<p><strong>ಹುಲಸೂರ</strong>: ತಾಲ್ಲೂಕಿನ ಮುಚಳಂಬ ಗ್ರಾಮದಲ್ಲಿ ಅತಿವೃಷ್ಟಿಯಿಂದ ಬೆಳೆ ಸಂಪೂರ್ಣ ಹಾನಿಯಾಗಿದ್ದರೂ, ಬೆಳೆ ಸಮೀಕ್ಷೆ ನಡೆಸಲು ಗ್ರಾಮ ಲೆಕ್ಕಾಧಿಕಾರಿ ಉಮೇಶ ಪೂಜಾರಿ ಅವರು ರೈತರಿಂದ ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಗ್ರಾಮಸ್ಥರು, ಭಾರತೀಯ ಕಿಸಾನ ಸಂಘದ ಸದಸ್ಯರು ಆರೋಪ ಮಾಡಿದ್ದಾರೆ.</p>.<p>ಗ್ರಾಮ ಲೆಕ್ಕಾಧಿಕಾರಿಗಳು ರೈತರಿಗೆ ಅವಾಚ್ಯ ಶಬ್ದದಿಂದ ಮಾಡುತ್ತಾರೆ. 371 (ಜೆ) ಸೇರಿದಂತೆ ಸರ್ಕಾರಿ ದಾಖಲಾತಿ ಪಡೆಯಲು ಹಣ ಕೇಳುತ್ತಾರೆ. ಬೆಳೆ ಸಮೀಕ್ಷೆಗೆ ಹಣ ಕೊಡದಿದ್ದರೆ ಸಮೀಕ್ಷೆ ದಾಖಲಿಸುವುದಿಲ್ಲ ಪರಿಣಾಮ ಬೆಳೆ ಹಾನಿಯಾಗಿದ್ದರೂ ಹಲವಾರು ರೈತರಿಗೆ ಇಂದಿಗೂ ಬೆಳೆ ಪರಿಹಾರ ಲಭಿಸಿಲ್ಲ.</p>.<p>ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ರೈತರ ಪರಿಸ್ಥಿತಿಯನ್ನು ಲೆಕ್ಕಿಸದೆ, ಅಧಿಕಾರಿಯ ನಿರ್ಲಕ್ಷ್ಯ ಮತ್ತು ಹಣದ ಬೇಡಿಕೆ ರೈತರಿಗೆ ದ್ವಂದ್ವ ಸಂಕಷ್ಟ ತಂದಿಟ್ಟಿದೆ. ಇಂತಹ ಅಧಿಕಾರಿಯನ್ನು ಬೇರೆಡೆಗೆ ವರ್ಗಾಯಿಸಿ, ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಹಾಗೂ ಸಂಘಟನೆ ಸದಸ್ಯರು ಒತ್ತಾಯಿಸಿದರು.</p>.<p>ಈ ಕುರಿತು ಉಪ ತಹಶೀಲ್ದಾರ್ ಸುನೀಲಕುಮಾರ ಸಜ್ಜನಶೆಟ್ಟಿ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದ್ದು, ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.</p>.<p>ಈ ಸಂದರ್ಭದಲ್ಲಿ ಪ್ರಮುಖರಾದ ಶರಣಪ್ಪಾ ಕಾಮಶೆಟ್ಟಿ, ಮಹಾದೇವ ಕಾಮಶೆಟ್ಟಿ, ಗ್ರಾಮ ಕ್ರಾಂತಿ ಸೇನೆ ರಾಜ್ಯದ್ಯಕ್ಷ ಸಂದೀಪ ಮುಕಿಂದೇ, ಶರಣಪ್ಪಾ ಧನ್ನ್, ಸದಾನಂದ ದೇವಪ್ಪ, ಬಸವರಾಜ ರಾಘೋ, ಗಣೇಶ ಚಾಕುರೆ, ಪ್ರಕಾಶ ಜಾವಪ್ಪ, ಕಿರಣ ಕಾಮಶೆಟ್ಟಿ ಸೇರಿ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ</strong>: ತಾಲ್ಲೂಕಿನ ಮುಚಳಂಬ ಗ್ರಾಮದಲ್ಲಿ ಅತಿವೃಷ್ಟಿಯಿಂದ ಬೆಳೆ ಸಂಪೂರ್ಣ ಹಾನಿಯಾಗಿದ್ದರೂ, ಬೆಳೆ ಸಮೀಕ್ಷೆ ನಡೆಸಲು ಗ್ರಾಮ ಲೆಕ್ಕಾಧಿಕಾರಿ ಉಮೇಶ ಪೂಜಾರಿ ಅವರು ರೈತರಿಂದ ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಗ್ರಾಮಸ್ಥರು, ಭಾರತೀಯ ಕಿಸಾನ ಸಂಘದ ಸದಸ್ಯರು ಆರೋಪ ಮಾಡಿದ್ದಾರೆ.</p>.<p>ಗ್ರಾಮ ಲೆಕ್ಕಾಧಿಕಾರಿಗಳು ರೈತರಿಗೆ ಅವಾಚ್ಯ ಶಬ್ದದಿಂದ ಮಾಡುತ್ತಾರೆ. 371 (ಜೆ) ಸೇರಿದಂತೆ ಸರ್ಕಾರಿ ದಾಖಲಾತಿ ಪಡೆಯಲು ಹಣ ಕೇಳುತ್ತಾರೆ. ಬೆಳೆ ಸಮೀಕ್ಷೆಗೆ ಹಣ ಕೊಡದಿದ್ದರೆ ಸಮೀಕ್ಷೆ ದಾಖಲಿಸುವುದಿಲ್ಲ ಪರಿಣಾಮ ಬೆಳೆ ಹಾನಿಯಾಗಿದ್ದರೂ ಹಲವಾರು ರೈತರಿಗೆ ಇಂದಿಗೂ ಬೆಳೆ ಪರಿಹಾರ ಲಭಿಸಿಲ್ಲ.</p>.<p>ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ರೈತರ ಪರಿಸ್ಥಿತಿಯನ್ನು ಲೆಕ್ಕಿಸದೆ, ಅಧಿಕಾರಿಯ ನಿರ್ಲಕ್ಷ್ಯ ಮತ್ತು ಹಣದ ಬೇಡಿಕೆ ರೈತರಿಗೆ ದ್ವಂದ್ವ ಸಂಕಷ್ಟ ತಂದಿಟ್ಟಿದೆ. ಇಂತಹ ಅಧಿಕಾರಿಯನ್ನು ಬೇರೆಡೆಗೆ ವರ್ಗಾಯಿಸಿ, ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಹಾಗೂ ಸಂಘಟನೆ ಸದಸ್ಯರು ಒತ್ತಾಯಿಸಿದರು.</p>.<p>ಈ ಕುರಿತು ಉಪ ತಹಶೀಲ್ದಾರ್ ಸುನೀಲಕುಮಾರ ಸಜ್ಜನಶೆಟ್ಟಿ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದ್ದು, ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.</p>.<p>ಈ ಸಂದರ್ಭದಲ್ಲಿ ಪ್ರಮುಖರಾದ ಶರಣಪ್ಪಾ ಕಾಮಶೆಟ್ಟಿ, ಮಹಾದೇವ ಕಾಮಶೆಟ್ಟಿ, ಗ್ರಾಮ ಕ್ರಾಂತಿ ಸೇನೆ ರಾಜ್ಯದ್ಯಕ್ಷ ಸಂದೀಪ ಮುಕಿಂದೇ, ಶರಣಪ್ಪಾ ಧನ್ನ್, ಸದಾನಂದ ದೇವಪ್ಪ, ಬಸವರಾಜ ರಾಘೋ, ಗಣೇಶ ಚಾಕುರೆ, ಪ್ರಕಾಶ ಜಾವಪ್ಪ, ಕಿರಣ ಕಾಮಶೆಟ್ಟಿ ಸೇರಿ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>