ಬೀದರ್: ಬೈಕ್ಗೆ ಎದುರಿನಿಂದ ಬಂದ ವಾಹನ ಡಿಕ್ಕಿ ಹೊಡೆದು ಇಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ಬೀದರ್ ತಾಲ್ಲೂಕಿನ ಕೊಳಾರ (ಕೆ) ಸಮೀಪ ಮಂಗಳವಾರ ಸಂಭವಿಸಿದೆ.
ಆಣದೂರು ಗ್ರಾಮದ ಮಾರುತಿ ಶಿವರಾಜ ಚೊಂಡಿ (26) ಹಾಗೂ ಸದ್ಯ ಆಣದೂರಿನಲ್ಲಿ ನೆಲೆಸಿರುವ ಅಮಲಾಪುರದ ಗೋಪಾಲ ರಾಜಪ್ಪ ಸಾಗರ್ (40) ಎಂಬುವರಿಗೆ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ಹೊಡೆದ ವಾಹನದ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾನೆ.
ಪಿಎಸ್ಐ ತಿಮ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬೀದರ್ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.