<p>ಬೀದರ್: ಪ್ರಸಕ್ತ ವರ್ಷ ಸರ್ಕಾರ ವಿದ್ಯಾರ್ಥಿಗಳ ಆರು ತಿಂಗಳ ಎಲ್ಲ ಶೈಕ್ಷಣಿಕ ಶುಲ್ಕಗಳನ್ನು ಮನ್ನಾ ಮಾಡಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ ಒತ್ತಾಯಿಸಿದೆ.</p>.<p>ಫೆಡರೇಷನ್ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಕೋಡಗೆ, ಉಪಾಧ್ಯಕ್ಷ ಅಮರ ಗಾದಗಿ ಹಾಗೂ ಕಾರ್ಯದರ್ಶಿ ಅವಿನಾಶ ಪಾಟೀಲ ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.</p>.<p>ಕೋವಿಡ್ –19 ಪ್ರಯುಕ್ತ ಪಾಲಕರು ತೊಂದರೆಯಲ್ಲಿ ಇದ್ದಾರೆ. ಅಭಿವೃದ್ಧಿ ಶುಲ್ಕ, ಪ್ರವೇಶ ಶುಲ್ಕದ ಹೆಸರಲ್ಲಿ ಶೋಷಣೆ ಮಾಡಬಾರದು. 6 ತಿಂಗಳ ಕಾಲ ವಿದ್ಯಾರ್ಥಿಗಳ ಕುಟುಂಬಕ್ಕೆ ಪ್ರತಿ ತಿಂಗಳು ತಲಾ ₹7,500 ಸಹಾಯಧನ ಒದಗಿಸಬೇಕು. ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವುದರಿಂದ ಸ್ನಾತಕ, ಸ್ನಾತಕೋತ್ತರ, ಕಾನೂನು, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್ ಪರೀಕ್ಷೆಗಳನ್ನು ರದ್ದುಪಡಿಸಬೇಕು. ಆನ್ಲೈನ್ ಶಿಕ್ಷಣ ಕಡ್ಡಾಯಗೊಳಿಸಬಾರದು. 12ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ಕಲ್ಪಿಸಬೇಕು. ಫೆಲೋಶಿಪ್ ಕೂಡಲೇ ಕೊಡಬೇಕು. ಪದವಿ ಕಾಲೇಜುಗಳ ಸ್ಥಳಾಂತರ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಪ್ರಸಕ್ತ ವರ್ಷ ಸರ್ಕಾರ ವಿದ್ಯಾರ್ಥಿಗಳ ಆರು ತಿಂಗಳ ಎಲ್ಲ ಶೈಕ್ಷಣಿಕ ಶುಲ್ಕಗಳನ್ನು ಮನ್ನಾ ಮಾಡಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ ಒತ್ತಾಯಿಸಿದೆ.</p>.<p>ಫೆಡರೇಷನ್ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಕೋಡಗೆ, ಉಪಾಧ್ಯಕ್ಷ ಅಮರ ಗಾದಗಿ ಹಾಗೂ ಕಾರ್ಯದರ್ಶಿ ಅವಿನಾಶ ಪಾಟೀಲ ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.</p>.<p>ಕೋವಿಡ್ –19 ಪ್ರಯುಕ್ತ ಪಾಲಕರು ತೊಂದರೆಯಲ್ಲಿ ಇದ್ದಾರೆ. ಅಭಿವೃದ್ಧಿ ಶುಲ್ಕ, ಪ್ರವೇಶ ಶುಲ್ಕದ ಹೆಸರಲ್ಲಿ ಶೋಷಣೆ ಮಾಡಬಾರದು. 6 ತಿಂಗಳ ಕಾಲ ವಿದ್ಯಾರ್ಥಿಗಳ ಕುಟುಂಬಕ್ಕೆ ಪ್ರತಿ ತಿಂಗಳು ತಲಾ ₹7,500 ಸಹಾಯಧನ ಒದಗಿಸಬೇಕು. ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವುದರಿಂದ ಸ್ನಾತಕ, ಸ್ನಾತಕೋತ್ತರ, ಕಾನೂನು, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್ ಪರೀಕ್ಷೆಗಳನ್ನು ರದ್ದುಪಡಿಸಬೇಕು. ಆನ್ಲೈನ್ ಶಿಕ್ಷಣ ಕಡ್ಡಾಯಗೊಳಿಸಬಾರದು. 12ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ಕಲ್ಪಿಸಬೇಕು. ಫೆಲೋಶಿಪ್ ಕೂಡಲೇ ಕೊಡಬೇಕು. ಪದವಿ ಕಾಲೇಜುಗಳ ಸ್ಥಳಾಂತರ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>