ಆಹಾರ ಇಲಾಖೆ ಅಧಿಕಾರಿಗಳ ಸಭೆ ನಡೆಸುತ್ತಿದ್ದರಿಂದ ತಹಶೀಲ್ದಾರರು ಕಚೇರಿ ಸಿಬ್ಬಂದಿಯನ್ನು ಮನವಿಪತ್ರ ಸ್ವೀಕರಿಸಲು ಪ್ರತಿಭಟನಾನಿರತರ ಬಳಿ ಕಳಿಸಿದರು. ಇದರಿಂದ ಕೆರಳಿದ ಕಾರ್ಯಕರ್ತರು ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಅಂಕುಶ್ ಗೋಖಲೆ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿ ಸಭಾಂಗಣಕ್ಕೆ ನುಗ್ಗಿ ಕುರ್ಚಿಗಳನ್ನು ಎತ್ತಿ ಬಿಸಾಡಿದರು. ತಹಶೀಲ್ದಾರ್ ಮೇಲೆ ಹಲ್ಲೆ ನಡೆಸಿದರು. ಕಚೇರಿ ಸಿಬ್ಬಂದಿ ಭಯದಿಂದ ಹೊರಗೆ ಓಡಿ ಹೋದರು.