ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಟಿಕೆಟ್‌ ಹಂಚಿಕೆಯಲ್ಲಿ ಡೀಲ್‌ : ಖೂಬಾ

Last Updated 26 ಮಾರ್ಚ್ 2021, 18:54 IST
ಅಕ್ಷರ ಗಾತ್ರ

ಬೀದರ್‌:‘ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್‌ ಹಂಚಿಕೆಯಲ್ಲಿ ಡೀಲ್‌ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈಗ ನನಗೂ ಈ ಸಂಶಯ ಕಾಡುತ್ತಿದೆ’ ಎಂದುಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದರು.

‘ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್‌ಅನ್ನು ಈತಾಲ್ಲೂಕು ಹಾಗೂ ಬೀದರ್‌ ಜಿಲ್ಲೆಯವರನ್ನು ಬಿಟ್ಟು ಬೇರೆ ಜಿಲ್ಲೆಯವರಿಗೆ ಕೊಡಲಾಗಿದೆ. ಡೀಲ್‌ ಆರೋಪ ಸತ್ಯವೋ, ಮಿಥ್ಯವೋ ತಿಳಿದುಕೊಳ್ಳಬೇಕಿದೆ’ ಎಂದು ಅವರು ಪ್ರತಿಕ್ರಿಯಿಸಿದರು.

‘ಬಿಜೆಪಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ನಂಬಿ ಜೆಡಿಎಸ್‌ ಶಾಸಕ ಇದ್ದಾಗಲೇ ಬಿಜೆಪಿ ಸೇರಿದ್ದೆ. ನನ್ನನ್ನು ಕಡೆಗಣಿಸಿ ಹೊರ ಜಿಲ್ಲೆಯವರಿಗೆ ಟಿಕೆಟ್ ನೀಡಲಾಗಿದೆ’ ಎಂದು ಅಸಮಾಧಾನ
ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT