ಬೀದರ್: ‘ರಾಜ್ಯದಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಇದ್ದರೂ ವಿಶೇಷವಾಗಿ ಗೋವುಗಳ ರಕ್ಷಣೆಗಾಗಿಯೇ ಗೋ ಸೇವಾ ಆಯೋಗ ರಚಿಸಲು ಚಿಂತನೆ ನಡೆಸಲಾಗುತ್ತಿದೆ’ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವಾಣ್ ಹೇಳಿದರು.
ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಪಶು ಮೇಳದಲ್ಲಿ ಶನಿವಾರ ತಾಂತ್ರಿಕ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.