ಆರು ರೈತ ಸಂಪರ್ಕ ಕೇಂದ್ರ ಹಾಗೂ 18 ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳಲ್ಲಿ ಈಗಾಗಲೇ ಬಿತ್ತನೆ ಬೀಜ ದಾಸ್ತಾನು ಮಾಡಿಕೊಳ್ಳಲಾಗಿದೆ. ಬೀದರ್, ಬೀದರ್ ದಕ್ಷಿಣ, ಕಮಠಾಣ, ಬಗದಲ್, ಮನ್ನಳ್ಳಿ, ಜನವಾಡ ರೈತ ಸಂಪರ್ಕ ಕೇಂದ್ರ, ಗಾದಗಿ, ಚಿಲ್ಲರ್ಗಿ, ಅಷ್ಟೂರ, ಚಾಂಬೋಳ, ಮಂದಕನಳ್ಳಿ, ಹೊಕ್ರಾಣ (ಬಿ) ಹಾಗೂ ಮರಕುಂದಾ ಹೆಚ್ಚುವರಿ ಕೇಂದ್ರಗಳಲ್ಲಿ ಬೀಜ ವಿತರಣೆ ಆರಂಭಿಸಲಾಗಿದೆ ಎಂದು ತಿಳಿಸಿದರು.