<p><strong>ಬೀದರ್</strong>: ‘ಬೀದರ್ ಹಾಗೂ ಭಾಲ್ಕಿ ಮಧ್ಯದಲ್ಲಿರುವ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ಪಕ್ಷಿಧಾಮ ಮಾಡಲು ನಿರ್ಧರಿಸಲಾಗಿದೆ’ ಎಂದು ಪರಿಸರ, ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.</p><p>ಪಕ್ಷಿಧಾಮ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಈಗಾಗಲೇ ₹5 ಕೋಟಿ ಮಂಜೂರು ಮಾಡಲಾಗಿದೆ. ಪಕ್ಷಿಧಾಮಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ ಸಿದ್ಧವಾಗುತ್ತಿದೆ. ಹೊನ್ನಿಕೇರಿ ಸಮೀಪವೇ ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೂಡ ಆರಂಭಿಸಲಾಗುವುದು ಎಂದು ನಗರದ ಜಿಲ್ಲಾ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.</p><p>ಯಾರ ಮಂತ್ರಿ ಸ್ಥಾನವೂ ಹೋಗೊಲ್ಲ:</p><p>‘ಯಾರ ಮಂತ್ರಿ ಸ್ಥಾನವೂ ಹೋಗೊಲ್ಲ. ಪೌರಾಡಳಿತ ಸಚಿವ ರಹೀಂ ಖಾನ್ ಅವರು ಬೀದರ್ ನಗರಕ್ಕೆ ₹300 ಕೋಟಿ ಅನುದಾನ ಮಂಜೂರು ಮಾಡಿಸಿದ್ದಾರೆ. ಅವರನ್ನು ಮಂತ್ರಿ ಸ್ಥಾನದಿಂದ ಕೈಬಿಡುತ್ತಾರೆ ಎನ್ನುವುದು ಸುಳ್ಳು. ರಹೀಂ ಖಾನ್ ಅವರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p><p>ಮಧ್ಯ ಪ್ರವೇಶಿಸಿ ಮಾತನಾಡಿದ ಸಚಿವ ರಹೀಂ ಖಾನ್, ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಇಬ್ಬರಷ್ಟೇ ಸಚಿವರಿದ್ದೇವೆ ಎಂದು ಹೇಳಿದರು.</p><p>ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ:</p><p>‘ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲ ಐದೂ ಗ್ಯಾರಂಟಿಗಳು ಯಥಾಪ್ರಕಾರ ಮುಂದುವರೆಯಲಿವೆ. ಸಚಿವ ಸಂಪುಟದ ಕೆಲ ಸಹದ್ಯೋಗಿಗಳು ಅವರ ವೈಯಕ್ತಿಕ ಸಲಹೆ ಕೊಟ್ಟಿದ್ದಾರೆ. ಅದನ್ನು ಸಚಿವ ಸಂಪುಟದಲ್ಲಿ ಚರ್ಚಿಸುತ್ತೇವೆ’ ಎಂದು ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.</p><p>ಆರ್ಥಿಕವಾಗಿ ಸದೃಢರಾಗಿದ್ದೇವೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲು ₹2 ಸಾವಿರ ಕೋಟಿ ಕೊಡಲಾಗುತ್ತಿದೆ. ಹಣವಿಲ್ಲದಿದ್ದರೆ ಇದು ಹೇಗೆ ಸಾಧ್ಯವಾಗುತ್ತಿತ್ತು ಎಂದು ಮಾಧ್ಯಮದವರಿಗೆ ಮರು ಪ್ರಶ್ನೆ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಬೀದರ್ ಹಾಗೂ ಭಾಲ್ಕಿ ಮಧ್ಯದಲ್ಲಿರುವ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ಪಕ್ಷಿಧಾಮ ಮಾಡಲು ನಿರ್ಧರಿಸಲಾಗಿದೆ’ ಎಂದು ಪರಿಸರ, ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.</p><p>ಪಕ್ಷಿಧಾಮ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಈಗಾಗಲೇ ₹5 ಕೋಟಿ ಮಂಜೂರು ಮಾಡಲಾಗಿದೆ. ಪಕ್ಷಿಧಾಮಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ ಸಿದ್ಧವಾಗುತ್ತಿದೆ. ಹೊನ್ನಿಕೇರಿ ಸಮೀಪವೇ ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೂಡ ಆರಂಭಿಸಲಾಗುವುದು ಎಂದು ನಗರದ ಜಿಲ್ಲಾ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.</p><p>ಯಾರ ಮಂತ್ರಿ ಸ್ಥಾನವೂ ಹೋಗೊಲ್ಲ:</p><p>‘ಯಾರ ಮಂತ್ರಿ ಸ್ಥಾನವೂ ಹೋಗೊಲ್ಲ. ಪೌರಾಡಳಿತ ಸಚಿವ ರಹೀಂ ಖಾನ್ ಅವರು ಬೀದರ್ ನಗರಕ್ಕೆ ₹300 ಕೋಟಿ ಅನುದಾನ ಮಂಜೂರು ಮಾಡಿಸಿದ್ದಾರೆ. ಅವರನ್ನು ಮಂತ್ರಿ ಸ್ಥಾನದಿಂದ ಕೈಬಿಡುತ್ತಾರೆ ಎನ್ನುವುದು ಸುಳ್ಳು. ರಹೀಂ ಖಾನ್ ಅವರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p><p>ಮಧ್ಯ ಪ್ರವೇಶಿಸಿ ಮಾತನಾಡಿದ ಸಚಿವ ರಹೀಂ ಖಾನ್, ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಇಬ್ಬರಷ್ಟೇ ಸಚಿವರಿದ್ದೇವೆ ಎಂದು ಹೇಳಿದರು.</p><p>ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ:</p><p>‘ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲ ಐದೂ ಗ್ಯಾರಂಟಿಗಳು ಯಥಾಪ್ರಕಾರ ಮುಂದುವರೆಯಲಿವೆ. ಸಚಿವ ಸಂಪುಟದ ಕೆಲ ಸಹದ್ಯೋಗಿಗಳು ಅವರ ವೈಯಕ್ತಿಕ ಸಲಹೆ ಕೊಟ್ಟಿದ್ದಾರೆ. ಅದನ್ನು ಸಚಿವ ಸಂಪುಟದಲ್ಲಿ ಚರ್ಚಿಸುತ್ತೇವೆ’ ಎಂದು ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.</p><p>ಆರ್ಥಿಕವಾಗಿ ಸದೃಢರಾಗಿದ್ದೇವೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲು ₹2 ಸಾವಿರ ಕೋಟಿ ಕೊಡಲಾಗುತ್ತಿದೆ. ಹಣವಿಲ್ಲದಿದ್ದರೆ ಇದು ಹೇಗೆ ಸಾಧ್ಯವಾಗುತ್ತಿತ್ತು ಎಂದು ಮಾಧ್ಯಮದವರಿಗೆ ಮರು ಪ್ರಶ್ನೆ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>