<p><strong>ಔರಾದ್:</strong> ತಾಲ್ಲೂಕಿನ ವಿವಿಧೆಡೆ ಬುಧವಾರ ಭಾರಿ ಮಳೆಯಾಗಿ ಕೆಲ ಕಡೆ ಸಂಚಾರ ಸ್ಥಗಿತಗೊಂಡಿದೆ. ಸಂತಪುರ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಒಂದು ಗಂಟೆ ಕಾಲ ಭಾರಿ ಮಳೆ ಸುರಿದಿದೆ.</p>.<p>ಭಾಲ್ಕಿ-ಔರಾದ್ ರಸ್ತೆಯ ಬೆಳಕುಣಿ ಬಳಿ ಸೇತುವೆ ಮೇಲಿಂದ ನೀರು ಹರಿದು ಅರ್ಧ ಗಂಟೆ ಸಂಚಾರ ಸ್ಥಗಿತವಾಗಿದೆ. ಸಂತಪುರನಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಆಸ್ಪತ್ರೆ ಆವರಣದಲ್ಲಿ ನೀರು ನುಗ್ಗಿ ರೋಗಿಗಳು ಪರದಾಡಬೇಕಾಯಿತು.</p>.<p>‘ಪಂಚಾಯಿತಿಯವರು ನೀರು ಹೋಗಲು ಸರಿಯಾದ ವ್ಯವಸ್ಥೆ ಮಾಡದ ಕಾರಣ ಮಳೆ ಬಂದಾಗ ಇಂತಹ ಸಮಸ್ಯೆ ಆಗುತ್ತಿದೆ’ ಎಂದು ಸಂತಪುರ ನಿವಾಸಿ ಮಂಜುನಾಥ ಸ್ವಾಮಿ ದೂರಿದರು.</p>.<p class="Subhead"><strong>ಕಳಪೆ ಕಾಮಗಾರಿ</strong>: ‘ಬೆಳಕುಣಿ ಗ್ರಾಮದ ಬಳಿ ಸೇತುವೆ ಕಾಮಗಾರಿ ಸರಿಯಾಗಿಲ್ಲ. ಒಂದೇ ಮಳೆಗೆ ಹಾಳಾಗಿದೆ. ಇದರಿಂದ ಇಲ್ಲಿ ಓಡಾಡುವ ಪ್ರಯಾಣಿಕರಲ್ಲಿ ಭೀತಿ ಆವರಿಸಿದೆ’ ಎಂದು ಬೆಳಕುಣಿ ನಿವಾಸಿ ಜಾವಿದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p><strong>ಸಾಧಾರಣ ಮಳೆ<br />ಬೀದರ್: </strong>ಜಿಲ್ಲೆಯ ವಿವಿಧೆಡೆ ಬುಧವಾರ ಸಾಧಾರಣ ಮಳೆಯಾಗಿದೆ. ಹುಮನಾಬಾದ್, ಚಿಟಗುಪ್ಪ, ಬಸವಕಲ್ಯಾಣ ಹಾಗೂ ಭಾಲ್ಕಿ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ತಾಲ್ಲೂಕಿನ ವಿವಿಧೆಡೆ ಬುಧವಾರ ಭಾರಿ ಮಳೆಯಾಗಿ ಕೆಲ ಕಡೆ ಸಂಚಾರ ಸ್ಥಗಿತಗೊಂಡಿದೆ. ಸಂತಪುರ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಒಂದು ಗಂಟೆ ಕಾಲ ಭಾರಿ ಮಳೆ ಸುರಿದಿದೆ.</p>.<p>ಭಾಲ್ಕಿ-ಔರಾದ್ ರಸ್ತೆಯ ಬೆಳಕುಣಿ ಬಳಿ ಸೇತುವೆ ಮೇಲಿಂದ ನೀರು ಹರಿದು ಅರ್ಧ ಗಂಟೆ ಸಂಚಾರ ಸ್ಥಗಿತವಾಗಿದೆ. ಸಂತಪುರನಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಆಸ್ಪತ್ರೆ ಆವರಣದಲ್ಲಿ ನೀರು ನುಗ್ಗಿ ರೋಗಿಗಳು ಪರದಾಡಬೇಕಾಯಿತು.</p>.<p>‘ಪಂಚಾಯಿತಿಯವರು ನೀರು ಹೋಗಲು ಸರಿಯಾದ ವ್ಯವಸ್ಥೆ ಮಾಡದ ಕಾರಣ ಮಳೆ ಬಂದಾಗ ಇಂತಹ ಸಮಸ್ಯೆ ಆಗುತ್ತಿದೆ’ ಎಂದು ಸಂತಪುರ ನಿವಾಸಿ ಮಂಜುನಾಥ ಸ್ವಾಮಿ ದೂರಿದರು.</p>.<p class="Subhead"><strong>ಕಳಪೆ ಕಾಮಗಾರಿ</strong>: ‘ಬೆಳಕುಣಿ ಗ್ರಾಮದ ಬಳಿ ಸೇತುವೆ ಕಾಮಗಾರಿ ಸರಿಯಾಗಿಲ್ಲ. ಒಂದೇ ಮಳೆಗೆ ಹಾಳಾಗಿದೆ. ಇದರಿಂದ ಇಲ್ಲಿ ಓಡಾಡುವ ಪ್ರಯಾಣಿಕರಲ್ಲಿ ಭೀತಿ ಆವರಿಸಿದೆ’ ಎಂದು ಬೆಳಕುಣಿ ನಿವಾಸಿ ಜಾವಿದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p><strong>ಸಾಧಾರಣ ಮಳೆ<br />ಬೀದರ್: </strong>ಜಿಲ್ಲೆಯ ವಿವಿಧೆಡೆ ಬುಧವಾರ ಸಾಧಾರಣ ಮಳೆಯಾಗಿದೆ. ಹುಮನಾಬಾದ್, ಚಿಟಗುಪ್ಪ, ಬಸವಕಲ್ಯಾಣ ಹಾಗೂ ಭಾಲ್ಕಿ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>