ಔರಾದ್: ಬಿಜೆಪಿ ಯುವ ಮೋರ್ಚಾದ ವತಿಯಿಂದ ಸೇವಾ ಸಮರ್ಪಣಾ ಅಭಿಯಾನದ ಅಂಗವಾಗಿ ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ರಕ್ತದಾನ ಶಿಬಿರ ನಡೆಯಿತು.
ಬಿಜೆಪಿ ಯುವ ಮೋರ್ಚಾದ ತಾಲ್ಲೂಕು ಅಧ್ಯಕ್ಷ ಚೇತನ ಕಪ್ಪೆಕೇರಿ, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀನಿವಾಸ ಖೂಬಾ, ಯಾದು ಮೇತ್ರೆ, ಪ್ರವೀಣ ಬುಟ್ಟೆ ಹಾಗೂ ವಿವೇಕ ದ್ಯಾಡೆ ಸೇರಿದಂತೆ 22 ಕಾರ್ಯಕರ್ತರು ರಕ್ತದಾನ ಮಾಡಿದರು.
ಧುರೀಣ ಬಂಡೆಪ್ಪ ಕಂಟೆ ಮಾತನಾಡಿ,‘ಪ್ರಧಾನಿ ಮೋದಿ ಅವರ ಜನ್ಮದಿನದ ಅಂಗವಾಗಿ ದೇಶದೆಲ್ಲೆಡೆ ಸೇವಾ ಸಮರ್ಪಣಾ ಅಭಿಯಾನ ನಡೆಯುತ್ತಿದೆ. ಇದರ ಅಂಗವಾಗಿ ಇಲ್ಲಿ ನಡೆದ ಶಿಬಿರದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ರಕ್ತದಾನ ಮಾಡಿದ್ದು ಮಹತ್ವದ ಕಾರ್ಯ’ ಎಂದು ಹೇಳಿದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ ಮಾತನಾಡಿ,‘ರಕ್ತದಾನ ಮತ್ತೊಬ್ಬರ ಜೀವ ಉಳಿಸುವ ಪವಿತ್ರ ಕಾರ್ಯ’ ಎಂದು ತಿಳಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಪ್ರವೀಣ ಮಾಸಿಮಾಡೆ, ಧುರೀಣ ಕೇರಬಾ ಪವಾರ್, ಖಂಡೋಬಾ ಕಂಗಟೆ, ಸಂಜು ವಡೆಯರ್, ಸಂತೋಷ ಖಾನಾಪುರೆ, ಶಿವಕುಮಾರ ಪಾಂಚಾಳ, ಶರಣಪ್ಪ ಪಾಟೀಲ, ಶ್ರೀಮಂತ ಪಾಟೀಲ ಹೆಡಗಾಪುರ, ಚೆನ್ನಬಸಪ್ಪ ಕೌಠಾ ಹಾಗೂ ಸಂದೀಪ ಪಾಟೀಲ ಇದ್ದರು.
ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀನಿವಾಸ ಖೂಬಾ ಅವರು ಆಸ್ಪತ್ರೆ ರೋಗಿಗಳಿಗೆ ಹೊದಿಕೆ ವಿತರಿಸಿದರು.