<p>ಬೀದರ್: ತಾಲ್ಲೂಕಿನ ವಾಲದೊಡ್ಡಿ (ಓಡವಾಡ) ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನ ಭೂಮಿ, ಸರ್ಕಾರಿ ಜಮೀನು ಹಾಗೂ ದಲಿತರಿಗೆ ನೀಡಲಾದ ಸಿ-ಫಾರಂ ಜಮೀನು ಅತಿಕ್ರಮಿಸಿ ಅಕ್ರಮ ಲೇಔಟ್ ನಿರ್ಮಿಸಿ ಮಾರಾಟ ಮಾಡಲಾಗುತ್ತಿದ್ದು, ಅದನ್ನು ತಡೆಯುವಂತೆ ಆಗ್ರಹಿಸಿ ಗ್ರಾಮಸ್ಥರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ನಂತರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ವಾಲದೊಡ್ಡಿ ಗ್ರಾಮದ ಸರ್ವೇ ನಂಬರ್ 74ರ ಸಾರ್ವಜನಿಕ ಸ್ಮಶಾನ ಭೂಮಿ, ಸರ್ವೇ ನಂಬರ್ 75ರ ಸರ್ಕಾರಿ ಜಮೀನು, ಸರ್ವೇ ನಂಬರ್ 81, 82, 83ರ ಸಿ-ಫಾರಂ ಭೂಮಿ ಹಾಗೂ ಸರ್ವೇ ನಂಬರ್ 86, 87ರ ಜಮೀನು ಕಬಳಿಸಿ, ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಲೇಔಟ್ ನಿರ್ಮಿಸಲಾಗಿದೆ ಎಂದು ಆರೋಪಿಸಿದರು.</p>.<p>ಸುಮೇದ ಬೌದ್ಧ ವಿಹಾರಕ್ಕೆ ಸಂಬಂಧಿಸಿದ ಜಮೀನಿನಲ್ಲಿಯೂ ಅಕ್ರಮ ಪ್ರವೇಶ ನಡೆದಿದೆ. ಈ ಕುರಿತು ಪ್ರಶ್ನಿಸಿದವರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಮಹಿಳೆಯರ ಮೇಲೂ ದೌರ್ಜನ್ಯ ಎಸಗಲಾಗುತ್ತಿದೆ ಎಂದು ದೂರಿದರು.</p>.<p>ಆರೋಪಿಗಳ ವಿರುದ್ಧ ಮಹಿಳಾ ಪೊಲೀಸ್ ಠಾಣೆ, ನಗರ ಪೊಲೀಸ್ ಠಾಣೆ, ಮಾರ್ಕೆಟ್ ಪೊಲೀಸ್ ಠಾಣೆ ಹಾಗೂ ಸೈಬರ್ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ. ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆದು, ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಗ್ರಾಮದ ಗಣಪತಿ ಶಂಕರ, ನಾಮದೇವ ಪಂಢರಿ, ಪ್ರವೀಣಕುಮಾರ ಯೋಗಿನಾಥ, ಗ್ರಾಮ ಪಂಚಾಯಿತಿ ಸದಸ್ಯ ಕಾಶಿನಾಥ ಶಿವರಾಜ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-33-1890066906</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ತಾಲ್ಲೂಕಿನ ವಾಲದೊಡ್ಡಿ (ಓಡವಾಡ) ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನ ಭೂಮಿ, ಸರ್ಕಾರಿ ಜಮೀನು ಹಾಗೂ ದಲಿತರಿಗೆ ನೀಡಲಾದ ಸಿ-ಫಾರಂ ಜಮೀನು ಅತಿಕ್ರಮಿಸಿ ಅಕ್ರಮ ಲೇಔಟ್ ನಿರ್ಮಿಸಿ ಮಾರಾಟ ಮಾಡಲಾಗುತ್ತಿದ್ದು, ಅದನ್ನು ತಡೆಯುವಂತೆ ಆಗ್ರಹಿಸಿ ಗ್ರಾಮಸ್ಥರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ನಂತರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ವಾಲದೊಡ್ಡಿ ಗ್ರಾಮದ ಸರ್ವೇ ನಂಬರ್ 74ರ ಸಾರ್ವಜನಿಕ ಸ್ಮಶಾನ ಭೂಮಿ, ಸರ್ವೇ ನಂಬರ್ 75ರ ಸರ್ಕಾರಿ ಜಮೀನು, ಸರ್ವೇ ನಂಬರ್ 81, 82, 83ರ ಸಿ-ಫಾರಂ ಭೂಮಿ ಹಾಗೂ ಸರ್ವೇ ನಂಬರ್ 86, 87ರ ಜಮೀನು ಕಬಳಿಸಿ, ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಲೇಔಟ್ ನಿರ್ಮಿಸಲಾಗಿದೆ ಎಂದು ಆರೋಪಿಸಿದರು.</p>.<p>ಸುಮೇದ ಬೌದ್ಧ ವಿಹಾರಕ್ಕೆ ಸಂಬಂಧಿಸಿದ ಜಮೀನಿನಲ್ಲಿಯೂ ಅಕ್ರಮ ಪ್ರವೇಶ ನಡೆದಿದೆ. ಈ ಕುರಿತು ಪ್ರಶ್ನಿಸಿದವರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಮಹಿಳೆಯರ ಮೇಲೂ ದೌರ್ಜನ್ಯ ಎಸಗಲಾಗುತ್ತಿದೆ ಎಂದು ದೂರಿದರು.</p>.<p>ಆರೋಪಿಗಳ ವಿರುದ್ಧ ಮಹಿಳಾ ಪೊಲೀಸ್ ಠಾಣೆ, ನಗರ ಪೊಲೀಸ್ ಠಾಣೆ, ಮಾರ್ಕೆಟ್ ಪೊಲೀಸ್ ಠಾಣೆ ಹಾಗೂ ಸೈಬರ್ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ. ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆದು, ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಗ್ರಾಮದ ಗಣಪತಿ ಶಂಕರ, ನಾಮದೇವ ಪಂಢರಿ, ಪ್ರವೀಣಕುಮಾರ ಯೋಗಿನಾಥ, ಗ್ರಾಮ ಪಂಚಾಯಿತಿ ಸದಸ್ಯ ಕಾಶಿನಾಥ ಶಿವರಾಜ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-33-1890066906</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>