ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ತಹಶೀಲ್ದಾರ್‌ ಮೇಲೆ ಬಿಎಸ್‌ಪಿ ಕಾರ್ಯಕರ್ತರ ಹಲ್ಲೆ

Last Updated 28 ಜನವರಿ 2022, 16:54 IST
ಅಕ್ಷರ ಗಾತ್ರ

ಬೀದರ್‌: ಮನವಿ ಸ್ವೀಕರಿಸಲು ಬರಲಿಲ್ಲ ಎಂದು ಆಕ್ರೋಶಗೊಂಡು ಪ್ರತಿಭಟನಾನಿರತ ಬಹುಜನ ಸಮಾಜ ಪಾರ್ಟಿಯ (ಬಿಎಸ್‌ಪಿ) ಕಾರ್ಯಕರ್ತರು ಶುಕ್ರವಾರ ಹುಮನಾಬಾದ್ ತಹಶೀಲ್ದಾರ್‌ ಕಚೇರಿಗೆ ನುಗ್ಗಿ ಕುರ್ಚಿಗಳನ್ನು ಧ್ವಂಸಗೊಳಿಸಿ ತಹಶೀಲ್ದಾರ್ ಪ್ರದೀಪ ಹಿರೇಮಠ ಮೇಲೆ ಹಲ್ಲೆ ನಡೆಸಿದ್ದಾರೆ.

ಗಣರಾಜ್ಯೋತ್ಸವ ಸಮಾರಂಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿರುವ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಹುಮನಾಬಾದ್‌ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಬಿಎಸ್‌ಪಿ ಕಾರ್ಯಕರ್ತರು ತಹಶೀಲ್ದಾರರು ಮನವಿಪತ್ರ ಸ್ವೀಕರಿಸಲು ಸ್ಥಳಕ್ಕೆ ಬರುವಂತೆ ಮನವಿ ಮಾಡಿದರು.

ಆಹಾರ ಇಲಾಖೆ ಅಧಿಕಾರಿಗಳ ಸಭೆ ನಡೆಸುತ್ತಿದ್ದರಿಂದ ತಹಶೀಲ್ದಾರರು ಕಚೇರಿ ಸಿಬ್ಬಂದಿಯನ್ನು ಮನವಿಪತ್ರ ಸ್ವೀಕರಿಸಲು ಪ್ರತಿಭಟನಾನಿರತರ ಬಳಿ ಕಳಿಸಿದರು. ಇದರಿಂದ ಕೆರಳಿದ ಕಾರ್ಯಕರ್ತರು ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಅಂಕುಶ್ ಗೋಖಲೆ ನೇತೃತ್ವದಲ್ಲಿ ತಹಶೀಲ್ದಾರ್‌ ಕಚೇರಿ ಸಭಾಂಗಣಕ್ಕೆ ನುಗ್ಗಿ ಕುರ್ಚಿಗಳನ್ನು ಎತ್ತಿ ಬಿಸಾಡಿದರು. ತಹಶೀಲ್ದಾರ್‌ ಮೇಲೆ ಹಲ್ಲೆ ನಡೆಸಿದರು. ಕಚೇರಿ ಸಿಬ್ಬಂದಿ ಭಯದಿಂದ ಹೊರಗೆ ಓಡಿ ಹೋದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT