<p><strong>ಬೀದರ್:</strong> ಬಸವಕಲ್ಯಾಣ ಜವಾಹರ್ ನವೋದಯ ವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಹೈದರಾಬಾದಿನ ‘ಸೆಂಟರ್ ಆಫ್ ಸೆಲ್ಯುಲಾರ್ ಅಂಡ್ ಮೈಕ್ರೋಬಯಾಲಜಿ ರಿಸರ್ಚ್ ಸೆಂಟರ್’ನಲ್ಲಿ ನಡೆಯಲಿರುವ ಕಾರ್ಯಾಗಾರಕ್ಕೆ ಒಂದು ದಿನದ ವಿಜ್ಞಾನಿಗಳಾಗಿ ಆಯ್ಕೆಯಾಗಿದ್ದಾರೆ.</p>.<p>ಎಂಟನೇ ತರಗತಿಯ ಆರುಷ್, ಒಂಬತ್ತನೇ ತರಗತಿಯ ಅಮೃತಾ ಎನ್.ಆರ್. ಹಾಗೂ ಅನುಷ್ಕಾ ವಿ.ಟಿ. ಆಯ್ಕೆಯಾದವರು. ಸಿಎಸ್ಆರ್ಐನಿಂದ ಇತ್ತೀಚೆಗೆ ಏರ್ಪಡಿಸಿದ್ದ ವಿಜ್ಞಾನ ಸ್ಪರ್ಧೆಯಲ್ಲಿ ಈ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿದ್ದರಿಂದ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಸ್ಆರ್ಐ ತಿಳಿಸಿದೆ.</p>.<p>ವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಮಕ್ಕಳನ್ನು ಗುರುತಿಸಿ, ಅವರಲ್ಲಿ ಅಡಗಿರುವ ವೈಜ್ಞಾನಿಕ ಹಾಗೂ ಸಂಶೋಧನಾ ಮನೋಭಾವ ಗುರುತಿಸಿ, ಪ್ರತಿಷ್ಠಿತ ವಿಜ್ಞಾನಿಗಳೊಂದಿಗೆ ವಿಚಾರ ವಿನಿಮಯಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಮೇ 16ರಂದು ಹೈದರಾಬಾದ್ನಲ್ಲಿ ಕಾರ್ಯಾಗಾರ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p>ವಿದ್ಯಾರ್ಥಿಗಳ ಸಾಧನೆಗೆ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯೆ ಭಾವನಾ ಋಷಿ, ಅಧ್ಯಾಪಕರಾದ ಮದನ್ ಲಾಮತುರೆ, ಧರ್ಮಣ್ಣ ಚಿಟ್ಟಾ ಸಂತಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬಸವಕಲ್ಯಾಣ ಜವಾಹರ್ ನವೋದಯ ವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಹೈದರಾಬಾದಿನ ‘ಸೆಂಟರ್ ಆಫ್ ಸೆಲ್ಯುಲಾರ್ ಅಂಡ್ ಮೈಕ್ರೋಬಯಾಲಜಿ ರಿಸರ್ಚ್ ಸೆಂಟರ್’ನಲ್ಲಿ ನಡೆಯಲಿರುವ ಕಾರ್ಯಾಗಾರಕ್ಕೆ ಒಂದು ದಿನದ ವಿಜ್ಞಾನಿಗಳಾಗಿ ಆಯ್ಕೆಯಾಗಿದ್ದಾರೆ.</p>.<p>ಎಂಟನೇ ತರಗತಿಯ ಆರುಷ್, ಒಂಬತ್ತನೇ ತರಗತಿಯ ಅಮೃತಾ ಎನ್.ಆರ್. ಹಾಗೂ ಅನುಷ್ಕಾ ವಿ.ಟಿ. ಆಯ್ಕೆಯಾದವರು. ಸಿಎಸ್ಆರ್ಐನಿಂದ ಇತ್ತೀಚೆಗೆ ಏರ್ಪಡಿಸಿದ್ದ ವಿಜ್ಞಾನ ಸ್ಪರ್ಧೆಯಲ್ಲಿ ಈ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿದ್ದರಿಂದ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಸ್ಆರ್ಐ ತಿಳಿಸಿದೆ.</p>.<p>ವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಮಕ್ಕಳನ್ನು ಗುರುತಿಸಿ, ಅವರಲ್ಲಿ ಅಡಗಿರುವ ವೈಜ್ಞಾನಿಕ ಹಾಗೂ ಸಂಶೋಧನಾ ಮನೋಭಾವ ಗುರುತಿಸಿ, ಪ್ರತಿಷ್ಠಿತ ವಿಜ್ಞಾನಿಗಳೊಂದಿಗೆ ವಿಚಾರ ವಿನಿಮಯಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಮೇ 16ರಂದು ಹೈದರಾಬಾದ್ನಲ್ಲಿ ಕಾರ್ಯಾಗಾರ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p>ವಿದ್ಯಾರ್ಥಿಗಳ ಸಾಧನೆಗೆ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯೆ ಭಾವನಾ ಋಷಿ, ಅಧ್ಯಾಪಕರಾದ ಮದನ್ ಲಾಮತುರೆ, ಧರ್ಮಣ್ಣ ಚಿಟ್ಟಾ ಸಂತಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>