ಬೀದರ್: ಇಲ್ಲಿಯ ಹೋಟೆಲ್ ಮಹಾಲಕ್ಷ್ಮಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಹಿತಿ ಚಂದ್ರಗುಪ್ತ ಚಾಂದಕವಠೆ ಅವರು ಕವಿ ಮಾಣಿಕ ನೇಳಗೆ ಅವರ ‘ಬದಲಾಗೋಣ’ ಕವನ ಸಂಕಲನ ಬಿಡುಗಡೆ ಮಾಡಿದರು.
ಕವನ ಸಂಕಲನ ಕುರಿತು ಡಾ. ಮಹೇಶ ಜೋಶಿ, ಡಾ. ರಾಮಚಂದ್ರ ಗಣಾಪುರ, ಸಂಶೋಧಕ ಡಾ.ಎಂ.ಎಸ್. ಶಿರವಾಳ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ಸಂಘ ಸಂಸ್ಥೆಗಳ ಪ್ರತಿನಿಧಿ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಅಧ್ಯಕ್ಷತೆ ವಹಿಸಿದ್ದರು.
ಸಾಹಿತಿ ಚಂದ್ರಪ್ಪ ಹೆಬ್ಬಾಳಕರ್, ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷೆ ಪಾರ್ವತಿ ಸೋನಾರೆ, ಅಜೀತ್ ನೇಳಗೆ ಇದ್ದರು.