ಬೀದರ್: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಅವರ ಮಾರ್ಗದರ್ಶನದಲ್ಲಿ ಪ್ರಕಟಿಸಲಾದ ಕೇಂದ್ರ ಸರ್ಕಾರದ ಜನಕಲ್ಯಾಣ ಯೋಜನೆಗಳ ಸಮಗ್ರ ಮಾಹಿತಿಯ ‘ನವ ಭಾರತಕ್ಕೆ ನವ ಯೋಜನೆಗಳು’ ಪುಸ್ತಕದ ಕುರಿತು ಕೇಂದ್ರ ಸಚಿವ ರಾಜನಾಥಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸೂರ್ಯಕಾಂತ ನಾಗಮಾರಪಳ್ಳಿ ಅವರು ನವದೆಹಲಿಯಲ್ಲಿ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ತಾವು ಪ್ರಕಟಿಸಿದ ಪುಸ್ತಕದ ಕುರಿತು ಮಾಹಿತಿ ನೀಡಿದರು.