ಬೀದರ್: ಬೀದರ್ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ನಂತರ ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಪುತ್ರ ಸೂರ್ಯಕಾಂತ ನಾಗಮಾರಪಳ್ಳಿ ಬೆಂಗಳೂರಲ್ಲಿ ರಾತ್ರಿ ಜೆಡಿಎಸ್ ಸೇರಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು.
ಶಾಸಕ ಬಂಡೆಪ್ಪ ಕಾಶೆಂಪೂರ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ ಸೇರಿದಂತೆ ಪ್ರಮುಖರು ಇದ್ದರು