<p><strong>ಬೀದರ್:</strong> ನಗರದ ನೌಬಾದ್ ಸಮೀಪದ ಭಾಲ್ಕಿ ರಸ್ತೆಯಲ್ಲಿ ಬಿಜೆಪಿ ಜಿಲ್ಲಾ ಭವನದ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ (ಆ. 14) ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ ತಿಳಿಸಿದರು.</p>.<p>ಬೀದರ್, ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಕೋಲಾರ, ತಿಪಟೂರು ಸೇರಿ ರಾಜ್ಯದ ಎಂಟು ಜಿಲ್ಲೆ ಹಾಗೂ ತಿಪಟೂರು ಮಂಡಲದಲ್ಲಿ ಒಂದೇ ದಿನ ಜಿಲ್ಲಾ ಭವನಗಳ ಶಿಲಾನ್ಯಾಸ ಜರುಗಲಿದೆ ಎಂದು ನಗರದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.</p>.<p>ಶಿಲಾನ್ಯಾಸದ ವರ್ಚುವಲ್ ಕಾರ್ಯಕ್ರಮ ದೆಹಲಿ ಹಾಗೂ ಬೆಂಗಳೂರಿನಿಂದ ಪ್ರಸಾರಗೊಳ್ಳಲಿದೆ. ಬೆಳಿಗ್ಗೆ 11.05ಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ<br />ಕಾರ್ಯಕ್ರಮ ಉದ್ಘಾಟಿಸುವರು. ಬೆಳಿಗ್ಗೆ 11.10ಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ನಿವಾಸದಿಂದ ಭಾಷಣ ಮಾಡುವರು.</p>.<p>11.20ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನವದೆಹಲಿಯಿಂದ ನಿವೇಶನಗಳ ಪ್ರದರ್ಶನ ಹಾಗೂ ಶಿಲಾಫಲಕ ಅನಾವರಣ ಮಾಡುವರು ಎಂದು ತಿಳಿಸಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಸಂಸದ ಭಗವಂತ ಖೂಬಾ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ಸುದ್ದಿಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನಗರದ ನೌಬಾದ್ ಸಮೀಪದ ಭಾಲ್ಕಿ ರಸ್ತೆಯಲ್ಲಿ ಬಿಜೆಪಿ ಜಿಲ್ಲಾ ಭವನದ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ (ಆ. 14) ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ ತಿಳಿಸಿದರು.</p>.<p>ಬೀದರ್, ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಕೋಲಾರ, ತಿಪಟೂರು ಸೇರಿ ರಾಜ್ಯದ ಎಂಟು ಜಿಲ್ಲೆ ಹಾಗೂ ತಿಪಟೂರು ಮಂಡಲದಲ್ಲಿ ಒಂದೇ ದಿನ ಜಿಲ್ಲಾ ಭವನಗಳ ಶಿಲಾನ್ಯಾಸ ಜರುಗಲಿದೆ ಎಂದು ನಗರದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.</p>.<p>ಶಿಲಾನ್ಯಾಸದ ವರ್ಚುವಲ್ ಕಾರ್ಯಕ್ರಮ ದೆಹಲಿ ಹಾಗೂ ಬೆಂಗಳೂರಿನಿಂದ ಪ್ರಸಾರಗೊಳ್ಳಲಿದೆ. ಬೆಳಿಗ್ಗೆ 11.05ಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ<br />ಕಾರ್ಯಕ್ರಮ ಉದ್ಘಾಟಿಸುವರು. ಬೆಳಿಗ್ಗೆ 11.10ಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ನಿವಾಸದಿಂದ ಭಾಷಣ ಮಾಡುವರು.</p>.<p>11.20ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನವದೆಹಲಿಯಿಂದ ನಿವೇಶನಗಳ ಪ್ರದರ್ಶನ ಹಾಗೂ ಶಿಲಾಫಲಕ ಅನಾವರಣ ಮಾಡುವರು ಎಂದು ತಿಳಿಸಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಸಂಸದ ಭಗವಂತ ಖೂಬಾ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ಸುದ್ದಿಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>