2021ರ ಸೆಪ್ಟೆಂಬರ್ನಲ್ಲಿ ಜಿಲ್ಲೆಯ ಎಲ್ಲ ಜಲಾಶಯಗಳು ಭರ್ತಿಯಾಗಿದ್ದವು. ಭಾಲ್ಕಿ ತಾಲ್ಲೂಕಿನ ಕಾರಂಜಾ ಜಲಾಶಯ, ಬಸವಕಲ್ಯಾಣ ತಾಲ್ಲೂಕಿನ ಚುಳುಕಿನಾಲಾ, ಅಪ್ಪರ್ ಮುಲ್ಲಾಮಾರಿ ಜಲಾಶಯಗಳಿಂದ ನೀರು ಹೊರಕ್ಕೆ ಬಿಡಲಾಗಿತ್ತು. ಸೆಪ್ಟೆಂಬರ್ನಲ್ಲಿ ತೆಲಂಗಾಣದಲ್ಲೂ ಧಾರಾಕಾರ ಮಳೆ ಸುರಿದ ಕಾರಣ ತೆಲಂಗಾಣದ ಕೊತ್ತೂರಿನ ಚಿಕ್ಕ ಜಲಾಶಯದಿಂದ 1,500 ಕ್ಯೂಸೆಕ್ ನೀರು ಬಿಡಲಾಗಿತ್ತು. ನಂತರ ಕಾರಂಜಾದ ನಾಲ್ಕು ಕ್ರಸ್ಟ್ ಗೇಟ್ಗಳನ್ನು ತೆರೆದು 8,500 ಕ್ಯೂಸೆಕ್ ನೀರು ಹರಿಯ ಬಿಡಲಾಗಿತ್ತು’ ಎಂದು ಕಾರಂಜಾ ಯೋಜನೆ ಕಾರ್ಯನಿರ್ವಾಹಕ ಎಂಜಿನಿಯರ್ ರವಿಕಿರಣ ಹೇಳುತ್ತಾರೆ.