ಬೀದರ್: ಕೊರೊನಾ ಸೋಂಕು ತಡೆಗೆ ಜಿಲ್ಲೆಯಲ್ಲಿ ಜುಲೈ 22 ರ ವರೆಗೆ ವಿಧಿಸಿರುವ ಲಾಕ್ಡೌನ್ಗೆ ಸಾರ್ವಜನಿಕರು ಸಹಕರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಮನವಿ ಮಾಡಿದ್ದಾರೆ.
ಜನರ ಹಿತ ಕಾಪಾಡುವುದಕ್ಕಾಗಿ ಲಾಕ್ಡೌನ್ ಮಾಡಲಾಗುತ್ತಿದೆ. ಹೀಗಾಗಿ ಪ್ರತಿಯೊಬ್ಬರು ನಿಯಮಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ಹೇಳಿದ್ದಾರೆ.
ಕೊರೊನಾ ಸೋಂಕಿಗೆ ಹೆದರುವ ಅಗತ್ಯ ಇಲ್ಲ. ಜ್ವರ, ಕೆಮ್ಮು, ಶೀತ ಕಂಡು ಬಂದರೆ ವೈದ್ಯರನ್ನು ಕಾಣಬೇಕು ಎಂದು ಹೇಳಿದ್ದಾರೆ. ಕೊರೊನಾ ಸೋಂಕು ಬರದಂತೆ ತಡೆಯಲು ಮಾಸ್ಕ್ ಧರಿಸಬೇಕು. ಸುರಕ್ಷಿತ ಅಂತರ ಕಾಪಾಡಬೇಕು. ಕೈಗಳನ್ನು ಆಗಾಗ ಸಾಬೂನಿನಿಂದ ತೊಳೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.