<p><strong>ಬೀದರ್</strong>: ಮಹಾತ್ಮ ಗಾಂಧೀಜಿಯವರ ‘ಹುತಾತ್ಮ ದಿನ’ದ ಅಂಗವಾಗಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನಕ್ಕೆ ನಗರದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ಡಿವಿಬಿಡಿಸಿಒ ಅಧಿಕಾರಿ ಡಾ.ರಾಜಶೇಖರ ಪಾಟೀಲ ಚಾಲನೆ ನೀಡಿ, ಕುಷ್ಠರೋಗ ಒಂದು ಸಾಂಕ್ರಾಮಿಕವಾಗಿದ್ದು ಇದು ಯಾವುದೇ ಶಾಪ, ಪಾಪದಿಂದ ಬರುವುದಿಲ್ಲ. ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿದಾಗ ಜಿಲ್ಲೆಯನ್ನು ಕುಷ್ಠರೋಗ ಮುಕ್ತ ಮಾಡಬಹುದು ಎಂದು ಹೇಳಿದರು.</p>.<p>ಡಾ.ಶಂಕ್ರೆಪ್ಪ ಬೊಮ್ಮಾ ಮಾತನಾಡಿ, ಜಿಲ್ಲೆಯಲ್ಲಿ 60 ಕುಷ್ಠರೋಗಿಗಳಿದ್ದಾರೆ. ಈ ವರ್ಷ 51 ಹೊಸ ಪ್ರಕರಣ ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಪರ್ಶ ಕುಷ್ಠರೋಗ ಜಾಗೃತಿ ಪಾಕ್ಷಿಕ ಅಭಿಯಾನವನ್ನು ಫೆ.13ರ ತನಕ ಜಿಲ್ಲೆಯಾದ್ಯಂತ ಆಚರಿಸಲಾಗುತ್ತಿದೆ ಎಂದರು.</p>.<p>ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪ ಕಾಂಬ್ಳೆ ಅವರು ಪ್ರತಿಜ್ಞೆ ಬೋಧಿಸಿದರು. ತಾಲ್ಲೂಕು ಅರೋಗ್ಯ ಅಧಿಕಾರಿ ಡಾ.ಸಂಗಾರೆಡ್ಡಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೀರಶೆಟ್ಟಿ ಚನ್ನಶೆಟ್ಟಿ, ಮೇಲ್ವಿಚಾರಕ ಓಂಕಾರ ಮಲ್ಲಿಗೆ, ಆಪ್ತ ಸಮಾಲೋಚಕ ಸೀಮಪ್ಪ, ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಮಹಾತ್ಮ ಗಾಂಧೀಜಿಯವರ ‘ಹುತಾತ್ಮ ದಿನ’ದ ಅಂಗವಾಗಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನಕ್ಕೆ ನಗರದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ಡಿವಿಬಿಡಿಸಿಒ ಅಧಿಕಾರಿ ಡಾ.ರಾಜಶೇಖರ ಪಾಟೀಲ ಚಾಲನೆ ನೀಡಿ, ಕುಷ್ಠರೋಗ ಒಂದು ಸಾಂಕ್ರಾಮಿಕವಾಗಿದ್ದು ಇದು ಯಾವುದೇ ಶಾಪ, ಪಾಪದಿಂದ ಬರುವುದಿಲ್ಲ. ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿದಾಗ ಜಿಲ್ಲೆಯನ್ನು ಕುಷ್ಠರೋಗ ಮುಕ್ತ ಮಾಡಬಹುದು ಎಂದು ಹೇಳಿದರು.</p>.<p>ಡಾ.ಶಂಕ್ರೆಪ್ಪ ಬೊಮ್ಮಾ ಮಾತನಾಡಿ, ಜಿಲ್ಲೆಯಲ್ಲಿ 60 ಕುಷ್ಠರೋಗಿಗಳಿದ್ದಾರೆ. ಈ ವರ್ಷ 51 ಹೊಸ ಪ್ರಕರಣ ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಪರ್ಶ ಕುಷ್ಠರೋಗ ಜಾಗೃತಿ ಪಾಕ್ಷಿಕ ಅಭಿಯಾನವನ್ನು ಫೆ.13ರ ತನಕ ಜಿಲ್ಲೆಯಾದ್ಯಂತ ಆಚರಿಸಲಾಗುತ್ತಿದೆ ಎಂದರು.</p>.<p>ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪ ಕಾಂಬ್ಳೆ ಅವರು ಪ್ರತಿಜ್ಞೆ ಬೋಧಿಸಿದರು. ತಾಲ್ಲೂಕು ಅರೋಗ್ಯ ಅಧಿಕಾರಿ ಡಾ.ಸಂಗಾರೆಡ್ಡಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೀರಶೆಟ್ಟಿ ಚನ್ನಶೆಟ್ಟಿ, ಮೇಲ್ವಿಚಾರಕ ಓಂಕಾರ ಮಲ್ಲಿಗೆ, ಆಪ್ತ ಸಮಾಲೋಚಕ ಸೀಮಪ್ಪ, ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>