ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ರಾಹಿಂ ಹೇಳಿಕೆಗೆ ಬಿಎಸ್‌ವೈ ತಿರುಗೇಟು

Last Updated 4 ಜೂನ್ 2019, 8:37 IST
ಅಕ್ಷರ ಗಾತ್ರ

ಬೀದರ್: ‘ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಗಂಡಸರು ಯಾರು ಎನ್ನುವುದು ಗೊತ್ತಾಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ನಗರದ ಗಣೇಶ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರ ಚುನಾವಣೆ ಪ್ರಚಾರ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಬಿಜೆಪಿಯಲ್ಲಿ ಗಂಡಸರೇ ಇಲ್ಲ’ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹಿಂ ನೀಡಿದ ಹೇಳಿಕೆಯನ್ನು ಖಂಡಿಸಿದರು.

‘ಕಲಬುರ್ಗಿಯ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ್ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.
ಆಗ ಕಾಂಗ್ರೆಸ್ ನಾಯಕರಿಗೆ ಗಂಡಸರು ಯಾರು ಎನ್ನುವುದು ಗೊತ್ತಾಗಲಿದೆ’ ಎಂದು ಗುಡುಗಿದರು.

‘ಮಂಡ್ಯದಲ್ಲಿ ಸುಮಲತಾ ಹಾಗೂ ಅಂಬರೀಷ್‌ ಅವರನ್ನು ಅವಮಾನಿಸುತ್ತಿರುವ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಜಾತಿ ರಾಜಕಾರಣದ ಮಾತನಾಡಿ ಎಲ್ಲರನ್ನೂ ಅವಮಾನ ಮಾಡುತ್ತಿದ್ದಾರೆ. ಈಗಾಗಲೇ ಜನರು ತಿರುಗಿ ಬಿದ್ದಿದ್ದಾರೆ. ಮಂಡ್ಯದಲ್ಲಿ ಸುಮಲತಾ ಗೆಲುವು ನಿಶ್ಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT