<p><strong>ಬೀದರ್</strong>: ‘ನಾಲ್ಕನೇ ಶತಮಾನದಲ್ಲಿ ಗೌತಮ ಬುದ್ಧ, 12ನೇ ಶತಮಾನದಲ್ಲಿ ಬಸವೇಶ್ವರ ಹಾಗೂ 19ನೇ ಶತಮಾನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾಜದಲ್ಲಿ ಸಮಾನತೆ ಪ್ರತಿಪಾದಿಸಿದ್ದಾರೆ’ ಎಂದು ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಬಸವರಾಜ ಪಾಟೀಲ ಅಷ್ಟೂರ ಹೇಳಿದರು.</p>.<p>ಇಲ್ಲಿಯ ನೌಬಾದ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಕ್ಷಣದ ಮೂಲಕ ಪಡೆದ ಜ್ಞಾನವು ಅಂಬೇಡ್ಕರ್ ಅವರನ್ನು ಇಡೀ ವಿಶ್ವವೇ ಗೌರವಿಸುವಂತೆ ಮಾಡಿತು. ಅಂಬೇಡ್ಕರರು ದಕ್ಷಿಣ ಏಷ್ಯಾದಲ್ಲೇ ಪಿಎಚ್ಡಿ ಪಡೆದ ಮೊದಲಿಗರಾಗಿದ್ದರು. ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಕಾನೂನು, ರಾಜಕೀಯ ತಜ್ಞರಾಗಿದ್ದರು. ಎಲ್ಲ ವಿಷಯಗಳ ಬಗ್ಗೆಯೂ ಅಪಾರ ಜ್ಞಾನ ಹೊಂದಿದ್ದರು’ ಎಂದು ತಿಳಿಸಿದರು.</p>.<p>‘ಅಂಬೇಡ್ಕರ್ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಉನ್ನತ ವ್ಯಕ್ತಿಗಳಾಗಿ ಸಮಾಜಕ್ಕೆ ಕೊಡುಗೆ ನೀಡಲು ಪ್ರಯತ್ನಿಸಬೇಕು’ ಎಂದು ಸಲಹೆ ಮಾಡಿದರು.</p>.<p>‘ಅಂಬೇಡ್ಕರ್ ಓದು ಕಾರ್ಯಕ್ರಮವು ಅಂಬೇಡ್ಕರರ ಜೀವನದ ಮೇಲೆ ಬೆಳಕು ಚೆಲ್ಲುವ ಕಾರ್ಯಕ್ರಮವಾಗಿದೆ’ ಎಂದು ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಹೇಳಿದರು.</p>.<p>‘ಡಾ. ಅಂಬೇಡ್ಕರ್ ಅವರು ಬಡ ಕುಟುಂಬದಲ್ಲಿ ಜನಿಸಿದರೂ, ಶಿಕ್ಷಣದ ಮೂಲಕ ಉತ್ತುಂಗದ ಸ್ಥಾನಕ್ಕೆ ಏರಿದ್ದರು. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಸಂವಿಧಾನ ರಚಿಸಿದ್ದರು. ವಿದ್ಯಾರ್ಥಿಗಳು ಅವರ ಜೀವನ ಚರಿತ್ರೆ ಓದಿ, ಸಾಧನೆಗೆ ಪ್ರೇರಣೆ ಪಡೆಯಬೇಕು’ ಎಂದು ಹೇಳಿದರು.</p>.<p>ಪ್ರಾಚಾರ್ಯ ದಿಲೀಪ ಗಡ್ಡೆ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಐಕ್ಯೂಎಸಿ ಸಂಯೋಜಕ ಶರಣಪ್ಪ ಎಸ್.ಎಂ, ಸಿಬ್ಬಂದಿ ಕಾರ್ಯದರ್ಶಿ ಲಕ್ಷ್ಮಣ ಕಾಂಬಳೆ, ಸಹಾಯಕ ಪ್ರಾಧ್ಯಾಪಕರಾದ ಸುಮನ್ಬಾಯಿ ಸಿಂಧೆ, ವೀರೇಶ ರಾಂಪುರೆ, ರಾಜಕುಮಾರ ಅಲ್ಲೂರೆ ಉಪಸ್ಥಿತರಿದ್ದರು.</p>.<p>ಡಾ. ಅಂಬೇಡ್ಕರ್ ಅವರ ಬದುಕು-ಬರಹ ಕುರಿತು ಸಹ ಪ್ರಾಧ್ಯಾಪಕ ಡಾ. ಶ್ರೀಕಾಂತ ವಿ. ಪಾಟೀಲ ವಿಶೇಷ ಉಪನ್ಯಾಸ ನೀಡಿದರು. ರಘುನಂದಾ ಬಿ., ಅಂಬಿಕಾ ದೇವಿ ನಿರ್ಣಾಯಕರಾಗಿದ್ದರು.</p>.<p>ಜಲಸಂಘ್ವಿಯ ಮಂಜುನಾಥ ಮತ್ತು ತಂಡ ಸುಗಮ ಸಂಗೀತ, ಉಡಮನಳ್ಳಿಯ ಮಂಜುನಾಥ ಹಾಗೂ ತಂಡ ಜಾನಪದ ಗಾಯನ ಹಾಗೂ ಅನಿಲಕುಮಾರ ಮತ್ತು ತಂಡದವರು ದೇಶಭಕ್ತಿ ಗೀತೆ ಪ್ರಸ್ತುತಪಡಿಸಿ ನೆರೆದವರ ಮನಸೂರೆಗೊಂಡರು.</p>.<p>ಬದುಕು ಬರಹ ಕುರಿತು ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಕೃತಿಗಳನ್ನು ಬಹುಮಾನ ರೂಪದಲ್ಲಿ ನೀಡಲಾಯಿತು.</p>.<p>ಸಹ ಪ್ರಾಧ್ಯಾಪಕ ಡಾ. ಶಿವಕುಮಾರ ಉಪ್ಪೆ ಸ್ವಾಗತಿಸಿದರು. ಡಾ. ಲಕ್ಷ್ಮೀಕಾಂತ ಪಾಂಚಾಳ ನಿರೂಪಿಸಿದರು.</p>.<p>ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ 21-22ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಶ್ರೀ ವಿದ್ಯಾಶ್ರೀ ಮಹಿಳಾ ಕಲೆ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ನಾಲ್ಕನೇ ಶತಮಾನದಲ್ಲಿ ಗೌತಮ ಬುದ್ಧ, 12ನೇ ಶತಮಾನದಲ್ಲಿ ಬಸವೇಶ್ವರ ಹಾಗೂ 19ನೇ ಶತಮಾನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾಜದಲ್ಲಿ ಸಮಾನತೆ ಪ್ರತಿಪಾದಿಸಿದ್ದಾರೆ’ ಎಂದು ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಬಸವರಾಜ ಪಾಟೀಲ ಅಷ್ಟೂರ ಹೇಳಿದರು.</p>.<p>ಇಲ್ಲಿಯ ನೌಬಾದ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಕ್ಷಣದ ಮೂಲಕ ಪಡೆದ ಜ್ಞಾನವು ಅಂಬೇಡ್ಕರ್ ಅವರನ್ನು ಇಡೀ ವಿಶ್ವವೇ ಗೌರವಿಸುವಂತೆ ಮಾಡಿತು. ಅಂಬೇಡ್ಕರರು ದಕ್ಷಿಣ ಏಷ್ಯಾದಲ್ಲೇ ಪಿಎಚ್ಡಿ ಪಡೆದ ಮೊದಲಿಗರಾಗಿದ್ದರು. ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಕಾನೂನು, ರಾಜಕೀಯ ತಜ್ಞರಾಗಿದ್ದರು. ಎಲ್ಲ ವಿಷಯಗಳ ಬಗ್ಗೆಯೂ ಅಪಾರ ಜ್ಞಾನ ಹೊಂದಿದ್ದರು’ ಎಂದು ತಿಳಿಸಿದರು.</p>.<p>‘ಅಂಬೇಡ್ಕರ್ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಉನ್ನತ ವ್ಯಕ್ತಿಗಳಾಗಿ ಸಮಾಜಕ್ಕೆ ಕೊಡುಗೆ ನೀಡಲು ಪ್ರಯತ್ನಿಸಬೇಕು’ ಎಂದು ಸಲಹೆ ಮಾಡಿದರು.</p>.<p>‘ಅಂಬೇಡ್ಕರ್ ಓದು ಕಾರ್ಯಕ್ರಮವು ಅಂಬೇಡ್ಕರರ ಜೀವನದ ಮೇಲೆ ಬೆಳಕು ಚೆಲ್ಲುವ ಕಾರ್ಯಕ್ರಮವಾಗಿದೆ’ ಎಂದು ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಹೇಳಿದರು.</p>.<p>‘ಡಾ. ಅಂಬೇಡ್ಕರ್ ಅವರು ಬಡ ಕುಟುಂಬದಲ್ಲಿ ಜನಿಸಿದರೂ, ಶಿಕ್ಷಣದ ಮೂಲಕ ಉತ್ತುಂಗದ ಸ್ಥಾನಕ್ಕೆ ಏರಿದ್ದರು. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಸಂವಿಧಾನ ರಚಿಸಿದ್ದರು. ವಿದ್ಯಾರ್ಥಿಗಳು ಅವರ ಜೀವನ ಚರಿತ್ರೆ ಓದಿ, ಸಾಧನೆಗೆ ಪ್ರೇರಣೆ ಪಡೆಯಬೇಕು’ ಎಂದು ಹೇಳಿದರು.</p>.<p>ಪ್ರಾಚಾರ್ಯ ದಿಲೀಪ ಗಡ್ಡೆ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಐಕ್ಯೂಎಸಿ ಸಂಯೋಜಕ ಶರಣಪ್ಪ ಎಸ್.ಎಂ, ಸಿಬ್ಬಂದಿ ಕಾರ್ಯದರ್ಶಿ ಲಕ್ಷ್ಮಣ ಕಾಂಬಳೆ, ಸಹಾಯಕ ಪ್ರಾಧ್ಯಾಪಕರಾದ ಸುಮನ್ಬಾಯಿ ಸಿಂಧೆ, ವೀರೇಶ ರಾಂಪುರೆ, ರಾಜಕುಮಾರ ಅಲ್ಲೂರೆ ಉಪಸ್ಥಿತರಿದ್ದರು.</p>.<p>ಡಾ. ಅಂಬೇಡ್ಕರ್ ಅವರ ಬದುಕು-ಬರಹ ಕುರಿತು ಸಹ ಪ್ರಾಧ್ಯಾಪಕ ಡಾ. ಶ್ರೀಕಾಂತ ವಿ. ಪಾಟೀಲ ವಿಶೇಷ ಉಪನ್ಯಾಸ ನೀಡಿದರು. ರಘುನಂದಾ ಬಿ., ಅಂಬಿಕಾ ದೇವಿ ನಿರ್ಣಾಯಕರಾಗಿದ್ದರು.</p>.<p>ಜಲಸಂಘ್ವಿಯ ಮಂಜುನಾಥ ಮತ್ತು ತಂಡ ಸುಗಮ ಸಂಗೀತ, ಉಡಮನಳ್ಳಿಯ ಮಂಜುನಾಥ ಹಾಗೂ ತಂಡ ಜಾನಪದ ಗಾಯನ ಹಾಗೂ ಅನಿಲಕುಮಾರ ಮತ್ತು ತಂಡದವರು ದೇಶಭಕ್ತಿ ಗೀತೆ ಪ್ರಸ್ತುತಪಡಿಸಿ ನೆರೆದವರ ಮನಸೂರೆಗೊಂಡರು.</p>.<p>ಬದುಕು ಬರಹ ಕುರಿತು ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಕೃತಿಗಳನ್ನು ಬಹುಮಾನ ರೂಪದಲ್ಲಿ ನೀಡಲಾಯಿತು.</p>.<p>ಸಹ ಪ್ರಾಧ್ಯಾಪಕ ಡಾ. ಶಿವಕುಮಾರ ಉಪ್ಪೆ ಸ್ವಾಗತಿಸಿದರು. ಡಾ. ಲಕ್ಷ್ಮೀಕಾಂತ ಪಾಂಚಾಳ ನಿರೂಪಿಸಿದರು.</p>.<p>ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ 21-22ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಶ್ರೀ ವಿದ್ಯಾಶ್ರೀ ಮಹಿಳಾ ಕಲೆ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>