ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಕಾರ್ಯಕರ್ತರಿಂದ ಕಲ್ಲು ತೂರಾಟ: ಮಲ್ಲಿಕಾರ್ಜುನ ಖೂಬಾ ಆರೋಪ

Last Updated 11 ಏಪ್ರಿಲ್ 2021, 20:03 IST
ಅಕ್ಷರ ಗಾತ್ರ

ಬಸವಕಲ್ಯಾಣ (ಬೀದರ್ ಜಿಲ್ಲೆ): ‘ನನ್ನ ಚುನಾವಣಾ ಪ್ರಚಾರಕ್ಕಾಗಿ ಬ್ಯಾನರ್ ಅಳವಡಿಸಿದ್ದ ವಾಹನದ ಮೇಲೆ ಹುಲಸೂರ ಬಳಿ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ’ ಎಂದು ಉಪ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಆರೋಪಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಗ್ಗೆ ಠಾಣೆಗೆ ದೂರು ನೀಡಿದ್ದೇನೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ (ಏಪ್ರಿಲ್ 12) ಪ್ರಚಾರ ಸಭೆಗೆ ಇಲ್ಲಿಗೆ ಬರುತ್ತಿದ್ದು, ಅವರ ಸಭೆಗೆ ನುಗ್ಗಿ ನ್ಯಾಯ ಕೇಳುವೆ. ಸ್ಥಳೀಯರನ್ನು ಕಡೆಗಣಿಸಿ ಹೊರಗಿನವರಿಗೆ ಟಿಕೆಟ್ ಕೊಡಲು ಕಾರಣವೇನು ಎಂದೂ ಪ್ರಶ್ನಿಸುವೆ’ ಎಂದರು.

‘ನಗರದ 6 ಸ್ಥಳಗಳಲ್ಲಿ ರಾಜಾರೋಷವಾಗಿ ಮತದಾರರಿಗೆ ಹಣ ಹಂಚಲಾಗುತ್ತಿದೆ. ಇದಲ್ಲದೆ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಹಾಗೂ ತಹಶೀಲ್ದಾರ್ ಆಗಿರುವ ಅವರ ಪತ್ನಿ ಸಾವಿತ್ರಿ ಸಲಗರ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಮೂರು ಸ್ಥಳಗಳಲ್ಲಿ ಇವೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT