<p>ಜನವಾಡ(ಬೀದರ್ ತಾಲ್ಲೂಕು): ಬೀರಲಿಂಗೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ನಿಮಿತ್ತ ಸೋಲಪುರ ಗ್ರಾಮದಲ್ಲಿ ಶುಕ್ರವಾರ ಅಲಂಕೃತ ರಥದಲ್ಲಿ ಬೀರಲಿಂಗೇಶ್ವರ ಮೂರ್ತಿ, ಕಳಸ ಹಾಗೂ ಮಾತೆ ಜಗದೀಶ್ವರಿ ಅವರ ಮೆರವಣಿಗೆ ನಡೆಯಿತು.</p>.<p>ಹನುಮಾನ ಮಂದಿರದಿಂದ ಆರಂಭವಾದ ಮೆರವಣಿಗೆ ಬೀರಲಿಂಗೇಶ್ವರ ದೇಗುಲಕ್ಕೆ ತಲುಪಿ ಸಮಾರೋಪಗೊಂಡಿತು.</p>.<p>ಕುಂಭ ಕಳಸ ಹೊತ್ತ ಮಹಿಳೆಯರು, ಡೊಳ್ಳು ಕುಣಿತ, ಭಜನೆ ಮೊದಲಾದ ಕಲಾ ತಂಡಗಳು ಮೆರವಣಿಗೆಯ ಮೆರುಗು ಹೆಚ್ಚಿಸಿದವು.</p>.<p>ಬಳಿಕ ಬೀರಲಿಂಗೇಶ್ವರ ಮಂದಿರದಲ್ಲಿ ವಿಶೇಷ ಪೂಜೆ, ಪ್ರಸಾದ ವಿತರಣೆ, ಗೋಪಾಲ್ ಮುತ್ತ್ಯಾ ಉಚ್ಚಾ ಅವರ ಸಾನಿಧ್ಯದಲ್ಲಿ ಪ್ರವಚನ ಕಾರ್ಯಕ್ರಮ ಜರುಗಿತು.</p>.<p>ಸಾಹಿತಿಗಳಾದ ಬಿ.ಎಂ. ಅಮರವಾಡಿ, ಸಂಜೀವಕುಮಾರ ಅತಿವಾಳೆ, ಮುಖಂಡರಾದ ರಮೇಶ ಪಾಟೀಲ ಸೋಲಪುರ, ವೀರಶೆಟ್ಟಿ ಪಾಟೀಲ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜನವಾಡ(ಬೀದರ್ ತಾಲ್ಲೂಕು): ಬೀರಲಿಂಗೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ನಿಮಿತ್ತ ಸೋಲಪುರ ಗ್ರಾಮದಲ್ಲಿ ಶುಕ್ರವಾರ ಅಲಂಕೃತ ರಥದಲ್ಲಿ ಬೀರಲಿಂಗೇಶ್ವರ ಮೂರ್ತಿ, ಕಳಸ ಹಾಗೂ ಮಾತೆ ಜಗದೀಶ್ವರಿ ಅವರ ಮೆರವಣಿಗೆ ನಡೆಯಿತು.</p>.<p>ಹನುಮಾನ ಮಂದಿರದಿಂದ ಆರಂಭವಾದ ಮೆರವಣಿಗೆ ಬೀರಲಿಂಗೇಶ್ವರ ದೇಗುಲಕ್ಕೆ ತಲುಪಿ ಸಮಾರೋಪಗೊಂಡಿತು.</p>.<p>ಕುಂಭ ಕಳಸ ಹೊತ್ತ ಮಹಿಳೆಯರು, ಡೊಳ್ಳು ಕುಣಿತ, ಭಜನೆ ಮೊದಲಾದ ಕಲಾ ತಂಡಗಳು ಮೆರವಣಿಗೆಯ ಮೆರುಗು ಹೆಚ್ಚಿಸಿದವು.</p>.<p>ಬಳಿಕ ಬೀರಲಿಂಗೇಶ್ವರ ಮಂದಿರದಲ್ಲಿ ವಿಶೇಷ ಪೂಜೆ, ಪ್ರಸಾದ ವಿತರಣೆ, ಗೋಪಾಲ್ ಮುತ್ತ್ಯಾ ಉಚ್ಚಾ ಅವರ ಸಾನಿಧ್ಯದಲ್ಲಿ ಪ್ರವಚನ ಕಾರ್ಯಕ್ರಮ ಜರುಗಿತು.</p>.<p>ಸಾಹಿತಿಗಳಾದ ಬಿ.ಎಂ. ಅಮರವಾಡಿ, ಸಂಜೀವಕುಮಾರ ಅತಿವಾಳೆ, ಮುಖಂಡರಾದ ರಮೇಶ ಪಾಟೀಲ ಸೋಲಪುರ, ವೀರಶೆಟ್ಟಿ ಪಾಟೀಲ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>