<p><strong>ಔರಾದ್ (ಬೀದರ್ ಜಿಲ್ಲೆ):</strong> ಜಿಲ್ಲಾ ಪಂಚಾಯಿತಿ ಸಿಇಒ ಜ್ಞಾನೇಂದ್ರಕುಮಾರ ಗಂಗ್ವಾರ್ ಅವರು ಕಾರ್ಮಿಕರ ಜತೆಗೂಡಿ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಕೆಲಹೊತ್ತು ಕೆಲಸ ಮಾಡುವ ಮೂಲಕ ಆತ್ಮಸ್ಥೈರ್ಯ ತುಂಬಿದರು.</p>.<p>ತಾಲ್ಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ‘ನರೇಗಾ’ದಡಿ 150 ಕಾರ್ಮಿಕರು ಕೆರೆ ಹೂಳೆತ್ತುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕಾರ್ಮಿಕ ದಿನ ನಿಮಿತ್ತ ಕಾರ್ಮಿಕರನ್ನು ಭೇಟಿ ಮಾಡಲು ಬಂದಿದ್ದ ಸಿಇಒ, ಕೈಯಲ್ಲಿ ಸಲಿಕೆ ಹಿಡಿದು ಮಣ್ಣು ತೆಗೆದರು.</p>.<p>ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬೀರೇಂದ್ರಸಿಂಗ್, ತಾಲ್ಲೂಕು ಪಂಚಾಯಿತಿ ಇಒ ಮಾಣಿಕರಾವ ಪಾಟೀಲ, ಸಹಾಯಕ ನಿರ್ದೇಶಕ ಶಿವಾನಂದ ಔರಾದೆ ಅವರೂ ಸಿಇಒ ಜತೆಗೆ ಕೈಜೋಡಿಸಿ ಕೆಲ ಹೊತ್ತು ಕೆಲಸ ಮಾಡಿದರು.</p>.<p>ನಂತರ ಕಾರ್ಮಿಕರ ಯೋಗಕ್ಷೇಮವನ್ನು ವಿಚಾರಿಸಿದ ಸಿಇಒ, 'ಎಷ್ಟು ದಿನದಿಂದ ಕೆಲಸ ಮಾಡುತ್ತಿದ್ದೀರಿ. ಕೂಲಿ ಸಿಕ್ಕಿದೆಯಾ' ಎಂದೂ ಮಾಹಿತಿ ಪಡೆದುಕೊಂಡರು.</p>.<p>'ಕಾರ್ಮಿಕರು ನಮ್ಮ ಹೆಮ್ಮೆ. ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದು' ಎಂದು ಅವರ ಕೆಲಸವನ್ನು ಶ್ಲಾಘಿಸಿದರು. ನಂತರ ಕೇಕ್ ಕತ್ತರಿಸಿ ಅವರ ಜತೆ ಸಂತಸ ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್ (ಬೀದರ್ ಜಿಲ್ಲೆ):</strong> ಜಿಲ್ಲಾ ಪಂಚಾಯಿತಿ ಸಿಇಒ ಜ್ಞಾನೇಂದ್ರಕುಮಾರ ಗಂಗ್ವಾರ್ ಅವರು ಕಾರ್ಮಿಕರ ಜತೆಗೂಡಿ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಕೆಲಹೊತ್ತು ಕೆಲಸ ಮಾಡುವ ಮೂಲಕ ಆತ್ಮಸ್ಥೈರ್ಯ ತುಂಬಿದರು.</p>.<p>ತಾಲ್ಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ‘ನರೇಗಾ’ದಡಿ 150 ಕಾರ್ಮಿಕರು ಕೆರೆ ಹೂಳೆತ್ತುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕಾರ್ಮಿಕ ದಿನ ನಿಮಿತ್ತ ಕಾರ್ಮಿಕರನ್ನು ಭೇಟಿ ಮಾಡಲು ಬಂದಿದ್ದ ಸಿಇಒ, ಕೈಯಲ್ಲಿ ಸಲಿಕೆ ಹಿಡಿದು ಮಣ್ಣು ತೆಗೆದರು.</p>.<p>ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬೀರೇಂದ್ರಸಿಂಗ್, ತಾಲ್ಲೂಕು ಪಂಚಾಯಿತಿ ಇಒ ಮಾಣಿಕರಾವ ಪಾಟೀಲ, ಸಹಾಯಕ ನಿರ್ದೇಶಕ ಶಿವಾನಂದ ಔರಾದೆ ಅವರೂ ಸಿಇಒ ಜತೆಗೆ ಕೈಜೋಡಿಸಿ ಕೆಲ ಹೊತ್ತು ಕೆಲಸ ಮಾಡಿದರು.</p>.<p>ನಂತರ ಕಾರ್ಮಿಕರ ಯೋಗಕ್ಷೇಮವನ್ನು ವಿಚಾರಿಸಿದ ಸಿಇಒ, 'ಎಷ್ಟು ದಿನದಿಂದ ಕೆಲಸ ಮಾಡುತ್ತಿದ್ದೀರಿ. ಕೂಲಿ ಸಿಕ್ಕಿದೆಯಾ' ಎಂದೂ ಮಾಹಿತಿ ಪಡೆದುಕೊಂಡರು.</p>.<p>'ಕಾರ್ಮಿಕರು ನಮ್ಮ ಹೆಮ್ಮೆ. ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದು' ಎಂದು ಅವರ ಕೆಲಸವನ್ನು ಶ್ಲಾಘಿಸಿದರು. ನಂತರ ಕೇಕ್ ಕತ್ತರಿಸಿ ಅವರ ಜತೆ ಸಂತಸ ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>