<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ)</strong>: ‘ಈ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಕ್ಕಾಗಿ ಮತದಾರರಿಗೆ ರಾಜಾರೋಷವಾಗಿ ಹಣ ಹಂಚುತ್ತಿದೆ’ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದರು.</p>.<p>ನಗರದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಇಲ್ಲಿನ ಶಾಸಕ ಬಿ.ನಾರಾಯಣರಾವ್ ಜನಪರ ಕಾರ್ಯಗಳನ್ನು ಕೈಗೊಂಡು ಜನಾನುರಾಗಿ ಎನಿಸಿದ್ದರು. ಕೋವಿಡ್ ಲಾಕ್ಡೌನ್ನಲ್ಲಿ ಬಡವರಿಗೆ ಅಕ್ಕಿ ವಿತರಿಸುತ್ತ ಜನರ ಮಧ್ಯೆ ತಿರುಗಿದ್ದರಿಂದ ಕೋವಿಡ್ಗೆ ಬಲಿಯಾದರು’ ಎಂದರು.</p>.<p>‘ಇನ್ನುಳಿದ ಎರಡು ವರ್ಷಕ್ಕಾಗಿ ಅವರ ಕುಟುಂಬದವರಿಗೆ ಆ ಸ್ಥಾನ ಸಿಗಲಿ ಎಂಬ ನ್ಯಾಯ ಒದಗಿಸುವ ದೃಷ್ಟಿಯಿಂದ ಅವರ ಪತ್ನಿ ಮಾಲಾ ಬಿ.ನಾರಾಯಣರಾವ್ ಅವರಿಗೆ ಟಿಕೆಟ್ ನೀಡಲಾಗಿದೆ. ಆದರೆ, ಬಿಜೆಪಿ ವಾಮ ಮಾರ್ಗ ಹಿಡಿದಿದೆ’ ಎಂದು ಆರೋಪ ಮಾಡಿದರು.</p>.<p>‘ಮುಸ್ಲಿಂ, ಮರಾಠ, ಕೋಲಿ, ಕುರುಬ, ಲಿಂಗಾಯತ ಹಾಗೂ ಪರಿಶಿಷ್ಟ ಜಾತಿಯ ಬಹುಸಂಖ್ಯಾತ ಮತದಾರರು ಕಾಂಗ್ರೆಸ್ ಹಿಂದೆ ಇದ್ದಾರೆ. ಶಿವಸೇನೆ ಅಭ್ಯರ್ಥಿ ಕೂಡ ನಮಗೆ ಬೆಂಬಲ ಸೂಚಿಸಿದ್ದರಿಂದ ಗೆಲುವು ಸುಲಭ ಆಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ)</strong>: ‘ಈ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಕ್ಕಾಗಿ ಮತದಾರರಿಗೆ ರಾಜಾರೋಷವಾಗಿ ಹಣ ಹಂಚುತ್ತಿದೆ’ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದರು.</p>.<p>ನಗರದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಇಲ್ಲಿನ ಶಾಸಕ ಬಿ.ನಾರಾಯಣರಾವ್ ಜನಪರ ಕಾರ್ಯಗಳನ್ನು ಕೈಗೊಂಡು ಜನಾನುರಾಗಿ ಎನಿಸಿದ್ದರು. ಕೋವಿಡ್ ಲಾಕ್ಡೌನ್ನಲ್ಲಿ ಬಡವರಿಗೆ ಅಕ್ಕಿ ವಿತರಿಸುತ್ತ ಜನರ ಮಧ್ಯೆ ತಿರುಗಿದ್ದರಿಂದ ಕೋವಿಡ್ಗೆ ಬಲಿಯಾದರು’ ಎಂದರು.</p>.<p>‘ಇನ್ನುಳಿದ ಎರಡು ವರ್ಷಕ್ಕಾಗಿ ಅವರ ಕುಟುಂಬದವರಿಗೆ ಆ ಸ್ಥಾನ ಸಿಗಲಿ ಎಂಬ ನ್ಯಾಯ ಒದಗಿಸುವ ದೃಷ್ಟಿಯಿಂದ ಅವರ ಪತ್ನಿ ಮಾಲಾ ಬಿ.ನಾರಾಯಣರಾವ್ ಅವರಿಗೆ ಟಿಕೆಟ್ ನೀಡಲಾಗಿದೆ. ಆದರೆ, ಬಿಜೆಪಿ ವಾಮ ಮಾರ್ಗ ಹಿಡಿದಿದೆ’ ಎಂದು ಆರೋಪ ಮಾಡಿದರು.</p>.<p>‘ಮುಸ್ಲಿಂ, ಮರಾಠ, ಕೋಲಿ, ಕುರುಬ, ಲಿಂಗಾಯತ ಹಾಗೂ ಪರಿಶಿಷ್ಟ ಜಾತಿಯ ಬಹುಸಂಖ್ಯಾತ ಮತದಾರರು ಕಾಂಗ್ರೆಸ್ ಹಿಂದೆ ಇದ್ದಾರೆ. ಶಿವಸೇನೆ ಅಭ್ಯರ್ಥಿ ಕೂಡ ನಮಗೆ ಬೆಂಬಲ ಸೂಚಿಸಿದ್ದರಿಂದ ಗೆಲುವು ಸುಲಭ ಆಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>