<p><strong>ಹುಲಸೂರ</strong>: ಪಟ್ಟಣದ ಬುದ್ಧವಿಹಾರದಿಂದ ಭಾಲ್ಕಿ–ನೀಲಂಗಾ ಮುಖ್ಯ ರಸ್ತೆಯವರೆಗೆ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿ ವೇಳೆ, ದಲಿತ ಸಮುದಾಯಕ್ಕೆ ಮಂಜೂರಾದ ಭೂಮಿಯನ್ನು ಯಾವುದೇ ನೋಟಿಸ್ ನೀಡದೇ ಬಳಸಲಾಗುತ್ತಿದೆ ಎಂದು ಆರೋಪಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.</p>.<p>‘ಪಟ್ಟಣದ ಇನಾಮಿ ಭೂಮಿ ಸರ್ವೆ ನಂ.1ರಲ್ಲಿ ಒಟ್ಟು 18 ಎಕರೆ 12 ಗುಂಟೆ ಭೂಮಿ ದಲಿತರಿಗೆ ಸರ್ಕಾರ ಮಂಜೂರು ಮಾಡಿದೆ. ಈ ಭೂಮಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಸಲಾಗುತ್ತಿದೆ ಎಂದು ದೂರಿದರು. ಇತರೆ ಸಮುದಾಯಗಳ ಭೂಮಿಯನ್ನು ಬಿಟ್ಟು, ಉದ್ದೇಶಪೂರ್ವಕವಾಗಿ ದಲಿತರ ಭೂಮಿಗೆ ತೊಂದರೆ ನೀಡಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>‘ಕಾಮಗಾರಿ ಆರಂಭಿಸುವ ಮೊದಲು ಭೂಮಿ ಮಾಲೀಕರಿಗೆ ಯಾವುದೇ ನೋಟಿಸ್ ನೀಡಿಲ್ಲ. ಅಲ್ಲದೆ ಭೂಮಿ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸರ್ವೆ, ದಾಖಲೆ ಪರಿಶೀಲನೆ ಹಾಗೂ ಪರಿಹಾರ ಪ್ರಕ್ರಿಯೆ ಕೈಗೊಳ್ಳದೆ ನೇರವಾಗಿ ಕಾಮಗಾರಿ ನಡೆಸಲಾಗುತ್ತಿದೆ’ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಮರುಸರ್ವೆ ಮಾಡಬೇಕು. ರಸ್ತೆ ಅಗಲೀಕರಣದಿಂದ ಭೂಮಿ ಕಳೆದುಕೊಂಡ ದಲಿತ ಕುಟುಂಬಗಳನ್ನು ಗುರುತಿಸಿ, ನ್ಯಾಯಯುತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸತ್ಯದೀಪ ಹಾವನೂರ, ರಾಜ್ಯ ಉಪಾಧ್ಯಕ್ಷ ದತ್ತು ಸೂರ್ಯವಂಶಿ, ಜಿಲ್ಲಾ ಅಧ್ಯಕ್ಷ ಯೋಹಾನ ಡಿಸೋಜಾ ಚಿಲ್ಲರ್ಗಿ, ಬಸವಕಲ್ಯಾಣ ತಾಲ್ಲೂಕು ಅಧ್ಯಕ್ಷ ಸಂತೋಷ ಮೇಕ್ಷಮ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಗುತ್ತೆದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ</strong>: ಪಟ್ಟಣದ ಬುದ್ಧವಿಹಾರದಿಂದ ಭಾಲ್ಕಿ–ನೀಲಂಗಾ ಮುಖ್ಯ ರಸ್ತೆಯವರೆಗೆ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿ ವೇಳೆ, ದಲಿತ ಸಮುದಾಯಕ್ಕೆ ಮಂಜೂರಾದ ಭೂಮಿಯನ್ನು ಯಾವುದೇ ನೋಟಿಸ್ ನೀಡದೇ ಬಳಸಲಾಗುತ್ತಿದೆ ಎಂದು ಆರೋಪಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.</p>.<p>‘ಪಟ್ಟಣದ ಇನಾಮಿ ಭೂಮಿ ಸರ್ವೆ ನಂ.1ರಲ್ಲಿ ಒಟ್ಟು 18 ಎಕರೆ 12 ಗುಂಟೆ ಭೂಮಿ ದಲಿತರಿಗೆ ಸರ್ಕಾರ ಮಂಜೂರು ಮಾಡಿದೆ. ಈ ಭೂಮಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಸಲಾಗುತ್ತಿದೆ ಎಂದು ದೂರಿದರು. ಇತರೆ ಸಮುದಾಯಗಳ ಭೂಮಿಯನ್ನು ಬಿಟ್ಟು, ಉದ್ದೇಶಪೂರ್ವಕವಾಗಿ ದಲಿತರ ಭೂಮಿಗೆ ತೊಂದರೆ ನೀಡಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>‘ಕಾಮಗಾರಿ ಆರಂಭಿಸುವ ಮೊದಲು ಭೂಮಿ ಮಾಲೀಕರಿಗೆ ಯಾವುದೇ ನೋಟಿಸ್ ನೀಡಿಲ್ಲ. ಅಲ್ಲದೆ ಭೂಮಿ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸರ್ವೆ, ದಾಖಲೆ ಪರಿಶೀಲನೆ ಹಾಗೂ ಪರಿಹಾರ ಪ್ರಕ್ರಿಯೆ ಕೈಗೊಳ್ಳದೆ ನೇರವಾಗಿ ಕಾಮಗಾರಿ ನಡೆಸಲಾಗುತ್ತಿದೆ’ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಮರುಸರ್ವೆ ಮಾಡಬೇಕು. ರಸ್ತೆ ಅಗಲೀಕರಣದಿಂದ ಭೂಮಿ ಕಳೆದುಕೊಂಡ ದಲಿತ ಕುಟುಂಬಗಳನ್ನು ಗುರುತಿಸಿ, ನ್ಯಾಯಯುತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸತ್ಯದೀಪ ಹಾವನೂರ, ರಾಜ್ಯ ಉಪಾಧ್ಯಕ್ಷ ದತ್ತು ಸೂರ್ಯವಂಶಿ, ಜಿಲ್ಲಾ ಅಧ್ಯಕ್ಷ ಯೋಹಾನ ಡಿಸೋಜಾ ಚಿಲ್ಲರ್ಗಿ, ಬಸವಕಲ್ಯಾಣ ತಾಲ್ಲೂಕು ಅಧ್ಯಕ್ಷ ಸಂತೋಷ ಮೇಕ್ಷಮ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಗುತ್ತೆದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>