ್.ಎಲ್. ಜಾಧವ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜನವಾಡ: </strong>ಮುಂಗಾರು ಹಂಗಾಮಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆಗೆ ಶಾಸಕ ರಹೀಂಖಾನ್ ಬೀದರ್ ತಾಲ್ಲೂಕಿನ ಜನವಾಡದ ರೈತ ಸಂಪರ್ಕ ಕೇಂದ್ರದಲ್ಲಿ ಗುರುವಾರ ಚಾಲನೆ ನೀಡಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ರೈತರಿಗೆ ವಿತರಿಸಲು ಬೀದರ್ ವಿಧಾನಸಭಾ ಕ್ಷೇತ್ರದ ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದೆ’ ಎಂದರು.</p>.<p>‘ರೈತರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ದಾಖಲೆ ಸಲ್ಲಿಸಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪಡೆಯಬೇಕು. ಕೊರೊನಾ ಸೋಂಕಿನ ಕಾರಣ ರೈತ ಸಂಪರ್ಕ ಕೇಂದ್ರಗಳಿಗೆ ಹೋದಾಗ ರೈತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು’ ಎಂದು ಸಲಹೆ ಮಾಡಿದರು.</p>.<p>ಸಹಾಯಕ ಕೃಷಿ ನಿರ್ದೇಶಕ ಎಂ.ಎ.ಕೆ. ಅನ್ಸಾರಿ ಮಾತನಾಡಿ, ಬೀದರ್ ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 51 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈ ಪೈಕಿ ಉದ್ದು, ಹೆಸರು ತಲಾ ಐದು 5 ಸಾವಿರ ಹೆಕ್ಟೇರ್, ತೊಗರಿ 11 ಸಾವಿರ ಹೆಕ್ಟೇರ್, ಸೋಯಾ ಅವರೆ 20 ಸಾವಿರ ಹೆಕ್ಟೇರ್, ಹೈಬ್ರೀಡ್ ಜೋಳ 4,500 ಹೆಕ್ಟೇರ್, ಮೆಕ್ಕೆ ಜೋಳ 800 ಹೆಕ್ಟೇರ್ ಹಾಗೂ ಭತ್ತ 1,500 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗುವ ನಿರೀಕ್ಷೆ ಇದೆ’ ಎಂದರು.</p>.<p>ಆರು ರೈತ ಸಂಪರ್ಕ ಕೇಂದ್ರ ಹಾಗೂ 18 ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳಲ್ಲಿ ಈಗಾಗಲೇ ಬಿತ್ತನೆ ಬೀಜ ದಾಸ್ತಾನು ಮಾಡಿಕೊಳ್ಳಲಾಗಿದೆ. ಬೀದರ್, ಬೀದರ್ ದಕ್ಷಿಣ, ಕಮಠಾಣ, ಬಗದಲ್, ಮನ್ನಳ್ಳಿ, ಜನವಾಡ ರೈತ ಸಂಪರ್ಕ ಕೇಂದ್ರ, ಗಾದಗಿ, ಚಿಲ್ಲರ್ಗಿ, ಅಷ್ಟೂರ, ಚಾಂಬೋಳ, ಮಂದಕನಳ್ಳಿ, ಹೊಕ್ರಾಣ (ಬಿ) ಹಾಗೂ ಮರಕುಂದಾ ಹೆಚ್ಚುವರಿ ಕೇಂದ್ರಗಳಲ್ಲಿ ಬೀಜ ವಿತರಣೆ ಆರಂಭಿಸಲಾಗಿದೆ ಎಂದು ತಿಳಿಸಿದರು.</p>.<p>ಮಾಳೆಗಾಂವ, ಕಪಲಾಪುರ, ಯದಲಾಪುರ, ನವಲಸಪುರ, ಅಲಿಯಂಬರ್, ಯರನಳ್ಳಿ, ಕಾಶೆಂಪುರ(ಪಿ), ರಂಜೋಳಖೇಣಿ, ರೇಕುಳಗಿ ಕೇಂದ್ರಗಳಲ್ಲಿ ಮುಂದಿನ ವಾರದಿಂದ ಬೀಜ ವಿತರಣೆ ಶುರು ಮಾಡಲಾಗುವುದು ಎಂದು ಹೇಳಿದರು.</p>.<p>ತಾಂತ್ರಿಕ ಅಧಿಕಾರಿ ಆರತಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ., ಡಾ.ಆರ್.ಎಲ್. ಜಾಧವ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>