‘ಅನ್ನಭಾಗ್ಯ’ ಮತ್ತು ‘ಮುಖ್ಯಮಂತ್ರಿ ಅನಿಲ ಭಾಗ್ಯ’ದಂತಹ ಯೋಜನೆಗಳು ದೇಶದ ಯಾವ ರಾಜ್ಯದಲ್ಲಿದೆ ಹೇಳಿ. ಅನ್ನ ಭಾಗ್ಯಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳುತ್ತಾರೆ. ಹಾಗಿದ್ದರೆ, ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್, ರಾಜಸ್ಥಾನ ಮುಂತಾದ ರಾಜ್ಯಗಳಲ್ಲಿ ಅನ್ನಭಾಗ್ಯ ಯೋಜನೆ ಏಕೆ ಇಲ್ಲ. ಇಲ್ಲಿ ಬಂದು ಸುಳ್ಳು ಹೇಳುತ್ತಾರೆ’ ಎಂದು ಕಿಡಿ ಕಾರಿದರು.