<p><strong>ಹುಮನಾಬಾದ್</strong>: ‘ಬಹುಜನ ಸಮಾಜ ಪಕ್ಷದಿಂದ ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು ನನ್ನ ಹೆಸರು ಘೋಷಣೆ ಮಾಡಿದ್ದಾರೆ’ ಎಂದು ಬಿಎಸ್ಪಿ ಅಭ್ಯರ್ಥಿ ಅಂಕುಶ್ ಗೋಖಲೆ ತಿಳಿಸಿದರು.</p>.<p>ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಪಕ್ಷ ನನ್ನನ್ನು ಅಭ್ಯರ್ಥಿಯನ್ನಾಗಿ ಪ್ರಕಟಿಸಿದೆ. ಹೀಗಾಗಿ ಕ್ಷೇತ್ರದ ಜನರು ನನ್ನ ಮೇಲೆ ವಿಶ್ವಾಸವಿಟ್ಟು ಮತ ನೀಡಬೇಕು. ಕ್ಷೇತ್ರದಲ್ಲಿ ಕಳೆದ 17 ವರ್ಷಗಳಿಂದ ಸತತವಾಗಿ ಅಧಿಕಾರ ದಲ್ಲಿರುವ ಶಾಸಕ ರಾಜಶೇಖರ ಪಾಟೀಲ ಅವರು ಜನರ ಕಷ್ಟ ಸುಖಗಳಲ್ಲಿ ಭಾಗವಹಿಸಿಲ್ಲ’ ಎಂದು ದೂರಿದರು.</p>.<p>ನನಗೆ ಅಧಿಕಾರ ಇಲ್ಲದಿದ್ದರೂ ಅನೇಕ ಬಡ ಜನರ ಸುಮಾರು 500 ಎಕರೆ ಬಗರ್ ಹುಕುಂ ಭೂಮಿ ಒದಗಿಸಿಕೊಡಲು ಹೋರಾಟ ನಡೆಸಿದ್ದೇನೆ. ಪಟ್ಟಣ ಹೊರವಲಯದ ಕೆಲ ಕಾರ್ಖಾನೆಗಳು ರಾಸಾಯನಿಕ ಮಿಶ್ರಿತ ನೀರನ್ನು ಹಳ್ಳಿಗಳಲ್ಲಿ ಹರಿ ಬಿಡುತ್ತಿರುವುದನ್ನು ವಿರೋಧಿಸಿ ಹೋರಾಟ ನಡೆಸಿದ್ದೇನೆ. ಕಾರ್ಖಾನೆಗಳನ್ನು ಬಂದ್ ಮಾಡಬೇಕು ಎಂದು ಆಗ್ರಹಿಸಿದ್ದೇನೆ. ಆದರೆ ಶಾಸಕ ರಾಜಶೇಖರ ಪಾಟೀಲ ಅವರು ಕಾರ್ಖಾನೆಯವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಕ್ಷೇತ್ರದ ಜನ ಆಶೀರ್ವಾದ ಮಾಡಿದರೆ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪ್ರಾರಂಭಿಸುತ್ತೇನೆ. ಹುಮನಾಬಾದ್ ಪಟ್ಟಣದ ಹೊರವಲಯದ ಕೆಲ ಕಾರ್ಖಾನೆಗಳನ್ನು ಬಂದ್ ಮಾಡಿಸುತ್ತೇನೆ. ಬಗರ್ ಹುಕುಂ ಭೂಮಿ ಒದಗಿಸಲು ಪ್ರಾಮಾ ಣಿಕವಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.</p>.<p>ಜಮೀಲ್ ಖಾನ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್</strong>: ‘ಬಹುಜನ ಸಮಾಜ ಪಕ್ಷದಿಂದ ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು ನನ್ನ ಹೆಸರು ಘೋಷಣೆ ಮಾಡಿದ್ದಾರೆ’ ಎಂದು ಬಿಎಸ್ಪಿ ಅಭ್ಯರ್ಥಿ ಅಂಕುಶ್ ಗೋಖಲೆ ತಿಳಿಸಿದರು.</p>.<p>ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಪಕ್ಷ ನನ್ನನ್ನು ಅಭ್ಯರ್ಥಿಯನ್ನಾಗಿ ಪ್ರಕಟಿಸಿದೆ. ಹೀಗಾಗಿ ಕ್ಷೇತ್ರದ ಜನರು ನನ್ನ ಮೇಲೆ ವಿಶ್ವಾಸವಿಟ್ಟು ಮತ ನೀಡಬೇಕು. ಕ್ಷೇತ್ರದಲ್ಲಿ ಕಳೆದ 17 ವರ್ಷಗಳಿಂದ ಸತತವಾಗಿ ಅಧಿಕಾರ ದಲ್ಲಿರುವ ಶಾಸಕ ರಾಜಶೇಖರ ಪಾಟೀಲ ಅವರು ಜನರ ಕಷ್ಟ ಸುಖಗಳಲ್ಲಿ ಭಾಗವಹಿಸಿಲ್ಲ’ ಎಂದು ದೂರಿದರು.</p>.<p>ನನಗೆ ಅಧಿಕಾರ ಇಲ್ಲದಿದ್ದರೂ ಅನೇಕ ಬಡ ಜನರ ಸುಮಾರು 500 ಎಕರೆ ಬಗರ್ ಹುಕುಂ ಭೂಮಿ ಒದಗಿಸಿಕೊಡಲು ಹೋರಾಟ ನಡೆಸಿದ್ದೇನೆ. ಪಟ್ಟಣ ಹೊರವಲಯದ ಕೆಲ ಕಾರ್ಖಾನೆಗಳು ರಾಸಾಯನಿಕ ಮಿಶ್ರಿತ ನೀರನ್ನು ಹಳ್ಳಿಗಳಲ್ಲಿ ಹರಿ ಬಿಡುತ್ತಿರುವುದನ್ನು ವಿರೋಧಿಸಿ ಹೋರಾಟ ನಡೆಸಿದ್ದೇನೆ. ಕಾರ್ಖಾನೆಗಳನ್ನು ಬಂದ್ ಮಾಡಬೇಕು ಎಂದು ಆಗ್ರಹಿಸಿದ್ದೇನೆ. ಆದರೆ ಶಾಸಕ ರಾಜಶೇಖರ ಪಾಟೀಲ ಅವರು ಕಾರ್ಖಾನೆಯವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಕ್ಷೇತ್ರದ ಜನ ಆಶೀರ್ವಾದ ಮಾಡಿದರೆ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪ್ರಾರಂಭಿಸುತ್ತೇನೆ. ಹುಮನಾಬಾದ್ ಪಟ್ಟಣದ ಹೊರವಲಯದ ಕೆಲ ಕಾರ್ಖಾನೆಗಳನ್ನು ಬಂದ್ ಮಾಡಿಸುತ್ತೇನೆ. ಬಗರ್ ಹುಕುಂ ಭೂಮಿ ಒದಗಿಸಲು ಪ್ರಾಮಾ ಣಿಕವಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.</p>.<p>ಜಮೀಲ್ ಖಾನ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>