<p><strong>ಹಾರಕೂಡ (ಬಸವಕಲ್ಯಾಣ): </strong>‘ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಯಡಿಯೂರಪ್ಪನವರು ಮುಖ್ಯಮಂತ್ರಿ ಆದರು. ಶಾಸಕ ದಿ.ಬಿ.ನಾರಾಯಣರಾವ್ ಅವರಿಗೂ ಬಿಜೆಪಿ ಸೇರ್ಪಡೆಗೆ ಸಾಕಷ್ಟು ಒತ್ತಡ ತಂದರೂ ಅವರು ಹಣಕ್ಕೆ ಆಸೆಪಡದೆ ಪಕ್ಷ ನಿಷ್ಠೆ ಹಾಗೂ ಪ್ರಾಮಾಣಿಕತೆ ಮೆರೆದರು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು.</p>.<p>ತಾಲ್ಲೂಕಿನ ಹಾರಕೂಡದಲ್ಲಿ ಶುಕ್ರವಾರ ನಡೆದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ.ನಾರಾಯಣರಾವ್ ಪ್ರಚಾರ ಸಭೆಗೂ ಮೊದಲು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ. ಯಾವಾಗ ಚುನಾವಣೆ ಬರುತ್ತದೋ ಎಂಬಂಥ ಪರಿಸ್ಥಿತಿ ಇದೆ. ಇದನ್ನು ವಿರೋಧ ಪಕ್ಷದವರು ಹೇಳುತ್ತಿಲ್ಲ. ಸಚಿವ ಈಶ್ವರಪ್ಪ, ಶಾಸಕ ಬಸವರಾಜ ಪಾಟೀಲ ಯತ್ನಾಳ ಅವರೇ ತೊಡೆತಟ್ಟಿ ನಿಂತಿರುವುದು ಇದಕ್ಕೆ ಸಾಕ್ಷಿಯಾಗಿದೆ. ಈ ಭಾಗದ ಅಭಿವೃದ್ಧಿಗೆ ಮಹತ್ವದ ಯೋಜನೆ ಜಾರಿಗೊಳಿಸಿಲ್ಲ’ ಎಂದು ಹೇಳಿದರು.</p>.<p>‘ಪ್ರಥಮ ಸಂಸತ್ತು ಎಂಬ ಹೆಗ್ಗಳಿಕೆಯ ಅನುಭವ ಮಂಟಪ ಸ್ಥಾಪಿಸಿದ ಅಣ್ಣ ಬಸವಣ್ಣನವರ ನೆಲದಲ್ಲಾದರೂ ಅವರು ವಿಕಾಸ ಕೈಗೊಳ್ಳಬೇಕಾಗಿತ್ತು. ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ರಚಿಸಿದವರು ನಾವು. ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಶಂಕುಸ್ಥಾಪನೆ ಇವರು ನೆರವೇರಿಸಿದರೂ ಭೂಸ್ವಾಧೀನ ನಡೆಸಿಲ್ಲ. ಈ ಚುನಾವಣೆ ಫಲಿತಾಂಶದ ಮೂಲಕ ಉತ್ತಮ ಸಂದೇಶ ಕೊಡಬೇಕು’ ಎಂದು ಅವರು ಹೇಳಿದರು.</p>.<p>ಒಂದು ವೇಳೆ ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ₹ 6 ಸಾವಿರ ನಿರುದ್ಯೋಗ ಭತ್ಯೆ ನೀಡಲಾಗುವುದು. ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು’ ಎಂದು ಭರವಸೆ ನೀಡಿದರು. ಅಭ್ಯರ್ಥಿ ಮಾಲಾ ಬಿ.ನಾರಾಯಣರಾವ್, ಶಾಸಕರಾದ ರಾಜಶೇಖರ ಪಾಟೀಲ, ಪ್ರಿಯಾಂಕ್ ಖರ್ಗೆ, ರಹೀಂಖಾನ್, ಅಜಯಸಿಂಗ್, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ, ಡಾ.ಶರಣಪ್ರಕಾಶ ಪಾಟೀಲ, ಬಿ.ಆರ್.ಪಾಟೀಲ, ವಿಧಾನಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ತಾಲ್ಲೂಕು ಘಟಕದ ಅಧ್ಯಕ್ಷ ನೀಲಕಂಠ ರಾಠೋಡ, ಬಾಬು ಹೊನ್ನಾನಾಯಕ್, ದತ್ತು ಮೂಲಗೆ, ಶಿವರಾಜ ನರಶೆಟ್ಟಿ, ಆನಂದ ದೇವಪ್ಪ, ಅರ್ಜುನ ಕನಕ, ಕೇಶಪ್ಪ ಬಿರಾದಾರ, ಮನೋಜ ಮಾಶೆಟ್ಟೆ, ಯುವರಾಜ ಭೆಂಡೆ, ದಿಲೀಪ ಶಿಂಧೆ, ಸಂದೀಪ ಬುಯೆ, ಶರಣು ಆಲಗೂಡ, ಮಹಾದೇವ ಪೂಜಾರಿ, ದೇವೇಂದ್ರ ಬಾಳಿ, ಅನ್ನಪೂರ್ಣ ಅಂಬಾರಾಯ ಪಾಲ್ಗೊಂಡಿದ್ದರು. ಕಾರ್ಯಕರ್ತರು, ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಸೇರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರಕೂಡ (ಬಸವಕಲ್ಯಾಣ): </strong>‘ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಯಡಿಯೂರಪ್ಪನವರು ಮುಖ್ಯಮಂತ್ರಿ ಆದರು. ಶಾಸಕ ದಿ.ಬಿ.ನಾರಾಯಣರಾವ್ ಅವರಿಗೂ ಬಿಜೆಪಿ ಸೇರ್ಪಡೆಗೆ ಸಾಕಷ್ಟು ಒತ್ತಡ ತಂದರೂ ಅವರು ಹಣಕ್ಕೆ ಆಸೆಪಡದೆ ಪಕ್ಷ ನಿಷ್ಠೆ ಹಾಗೂ ಪ್ರಾಮಾಣಿಕತೆ ಮೆರೆದರು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು.</p>.<p>ತಾಲ್ಲೂಕಿನ ಹಾರಕೂಡದಲ್ಲಿ ಶುಕ್ರವಾರ ನಡೆದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ.ನಾರಾಯಣರಾವ್ ಪ್ರಚಾರ ಸಭೆಗೂ ಮೊದಲು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ. ಯಾವಾಗ ಚುನಾವಣೆ ಬರುತ್ತದೋ ಎಂಬಂಥ ಪರಿಸ್ಥಿತಿ ಇದೆ. ಇದನ್ನು ವಿರೋಧ ಪಕ್ಷದವರು ಹೇಳುತ್ತಿಲ್ಲ. ಸಚಿವ ಈಶ್ವರಪ್ಪ, ಶಾಸಕ ಬಸವರಾಜ ಪಾಟೀಲ ಯತ್ನಾಳ ಅವರೇ ತೊಡೆತಟ್ಟಿ ನಿಂತಿರುವುದು ಇದಕ್ಕೆ ಸಾಕ್ಷಿಯಾಗಿದೆ. ಈ ಭಾಗದ ಅಭಿವೃದ್ಧಿಗೆ ಮಹತ್ವದ ಯೋಜನೆ ಜಾರಿಗೊಳಿಸಿಲ್ಲ’ ಎಂದು ಹೇಳಿದರು.</p>.<p>‘ಪ್ರಥಮ ಸಂಸತ್ತು ಎಂಬ ಹೆಗ್ಗಳಿಕೆಯ ಅನುಭವ ಮಂಟಪ ಸ್ಥಾಪಿಸಿದ ಅಣ್ಣ ಬಸವಣ್ಣನವರ ನೆಲದಲ್ಲಾದರೂ ಅವರು ವಿಕಾಸ ಕೈಗೊಳ್ಳಬೇಕಾಗಿತ್ತು. ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ರಚಿಸಿದವರು ನಾವು. ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಶಂಕುಸ್ಥಾಪನೆ ಇವರು ನೆರವೇರಿಸಿದರೂ ಭೂಸ್ವಾಧೀನ ನಡೆಸಿಲ್ಲ. ಈ ಚುನಾವಣೆ ಫಲಿತಾಂಶದ ಮೂಲಕ ಉತ್ತಮ ಸಂದೇಶ ಕೊಡಬೇಕು’ ಎಂದು ಅವರು ಹೇಳಿದರು.</p>.<p>ಒಂದು ವೇಳೆ ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ₹ 6 ಸಾವಿರ ನಿರುದ್ಯೋಗ ಭತ್ಯೆ ನೀಡಲಾಗುವುದು. ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು’ ಎಂದು ಭರವಸೆ ನೀಡಿದರು. ಅಭ್ಯರ್ಥಿ ಮಾಲಾ ಬಿ.ನಾರಾಯಣರಾವ್, ಶಾಸಕರಾದ ರಾಜಶೇಖರ ಪಾಟೀಲ, ಪ್ರಿಯಾಂಕ್ ಖರ್ಗೆ, ರಹೀಂಖಾನ್, ಅಜಯಸಿಂಗ್, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ, ಡಾ.ಶರಣಪ್ರಕಾಶ ಪಾಟೀಲ, ಬಿ.ಆರ್.ಪಾಟೀಲ, ವಿಧಾನಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ತಾಲ್ಲೂಕು ಘಟಕದ ಅಧ್ಯಕ್ಷ ನೀಲಕಂಠ ರಾಠೋಡ, ಬಾಬು ಹೊನ್ನಾನಾಯಕ್, ದತ್ತು ಮೂಲಗೆ, ಶಿವರಾಜ ನರಶೆಟ್ಟಿ, ಆನಂದ ದೇವಪ್ಪ, ಅರ್ಜುನ ಕನಕ, ಕೇಶಪ್ಪ ಬಿರಾದಾರ, ಮನೋಜ ಮಾಶೆಟ್ಟೆ, ಯುವರಾಜ ಭೆಂಡೆ, ದಿಲೀಪ ಶಿಂಧೆ, ಸಂದೀಪ ಬುಯೆ, ಶರಣು ಆಲಗೂಡ, ಮಹಾದೇವ ಪೂಜಾರಿ, ದೇವೇಂದ್ರ ಬಾಳಿ, ಅನ್ನಪೂರ್ಣ ಅಂಬಾರಾಯ ಪಾಲ್ಗೊಂಡಿದ್ದರು. ಕಾರ್ಯಕರ್ತರು, ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಸೇರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>