ಬೀದರ್: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರಬಾಬು ಅವರನ್ನು ವೈರ್ಲೈಸ್ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಹುಬ್ಬಳ್ಳಿ ವಿದ್ಯುತ್ ಪೂರೈಕೆ ಕಂಪನಿಯ ವಿಚಕ್ಷಕ ದಳದ ಚನ್ನಬಸವಣ್ಣ ಲಂಗೋಟಿ ಅವರನ್ನು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ನಿಯೋಜಿಸಲಾಗಿದೆ. ಚನ್ನಬಸವಣ್ಣ ಅವರು 2014ರ ತಂಡದ ಅಧಿಕಾರಿಯಾಗಿದ್ದಾರೆ.
ಮಂಗಳೂರು ದಕ್ಷಿಣ ಉಪ ವಿಭಾಗದ ಡಿವೈಎಸ್ಪಿ ದಿನಕರ ಶೆಟ್ಟಿ ಅವರನ್ನು ಬೀದರ್ ಡಿವೈಎಸ್ಪಿ ಹುದ್ದೆಗೆ ನೇಮಕ ಮಾಡಲಾಗಿದೆ.