‘ದಲಿತ ಮುಖಂಡ ಬಾಬುರಾವ್ ಪಾಸ್ವಾನ್ ಅವರು ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಏಳಿಗೆಗಾಗಿ ದುಡಿಯುತ್ತಿದ್ದಾರೆ. ಜಿಲ್ಲೆಯ ಹಿಂದುಳಿದ, ದಲಿತರ, ಶೋಷಿತರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದಾರೆ. ದಲಿತರ ಓಣಿಗಳಿಗೆ ತಿರುಗಾಡಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಾಸ್ವಾನ್ ಅವರನ್ನು ಬುಡಾ ಅಧ್ಯಕ್ಷರಾಗಿ ಮಾಡಲಾಗುವುದು ಎಂದು ಸಚಿವ ಖಾನ್ ಹೇಳಿದ್ದರು. ಆದರೆ, ಅವರು ಮಾತು ಉಳಿಸಿಕೊಂಡಿಲ್ಲ. ಅವರ ನಡೆಯಿಂದ ನಿರಾಸೆಯಾಗಿದೆ’ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.