<p><strong>ಬೀದರ್</strong>: ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಲಸೂರ ತಾಲ್ಲೂಕಿನ ಮುಚಳಂಬ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.</p><p>ಮುಚಳಂಬ ಗ್ರಾಮದ ಅವಿನಾಶ್ ಶರಣಪ್ಪ ಮಚಕೂರೆ (16) ಹಾಗೂ ಭಾಲ್ಕಿ ತಾಲ್ಲೂಕಿನ ಕೋಟಗೇರಾ ಗ್ರಾಮದ ಭಾಗೇಶ ಕಮಲಾಕರ ಮಾನೆ (16) ಮೃತ ಬಾಲಕರು.</p><p>ಐದು ಜನ ಸ್ನೇಹಿತರು ಗ್ರಾಮ ಸಮೀಪದ ಬಾವಿಯೊಂದರಲ್ಲಿ ಈಜಲು ಹೋಗಿದ್ದರು. ಈಜಲು ಬಾರದ ಓರ್ವ ಬಾಲಕ ನೀರಿಗೆ ಇಳಿದಿದ್ದಾನೆ. ಈಜು ಬಾರದಕ್ಕೆ ಬಾಲಕ ಮುಳುಗುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ಇನ್ನೊಬ್ಬ ಬಾಲಕ ಬಾವಿಗೆ ಜಿಗಿದಿದ್ದಾನೆ. ಈ ವೇಳೆ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ವಿಷಯ ತಿಳಿದು ಬಸವಕಲ್ಯಾಣ ಗ್ರಾಮೀಣ ಠಾಣೆಯ ಪಿಎಸ್ಐ ನಾಗೇಂದ್ರ, ಮಂಠಾಳ ಸಿಪಿಐ ಕೃಷ್ಣಕುಮಾರ್ ಪಾಟೀಲ ನೇತ್ರತ್ವದಲ್ಲಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಗ್ರಾಮಸ್ಥರ ನೆರವಿನಿಂದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. </p><p>ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಲಸೂರ ತಾಲ್ಲೂಕಿನ ಮುಚಳಂಬ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.</p><p>ಮುಚಳಂಬ ಗ್ರಾಮದ ಅವಿನಾಶ್ ಶರಣಪ್ಪ ಮಚಕೂರೆ (16) ಹಾಗೂ ಭಾಲ್ಕಿ ತಾಲ್ಲೂಕಿನ ಕೋಟಗೇರಾ ಗ್ರಾಮದ ಭಾಗೇಶ ಕಮಲಾಕರ ಮಾನೆ (16) ಮೃತ ಬಾಲಕರು.</p><p>ಐದು ಜನ ಸ್ನೇಹಿತರು ಗ್ರಾಮ ಸಮೀಪದ ಬಾವಿಯೊಂದರಲ್ಲಿ ಈಜಲು ಹೋಗಿದ್ದರು. ಈಜಲು ಬಾರದ ಓರ್ವ ಬಾಲಕ ನೀರಿಗೆ ಇಳಿದಿದ್ದಾನೆ. ಈಜು ಬಾರದಕ್ಕೆ ಬಾಲಕ ಮುಳುಗುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ಇನ್ನೊಬ್ಬ ಬಾಲಕ ಬಾವಿಗೆ ಜಿಗಿದಿದ್ದಾನೆ. ಈ ವೇಳೆ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ವಿಷಯ ತಿಳಿದು ಬಸವಕಲ್ಯಾಣ ಗ್ರಾಮೀಣ ಠಾಣೆಯ ಪಿಎಸ್ಐ ನಾಗೇಂದ್ರ, ಮಂಠಾಳ ಸಿಪಿಐ ಕೃಷ್ಣಕುಮಾರ್ ಪಾಟೀಲ ನೇತ್ರತ್ವದಲ್ಲಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಗ್ರಾಮಸ್ಥರ ನೆರವಿನಿಂದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. </p><p>ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>