ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಪರಿಶಿಷ್ಟರಲ್ಲಿ ಒಡಕು: ದಿನೇಶ ಪವಾರ್

Published 5 ಮೇ 2024, 15:34 IST
Last Updated 5 ಮೇ 2024, 15:34 IST
ಅಕ್ಷರ ಗಾತ್ರ

ಬೀದರ್‌: ‘ಹಿಂದೆ ರಾಜ್ಯದಲ್ಲಿದ್ದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪರಿಶಿಷ್ಟರಲ್ಲಿ ಒಡಕು ಮೂಡಿಸುವ ಕೆಲಸ ಮಾಡಿತು. ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡಿ ಪರಿಶಿಷ್ಟರನ್ನು ಇಬ್ಭಾಗ ಮಾಡಿತು’ ಎಂದು ಬಂಜಾರ ಸಮಾಜದ ಮುಖಂಡ ದಿನೇಶ ಪವಾರ್ ಆರೋಪಿಸಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಮೀಸಲಾತಿ ಇರಬೇಕೇ ವಿನಃ ಅದರಲ್ಲಿ ಪ್ರತ್ಯೇಕತೆ ಸಲ್ಲದು. ಆದರೆ, ಬಿಜೆಪಿ ಸಮಾಜಗಳಲ್ಲಿ ಒಡಕು ಮೂಡಿಸಿ ರಾಜಕೀಯ ಲಾಭ ಪಡೆಯಲು ಹವಣಿಸುತ್ತಿದೆ. ಪರಿಶಿಷ್ಟರಲ್ಲಿ 101 ಜಾತಿಗಳು ಒಳಗೊಂಡಿದ್ದು, ಎಲ್ಲರೂ ಒಟ್ಟಾಗಿದ್ದೆವು ಎಂದು ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಳೆದ ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಜಾತಿ ಜಾತಿಗಳಲ್ಲಿ ಜಗಳ ಹಚ್ಚಿ ಸಮಾಜಗಳನ್ನು ಚೂರು ಚೂರು ಮಾಡಲು ಹೊರಟಿದೆ. ಸಂವಿಧಾನದ ಆಶಯದಂತೆ ಎಲ್ಲರಿಗೂ ಸಮಬಾಳು ಸಮಪಾಲು ಸಿಗಬೇಕು. ಆದರೆ, ಅದರ ಆಶಯಕ್ಕೆ ಕೊಡಲಿ ಪೆಟ್ಟು ಕೊಡಲು ಹೊರಟಿದ್ದಾರೆ ಎಂದು ದೂರಿದರು.

ಸಂತೋಷಕುಮಾರ ಅಣ್ಣೆಪ್ಪನೋರ್, ಸಚಿನ್ ಪವಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT