<p><strong>ಭಾಲ್ಕಿ/ಬೀದರ್:</strong> ನರೇಗಾ ಯೋಜನೆಯಡಿ ನಿರ್ವಹಿಸಿದ ಕಾಮಗಾರಿಯ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆಯಿಟ್ಟು, ನಗದು ತೆಗೆದುಕೊಳ್ಳುತ್ತಿದ್ದ ಭಾಲ್ಕಿ ತಾಲ್ಲೂಕಿನ ಕೋಸಂ ಗ್ರಾಮ ಪಂಚಾಯಿತಿ ಪಿಡಿಒ ರಾಹುಲ್ ದಾಂಡೆ, ತಾಂತ್ರಿಕ ಸಹಾಯಕ ಸಿದ್ರಾಮೇಶ್ವರ ಪಾಟೀಲ ಎಂಬುವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p><p>ಪಿಡಿಒ ರಾಹುಲ್ ಅವರು ದೂರುದಾರರಿಂದ ₹30 ಸಾವಿರ, ತಾಂತ್ರಿಕ ಸಹಾಯಕ ಸಿದ್ರಾಮೇಶ್ವರ ಪಾಟೀಲ ಅವರು ದೂರುದಾರರಿಂದ ₹70 ಸಾವಿರ ನಗದು ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ. ಈ ಎರಡೂ ಪ್ರಕರಣಗಳಲ್ಲಿ ಪ್ರತ್ಯೇಕ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಇಬ್ಬರನ್ನು ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p><p>ಭಾಲ್ಕಿ ತಾಲ್ಲೂಕಿನ ಹಾಲಹಿಪ್ಪರ್ಗಾದ ಗುತ್ತಿಗೆದಾರ ಅರವಿಂದ ಮಾಧವರಾವ ಭಾಲ್ಕೆ ಅವರು ನರೇಗಾ ಯೋಜನೆಯಡಿ 15 ಕಾಮಗಾರಿಗಳನ್ನು ನಿರ್ವಹಿಸಿದ್ದರು. ಬಿಲ್ ಪಾವತಿಗೆ ಪಿಡಿಒ, ತಾಂತ್ರಿಕ ಸಹಾಯಕ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಸೋಮವಾರ ಬೀದರ್ ನಗರದ ಗುಂಪಾ ಸಮೀಪದ ಕಾರ್ ಸರ್ವೀಸ್ ಸೆಂಟರ್ ಬಳಿ ಪಿಡಿಒ ರಾಹುಲ್ ದೂರುದಾರ ಅರವಿಂದ ಅವರಿಂದ ₹30 ಸಾವಿರ ನಗದು ಹಾಗೂ ಭಾಲ್ಕಿ ತಾಲ್ಲೂಕಿನ ಹಲಬರ್ಗಾದ ಬಸ್ ನಿಲ್ದಾಣದ ಬಳಿ ₹70 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ನಗದಿನೊಂದಿಗೆ ಬಂಧಿಸಿದ್ದಾರೆ.</p><p>ಈ ಸಂಬಂಧ ಬೀದರ್ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಹಣಮಂತರಾವ್, ಪಿಎಸ್ಐಗಳಾದ</p><p>ಬಾಬಾಸಾಹೇಬ್ ಪಾಟೀಲ, ಸಂತೋಷ ರಾಠೋಡ್, ಅರ್ಜುನಪ್ಪ, ಉದ್ದಂಡಪ್ಪ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ/ಬೀದರ್:</strong> ನರೇಗಾ ಯೋಜನೆಯಡಿ ನಿರ್ವಹಿಸಿದ ಕಾಮಗಾರಿಯ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆಯಿಟ್ಟು, ನಗದು ತೆಗೆದುಕೊಳ್ಳುತ್ತಿದ್ದ ಭಾಲ್ಕಿ ತಾಲ್ಲೂಕಿನ ಕೋಸಂ ಗ್ರಾಮ ಪಂಚಾಯಿತಿ ಪಿಡಿಒ ರಾಹುಲ್ ದಾಂಡೆ, ತಾಂತ್ರಿಕ ಸಹಾಯಕ ಸಿದ್ರಾಮೇಶ್ವರ ಪಾಟೀಲ ಎಂಬುವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p><p>ಪಿಡಿಒ ರಾಹುಲ್ ಅವರು ದೂರುದಾರರಿಂದ ₹30 ಸಾವಿರ, ತಾಂತ್ರಿಕ ಸಹಾಯಕ ಸಿದ್ರಾಮೇಶ್ವರ ಪಾಟೀಲ ಅವರು ದೂರುದಾರರಿಂದ ₹70 ಸಾವಿರ ನಗದು ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ. ಈ ಎರಡೂ ಪ್ರಕರಣಗಳಲ್ಲಿ ಪ್ರತ್ಯೇಕ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಇಬ್ಬರನ್ನು ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p><p>ಭಾಲ್ಕಿ ತಾಲ್ಲೂಕಿನ ಹಾಲಹಿಪ್ಪರ್ಗಾದ ಗುತ್ತಿಗೆದಾರ ಅರವಿಂದ ಮಾಧವರಾವ ಭಾಲ್ಕೆ ಅವರು ನರೇಗಾ ಯೋಜನೆಯಡಿ 15 ಕಾಮಗಾರಿಗಳನ್ನು ನಿರ್ವಹಿಸಿದ್ದರು. ಬಿಲ್ ಪಾವತಿಗೆ ಪಿಡಿಒ, ತಾಂತ್ರಿಕ ಸಹಾಯಕ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಸೋಮವಾರ ಬೀದರ್ ನಗರದ ಗುಂಪಾ ಸಮೀಪದ ಕಾರ್ ಸರ್ವೀಸ್ ಸೆಂಟರ್ ಬಳಿ ಪಿಡಿಒ ರಾಹುಲ್ ದೂರುದಾರ ಅರವಿಂದ ಅವರಿಂದ ₹30 ಸಾವಿರ ನಗದು ಹಾಗೂ ಭಾಲ್ಕಿ ತಾಲ್ಲೂಕಿನ ಹಲಬರ್ಗಾದ ಬಸ್ ನಿಲ್ದಾಣದ ಬಳಿ ₹70 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ನಗದಿನೊಂದಿಗೆ ಬಂಧಿಸಿದ್ದಾರೆ.</p><p>ಈ ಸಂಬಂಧ ಬೀದರ್ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಹಣಮಂತರಾವ್, ಪಿಎಸ್ಐಗಳಾದ</p><p>ಬಾಬಾಸಾಹೇಬ್ ಪಾಟೀಲ, ಸಂತೋಷ ರಾಠೋಡ್, ಅರ್ಜುನಪ್ಪ, ಉದ್ದಂಡಪ್ಪ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>