ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಗ್ಗೆ ಠಾಣೆಗೆ ದೂರು ನೀಡಿದ್ದೇನೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ (ಏಪ್ರಿಲ್ 12) ಪ್ರಚಾರ ಸಭೆಗೆ ಇಲ್ಲಿಗೆ ಬರುತ್ತಿದ್ದು, ಅವರ ಸಭೆಗೆ ನುಗ್ಗಿ ನ್ಯಾಯ ಕೇಳುವೆ. ಸ್ಥಳೀಯರನ್ನು ಕಡೆಗಣಿಸಿ ಹೊರಗಿನವರಿಗೆ ಟಿಕೆಟ್ ಕೊಡಲು ಕಾರಣವೇನು ಎಂದೂ ಪ್ರಶ್ನಿಸುವೆ’ ಎಂದರು.