<p><strong>ಬಸವಕಲ್ಯಾಣ:</strong> ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಅನುಕಂಪ ಮತ್ತು ‘ಸ್ವಾಭಿಮಾನ’ ಕೆಲಸ ಮಾಡಲಿಲ್ಲ. ಮತದಾರರು ‘ಇವನಾರವ’ ಎನ್ನದೆ ‘ಹೊರಗಿನ’ ಅಭ್ಯರ್ಥಿಯನ್ನು ಗೆಲ್ಲಿಸಿದರು.</p>.<p>ಕಾಂಗ್ರೆಸ್ ಶಾಕರಾಗಿದ್ದ ಬಿ.ನಾರಾಯಣರಾವ್ ಅವರು ಕೋವಿಡ್ನಿಂದ ನಿಧನರಾಗಿದ್ದರಿಂದ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಿತು. ದಿವಂಗತ ನಾರಾಯಣರಾವ್ ಅವರ ಪತ್ನಿ ಮಾಲಾ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಪಕ್ಷ ಅನುಕಂಪದಲ್ಲಿ ಗೆಲುವು ಸಾಧಿಸಬಹುದು ಎಂದು ನಂಬಿತ್ತು.</p>.<p>ಬಿಜೆಪಿ ಟಿಕೆಟ್ ಸಿಗದ ಕಾರಣ ಬಂಡೆದ್ದು ಪಕ್ಷೇತರರಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ‘ಬಿಜೆಪಿ ನಾಯಕರು ಹೊರಗಿನ ವ್ಯಕ್ತಿಗೆ ಮಣೆ ಹಾಕಿದ್ದಾರೆ. ಸ್ವಾಭಿಮಾನಕ್ಕೆ ಮತ ನೀಡಿ’ ಎಂದು ಪ್ರಚಾರ ನಡೆಸಿದ್ದರು. ಆದರೆ, ಇಲ್ಲಿ ಅದೂ ಕೆಲಸ ಮಾಡಲಿಲ್ಲ.</p>.<p>‘ಇದು ಬಸವಣ್ಣನ ನಾಡು. ಇವನಾರವ, ಇವನಾರವ ಎನ್ನದೇ ಇವ ನಮ್ಮವ ಇವ ನಮ್ಮವ ಎನ್ನಿ’ ಎಂದು ಬಿಜೆಪಿಯವರು ಪ್ರಚಾರದ ವೇಳೆ ಮನವಿ ಮಾಡುತ್ತಿದ್ದರು.</p>.<p>ಬಿಜೆಪಿ ಅಭ್ಯರ್ಥಿ ಶರಣು ಸಲಗರ ಕಳೆದ ಬಾರಿಯ ಕೋವಿಡ್ ಲಾಕ್ಡೌನ್ ವೇಳೆ ಇಡೀ ಕ್ಷೇತ್ರ ಸುತ್ತಿ ಜನರಿಗೆ ನೆರವಾಗಿದ್ದರು. ‘ಸಮಾಜ ಸೇವಕ’ ಎಂದು ಜನ ತಮ್ಮನ್ನು ನಂಬುವಂತೆ ಮಾಡಿದ್ದರು.</p>.<p>ಶರದ್ ಪವಾರ್ ನೇತೃತ್ವದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದ ಮಾಜಿ ಶಾಸಕ, ಮರಾಠ ಸಮಾಜದ ಮುಖಂಡ ಮಾರುತಿರಾವ್ ಮುಳೆ ಅವರನ್ನು ಕಣದಿಂದ ಹಿಂದೆ ಸರಿಸಿ ಅವರನ್ನು ತನ್ನತ್ತ ಸೆಳೆದು ಮರಾಠ ಮತಗಳ ವಿಭಜನೆ ತಪ್ಪಿಸಿದ್ದು ಬಿಜೆಪಿಗೆ ಅನುಕೂಲವಾಯಿತು.</p>.<p>ಜೆಡಿಎಸ್ ಇಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಕಾಂಗ್ರೆಸ್ಗೆ ದುಬಾರಿಯಾಗಿ ಪರಿಣಮಿಸಿತು. ಇಲ್ಲಿ ಮುಸ್ಲಿಂ ಮತಗಳು ವಿಭಜನೆಯಾಗಿ, ಕಾಂಗ್ರೆಸ್ ಅಭ್ಯರ್ಥಿಯ ಸೋಲಿಗೆ ಕಾರಣವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಅನುಕಂಪ ಮತ್ತು ‘ಸ್ವಾಭಿಮಾನ’ ಕೆಲಸ ಮಾಡಲಿಲ್ಲ. ಮತದಾರರು ‘ಇವನಾರವ’ ಎನ್ನದೆ ‘ಹೊರಗಿನ’ ಅಭ್ಯರ್ಥಿಯನ್ನು ಗೆಲ್ಲಿಸಿದರು.</p>.<p>ಕಾಂಗ್ರೆಸ್ ಶಾಕರಾಗಿದ್ದ ಬಿ.ನಾರಾಯಣರಾವ್ ಅವರು ಕೋವಿಡ್ನಿಂದ ನಿಧನರಾಗಿದ್ದರಿಂದ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಿತು. ದಿವಂಗತ ನಾರಾಯಣರಾವ್ ಅವರ ಪತ್ನಿ ಮಾಲಾ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಪಕ್ಷ ಅನುಕಂಪದಲ್ಲಿ ಗೆಲುವು ಸಾಧಿಸಬಹುದು ಎಂದು ನಂಬಿತ್ತು.</p>.<p>ಬಿಜೆಪಿ ಟಿಕೆಟ್ ಸಿಗದ ಕಾರಣ ಬಂಡೆದ್ದು ಪಕ್ಷೇತರರಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ‘ಬಿಜೆಪಿ ನಾಯಕರು ಹೊರಗಿನ ವ್ಯಕ್ತಿಗೆ ಮಣೆ ಹಾಕಿದ್ದಾರೆ. ಸ್ವಾಭಿಮಾನಕ್ಕೆ ಮತ ನೀಡಿ’ ಎಂದು ಪ್ರಚಾರ ನಡೆಸಿದ್ದರು. ಆದರೆ, ಇಲ್ಲಿ ಅದೂ ಕೆಲಸ ಮಾಡಲಿಲ್ಲ.</p>.<p>‘ಇದು ಬಸವಣ್ಣನ ನಾಡು. ಇವನಾರವ, ಇವನಾರವ ಎನ್ನದೇ ಇವ ನಮ್ಮವ ಇವ ನಮ್ಮವ ಎನ್ನಿ’ ಎಂದು ಬಿಜೆಪಿಯವರು ಪ್ರಚಾರದ ವೇಳೆ ಮನವಿ ಮಾಡುತ್ತಿದ್ದರು.</p>.<p>ಬಿಜೆಪಿ ಅಭ್ಯರ್ಥಿ ಶರಣು ಸಲಗರ ಕಳೆದ ಬಾರಿಯ ಕೋವಿಡ್ ಲಾಕ್ಡೌನ್ ವೇಳೆ ಇಡೀ ಕ್ಷೇತ್ರ ಸುತ್ತಿ ಜನರಿಗೆ ನೆರವಾಗಿದ್ದರು. ‘ಸಮಾಜ ಸೇವಕ’ ಎಂದು ಜನ ತಮ್ಮನ್ನು ನಂಬುವಂತೆ ಮಾಡಿದ್ದರು.</p>.<p>ಶರದ್ ಪವಾರ್ ನೇತೃತ್ವದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದ ಮಾಜಿ ಶಾಸಕ, ಮರಾಠ ಸಮಾಜದ ಮುಖಂಡ ಮಾರುತಿರಾವ್ ಮುಳೆ ಅವರನ್ನು ಕಣದಿಂದ ಹಿಂದೆ ಸರಿಸಿ ಅವರನ್ನು ತನ್ನತ್ತ ಸೆಳೆದು ಮರಾಠ ಮತಗಳ ವಿಭಜನೆ ತಪ್ಪಿಸಿದ್ದು ಬಿಜೆಪಿಗೆ ಅನುಕೂಲವಾಯಿತು.</p>.<p>ಜೆಡಿಎಸ್ ಇಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಕಾಂಗ್ರೆಸ್ಗೆ ದುಬಾರಿಯಾಗಿ ಪರಿಣಮಿಸಿತು. ಇಲ್ಲಿ ಮುಸ್ಲಿಂ ಮತಗಳು ವಿಭಜನೆಯಾಗಿ, ಕಾಂಗ್ರೆಸ್ ಅಭ್ಯರ್ಥಿಯ ಸೋಲಿಗೆ ಕಾರಣವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>