ಹುಮನಾಬಾದ್: ಶನಿವಾರ ರಾತ್ರಿ ಸುರಿದ ಮಳೆಗೆ ತಾಲ್ಲೂಕಿನ ಹುಡಗಿ ಹಾಗೂ ಬೋತಗಿ ಗ್ರಾಮಗಳಲ್ಲಿ ರಸ್ತೆ, ಸೇತುವೆ ಹಾನಿ ಆಗಿರುವ ಸ್ಥಳಕ್ಕೆ ಶಾಸಕ ರಾಜಶೇಖರ ಪಾಟೀಲ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ‘ತಾಲ್ಲೂಕಿನಲ್ಲಿ ಮಳೆಯಿಂದ ಹಾನಿ ಆಗಿರುವ ಮನೆ, ರೈತರ ಬೆಳೆ, ರಸ್ತೆ ಬಗ್ಗೆ ಶೀಘ್ರವಾಗಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ’ ಅಧಿಕಾರಿಗಳಿಗೆ ಸೂಚಿಸಿದರು.