<p><strong>ಬೀದರ್:</strong> ಬೀದರ್ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದಿಂದ ನಗರದಲ್ಲಿ ಸೋಮವಾರ ಸ್ವಾಮಿ ವಿವೇಕಾನಂದರ 164ನೇ ಜನ್ಮ ದಿನ ಆಚರಿಸಲಾಯಿತು.</p>.<p>ಒಕ್ಕೂಟದ ಗುರುನಾಥ ಜ್ಯಾಂತಿಕರ್ ಮಾತನಾಡಿ, ಸ್ವಾಮಿ ವಿವೇಕಾನಂದರು ಅಪ್ಪಟ ದೇಶಭಕ್ತ ಹಾಗೂ ಮೇಧಾವಿಯಾಗಿದ್ದರು. ಇಂದಿಗೂ ಯುವಕರಿಗೆ ಆದರ್ಶ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.</p>.<p>ರಾಮಕೃಷ್ಣ ಪರಮಹಂಸರ ಶಿಷ್ಯರಾಗಿದ್ದ ಸ್ವಾಮಿ ವಿವೇಕಾನಂದರು, 1893ರ ಸೆಪ್ಟೆಂಬರ್ 11ರಂದು ಅಮೆರಿಕದ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿನಲ್ಲಿ ನೀಡಿದ ಭಾಷಣದಿಂದ ಭಾರತದ ಸಂಸ್ಕೃತಿಯನ್ನು ವಿಶ್ವದಾದ್ಯಂತ ಪರಿಚಯಿಸಿದರು. ಪ್ರತಿಯೊಬ್ಬ ಯುವಕನಿಗೂ ವಿವೇಕಾನಂದರ ಆದರ್ಶ ಜೀವನ ಮಾದರಿಯಾಗಬೇಕು ಎಂದು ಅಭಿಪ್ರಾಯಪಟ್ಟರು.<br><br> ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ ಮುಖಂಡ ರಾಜಶೇಖರ್ ನಾಗಮೂರ್ತಿ ಮಾತನಾಡಿ, ಸ್ವಾಮಿ ವಿವೇಕಾನಂದರು ವೇದ-ಉಪನಿಷತ್ತುಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಿ ವಿವಿಧ ಪಂಥಗಳನ್ನು ಒಗ್ಗೂಡಿಸಿದ ಮಹಾನ್ ಚಿಂತಕರಾಗಿದ್ದರು. ಹಸಿದವರಿಗೆ ಊಟ ನೀಡಿ, ಬಡವರಲ್ಲಿ ದೇವರನ್ನು ಕಾಣಬೇಕು ಎಂಬ ಸಂದೇಶವನ್ನು ಅವರು ನೀಡಿದ್ದರು ಎಂದು ತಿಳಿಸಿದರು.<br><br> ಮುಖಂಡ ಜಗನ್ನಾಥ ಕರಂಜೆ, ಕಲ್ಯಾಣ ಪತ್ತಿನ ಸೌಹಾರ್ದ ಸಹಕಾರಿ ನಿರ್ದೇಶಕ ಚಂದ್ರಪ್ಪ ಬಿರಾದಾರ, ಒಕ್ಕೂಟದ ನಿರ್ದೇಶಕರಾದ ಶ್ರೀಕಾಂತ ಸ್ವಾಮಿ, ಸಂಜಯ ಕ್ಯಾಸಾ, ಸಂಜೀವಕುಮಾರ್ ಸಜ್ಜನ್, ನಾಗಶೆಟ್ಟಿ ಪಾಟೀಲ್, ಮುಖ್ಯ ಕಾರ್ಯನಿರ್ವಾಹಕ ಅಮೃತ ಹೊಸಮನಿ ಹಾಗೂ ಸ್ಥಳೀಯ ಸಹಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬೀದರ್ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದಿಂದ ನಗರದಲ್ಲಿ ಸೋಮವಾರ ಸ್ವಾಮಿ ವಿವೇಕಾನಂದರ 164ನೇ ಜನ್ಮ ದಿನ ಆಚರಿಸಲಾಯಿತು.</p>.<p>ಒಕ್ಕೂಟದ ಗುರುನಾಥ ಜ್ಯಾಂತಿಕರ್ ಮಾತನಾಡಿ, ಸ್ವಾಮಿ ವಿವೇಕಾನಂದರು ಅಪ್ಪಟ ದೇಶಭಕ್ತ ಹಾಗೂ ಮೇಧಾವಿಯಾಗಿದ್ದರು. ಇಂದಿಗೂ ಯುವಕರಿಗೆ ಆದರ್ಶ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.</p>.<p>ರಾಮಕೃಷ್ಣ ಪರಮಹಂಸರ ಶಿಷ್ಯರಾಗಿದ್ದ ಸ್ವಾಮಿ ವಿವೇಕಾನಂದರು, 1893ರ ಸೆಪ್ಟೆಂಬರ್ 11ರಂದು ಅಮೆರಿಕದ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿನಲ್ಲಿ ನೀಡಿದ ಭಾಷಣದಿಂದ ಭಾರತದ ಸಂಸ್ಕೃತಿಯನ್ನು ವಿಶ್ವದಾದ್ಯಂತ ಪರಿಚಯಿಸಿದರು. ಪ್ರತಿಯೊಬ್ಬ ಯುವಕನಿಗೂ ವಿವೇಕಾನಂದರ ಆದರ್ಶ ಜೀವನ ಮಾದರಿಯಾಗಬೇಕು ಎಂದು ಅಭಿಪ್ರಾಯಪಟ್ಟರು.<br><br> ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ ಮುಖಂಡ ರಾಜಶೇಖರ್ ನಾಗಮೂರ್ತಿ ಮಾತನಾಡಿ, ಸ್ವಾಮಿ ವಿವೇಕಾನಂದರು ವೇದ-ಉಪನಿಷತ್ತುಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಿ ವಿವಿಧ ಪಂಥಗಳನ್ನು ಒಗ್ಗೂಡಿಸಿದ ಮಹಾನ್ ಚಿಂತಕರಾಗಿದ್ದರು. ಹಸಿದವರಿಗೆ ಊಟ ನೀಡಿ, ಬಡವರಲ್ಲಿ ದೇವರನ್ನು ಕಾಣಬೇಕು ಎಂಬ ಸಂದೇಶವನ್ನು ಅವರು ನೀಡಿದ್ದರು ಎಂದು ತಿಳಿಸಿದರು.<br><br> ಮುಖಂಡ ಜಗನ್ನಾಥ ಕರಂಜೆ, ಕಲ್ಯಾಣ ಪತ್ತಿನ ಸೌಹಾರ್ದ ಸಹಕಾರಿ ನಿರ್ದೇಶಕ ಚಂದ್ರಪ್ಪ ಬಿರಾದಾರ, ಒಕ್ಕೂಟದ ನಿರ್ದೇಶಕರಾದ ಶ್ರೀಕಾಂತ ಸ್ವಾಮಿ, ಸಂಜಯ ಕ್ಯಾಸಾ, ಸಂಜೀವಕುಮಾರ್ ಸಜ್ಜನ್, ನಾಗಶೆಟ್ಟಿ ಪಾಟೀಲ್, ಮುಖ್ಯ ಕಾರ್ಯನಿರ್ವಾಹಕ ಅಮೃತ ಹೊಸಮನಿ ಹಾಗೂ ಸ್ಥಳೀಯ ಸಹಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>