ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಬೈಕ್ ಸವಾರ ಸಾವು

Last Updated 25 ಮೇ 2022, 4:02 IST
ಅಕ್ಷರ ಗಾತ್ರ

ಕಮಲನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯ ತೋರಣಾ ಗ್ರಾಮದ ಡೋಣಗಾಂವ್(ಎಂ) ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ಹಂದಿಕೇರಿ ಗ್ರಾಮದ ಸಂತೋಷ ಭೀಮರಾವ ಬಳತೆ (35) ಮೃತಪಟ್ಟವರು.

ಚಿಮೆಗಾಂವ್ ಗ್ರಾಮದಿಂದ ಬೆಡಕುಂದಾ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರುಗಡೆಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾಲ್ಕಿ ಡಿವೈಎಸ್‍ಪಿ ಪೃಥ್ವಿಕ್ ಶಂಕರ, ಸಿಪಿಐ ರಾಮಪ್ಪ ಸಾವಳಗಿ, ಅಪರಾಧ ವಿಭಾಗದ ಪಿಎಸ್‍ಐ ಬಸವರಾಜ ಪಾಟೀಲ, ಸಿಬ್ಬಂದಿ ಮಲ್ಲಿಕಾರ್ಜುನ, ದಿಲೀಪಕುಮಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT