ವೈವಾಹಿಕ ಜೀವನದಲ್ಲಿ ದಂಪತಿ ನಡುವೆ ಪರಸ್ಪರ ತಿಳುವಳಿಕೆ, ಹೊಂದಾಣಿಕೆ, ಕಾಳಜಿ ಇದ್ದರೇ ಉತ್ತಮ ಕುಟುಂಬ ನಿರ್ವಹಣೆ, ಜೀವನ ಸಾಗಿಸಲು ಸಾಧ್ಯವಾಗುತ್ತದೆ. ಅಂತಹ ಸಾರ್ಥಕ ಜೀವನವನ್ನು ಸುಮನಬಾಯಿ ಬಾಬುರಾವ ಜಲ್ದೆ ಸಾಗಿಸುತ್ತ ಎಲ್ಲರಿಗೂ ಆದರ್ಶ ಆಗಿದ್ದಾರೆ. ವಚನ ಸ್ಪೂರ್ತಿ ಗ್ರಂಥವನ್ನು ಪ್ರತಿಯೊಬ್ಬರು ಅಧ್ಯಯನ ಮಾಡಿ ತಮ್ಮ ಜೀವನ ಉತ್ತಮವಾಗಿ ರೂಪಿಸಿ ಕೊಳ್ಳಬೇಕು ಎಂದರು.